ಬೆಂಗಳೂರು: ಕೇಂದ್ರ ಸರ್ಕಾರ ನಾಲ್ಕನೇ ಹಂತದ ಲಾಕ್ಡೌನ್ ಜಾರಿ ಮಾಡಿ ಹೊಸ ಮಾರ್ಗಸೂಚಿಯನ್ನು ಹೊರಡಿಸಿದ್ದು, ನೂತನ ಮಾರ್ಗಸೂಚಿ ಅನುಷ್ಠಾನಗೊಳಿಸುವ ವಿಷಯ ಕುರಿತಂತೆ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ , ಬಳಿಕ ಸುದ್ದಿಗೋಷ್ಠಿ ನಡೆಸಿ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರಗಳ ಬಗ್ಗೆ ಮಾಹಿತಿ ನೀಡಿದರು. ಪ್ರಮುಖ ಅಂಶಗಳು ಈ ರೀತಿ ಇವೆ.
- ನಾಳೆ ಬೆಳಿಗ್ಗೆಯಿಂದ ರೆಡ್ ಜೋನ್ ಹಾಗೂ ಕಂಟೈನ್ಮೆಂಟ್ ಜೋನ್ ಹೊರತುಪಡಿಸಿ ಬಿಎಂಟಿಸಿ , ಕೆಎಸ್ಆರ್ ಟಿಸಿ ಬಸ್ ಸಂಚಾರ ಆರಂಭ.
- ಖಾಸಗಿ ಬಸ್ ಗಳು ಪ್ರಯಾಣ ಆರಂಭಿಸಬಹುದು ಆದರೆ 30 ಜನ ಮಾತ್ರ ಪ್ರಯಾಣ ಮಾಡಬೇಕು
- ಸಾಮಾಜಿಕಅಂತರ ಕಾಯ್ದಕೊಳ್ಳಬೇಕು. ಮಾಸ್ಕ್ ಧರಿಸುವುದು ಕಡ್ಡಾಯ
- ಅನಿವಾರ್ಯ ಬಿಟ್ಟು ಬೇರೆ ಕಾರಣಗಳಿಂದ ರಾಜ್ಯಕ್ಕೆ ಜನರ ಬರುವುದನ್ನು ಅವಕಾಶ ನೀಡಲ್ಲ.
- ರೈಲುಗಳಿಗೆ ಅಂತರ ಜಿಲ್ಲೆ ಆರಂಭಕ್ಕೆ ಒಪ್ಪಿಗೆ
- ಆಟೋ ಮತ್ತುಬಟ್ಯಾಕ್ಸಿಗಳ್ಲಿ ಡೈವರ್ ಬಿಟ್ಟು ಇಬ್ಬರು, ಮ್ಯಾಕ್ಸಿ ಕ್ಯಾಬ್ ನಲ್ಲಿ ಡ್ರೈವರ್ ಬಿಟ್ಟು ಮೂವರು ಮಾತ್ರ ಪ್ರಯಾಣಿಸಬೇಕು
- ನಾಳೆಯಿಂದ ಮಾಲ್ ,ಸಿನಿಮಾ, ಹೋಟೇಲ್ ಬಿಟ್ಟು ,ಚಿನ್ನ ಬೆಳ್ಳಿ ಮಾರಾಟಕ್ಕೆ ಅವಕಾಶ
- ಬಸ್ ಪ್ರಯಾಣ ದರ ಹೆಚ್ಚಳ ಮಾಡುವುದಿಲ್ಲ
- ಹೊರ ಜಿಲ್ಲೆ ಮತ್ತು ರಾಜ್ಯಗಳಿಂದ ಬರುವ ಜನರನ್ನು ಕ್ವಾರಂಟೈನ್ ಮಾಡುವ ತೀರ್ಮಾನ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಧಿಕಾರಿಗಳಿಗೆ ಬಿಟ್ಟಿದ್ದು
- ಗರ್ಭಿಣಿಯರು ಮತ್ತು ಮಹಿಳೆಯರಿಗೆ ಆರೋಗ್ಯ ಚಿಕಿತ್ಸೆ ಮತ್ತು ಚಿಕಿತ್ಸೆಗೆ ಇನ್ನಷ್ಟು ಸಹಕಾರ
- ಸಲೂನ್ ಶಾಪ್ ತೆಗೆಯಬಹುದು
- ಭಾನುವಾರ ಮಾತ್ರ ಸಂಪೂರ್ಣ ಲಾಕ್ ಡೌನ್
- ಹೊರ ರಾಜ್ಯದಿಂದ ಬರುವವರಿಗೆ ಹಂತ ಹಂತವಾಗಿ ಸಾಂಸ್ಥಿಕ ಕ್ವಾರಂಟೈನ್ ಮಾಡಲು ತೀರ್ಮಾನ.
ಇದಲ್ಲದೆ ಲಾಕ್ ಡೌನ್ ನಾಲ್ಕನೇ ಹಂತದಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿ ಅಡಿ ಚೆರ್ಚೆ ನಡೆಸಿದ್ದೇವೆ. ಕೆಲವು ತೀರ್ಮಾನ ತೆಗೆದುಕೊಳ್ಳಲಾಗಿದೆ. ಮೇ 31 ರವರೆಗು ಲಾಕ್ ಡೌನ್ ಮುಂದುವರಿಸಲು ನಿರ್ಧರಿಸಲಾಗಿದೆ. ಕಂಟೈನ್ಮೆಂಟ್ ಜೋನ್ ಗಳಲ್ಲಿ ಭದ್ರತೆ ಮತ್ತಷ್ಟು ಹೆಚ್ಚಳ ಮಾಡಲಾಗುವುದು. ಕಾನೂನು ಬಾಹಿರ ಕೆಲಸ ಮಾಡಿದರೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜೊತೆ ಉಪ ಮುಖ್ಯಮಂತ್ರಿಗಳಾದ ಅಶ್ವತ್ಥ್ ನಾರಯಣ್, ಲಕ್ಷ್ಮಣ್ ಸವದಿ, ಗೃಹ ಸಚಿವ ಬೊಮ್ಮಾಯಿ ಮತ್ತಿತರ ಸಚಿವರು ಹಾಗೂ ಹಿರಿಯ ಅಧಿಕಾರಿಗಳಿದ್ದರು.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ