ಮಂಗಳೂರು: ಇಂದು ದುಬೈನಿಂದ ಬಂದ 2 ನೇ ವಿಮಾನದ ಎಲ್ಲಾ ಪ್ರಯಾಣಿಕರನ್ನು ಅತ್ಯುತ್ತಮ ಸೌಕರ್ಯಗಳೊಂದಿಗೆ ಬರಮಾಡಿಕೊಂಡ ದ.ಕ ಜಿಲ್ಲಾಡಳಿತ ಕ್ರಮವನ್ನು ಕರ್ನಾಟಕ ಮುಸ್ಲಿಂ ಜಮಾಅತ್ ಅಭಿನಂದಿಸಿದೆ.
ಈ ಬಗ್ಗೆ ದ.ಕ.ಜಿಲ್ಲಾಡಳಿತ ಮತ್ತು ವಿಮಾನ ನಿಲ್ದಾನದ ಅಧಿಕಾರಿಗಳ ಸೇವೆಯನ್ನು ಶ್ಲಾಫಿಸಿರುವ ರಾಜ್ಯ ಮುಸ್ಲಿಂ ಜಮಾಅತ್ ಸೆಕ್ರಟರಿಯೇಟ್, ಅನಿವಾಸಿ ಕನ್ನಡಿಗರು ತಾಯ್ನಾಡಿಗೆ ವಾಪಸ್ಸಾಗುತ್ತಿರುವ ಈ ಸಂದರ್ಭದಲ್ಲಿ ಅದರಲ್ಲೂ ತಮ್ಮ ಹತ್ತಿರದ ಕುಟುಂಬಿಕರನ್ನೂ ಕಾಣಲು ಸಾಧ್ಯವಾಗದೆ ಕ್ವಾರಂಟೈನ್ ಗೆ ಒಳಪಡುವ ಸ್ಥಿತಿಯಲ್ಲಿ ಈ ರೀತಿಯ ಉತ್ಕೃಷ್ಠ ಸೇವೆ ಮತ್ತು ಸ್ವಾಗತ ಜಿಲ್ಲಾಡಳಿತದಿಂದ ಸಿಗುತ್ತಿರುವುದು ಅನಿವಾಸಿಗಳಲ್ಲಿ ಹರ್ಷ ತಂದಿದೆ ಎಂದು ಸಂಘಟನೆಯ ರಾಜ್ಯ ಪ್ರ.ಕಾರ್ಯದರ್ಶಿ ಶಾಫಿ ಸಅದಿ, ಕಾರ್ಯದರ್ಶಿಗಳಾದ ಹಮೀದ್ ಬಜ್ಪೆ, ಅಶ್ರಫ್ ಕಿನಾರ ತಿಳಿಸಿದ್ದಾರೆ.
ದುಬೈನಿಂದ ಇಂದು ಮರಳಿದ ಹಲವಾರು ಪ್ರಯಾಣಿಕರನ್ನು ಸಂಘಟನೆಯ ಪ್ರತಿನಿಧಿಗಳು ಸಂಪರ್ಕಿಸಿದ್ದು ಅವರೆಲ್ಲರೂ ಜಿಲ್ಲಾಡಳಿತದ ಸೇವೆಯಿಂದ ಸಂತುಷ್ಠರಾಗಿರುವ ಬಗ್ಗೆ ತಿಳಿಸಿದ್ದಾರೆ. ಪಾವತಿ ಕ್ವಾರಂಟೈನಲ್ಲಿರಲು ಸಾಧ್ಯವಾಗದವರಿಗೆ ಯುನಿವರ್ಸಿಟಿ ಕಾಲೇಜಿನ ವಸತಿ ನಿಲಯದಲ್ಲಿ ಉಚಿತ ವ್ಯವಸ್ಥೆ ಮಾಡಿರುವ ಜಿಲ್ಲಾಡಳಿತದ ಕ್ರಮವನ್ನೂ ಸಂಘಟನೆ ಪ್ರಶಂಸಿಸಿದೆ.
ವಿದೇಶದಿಂದ ಬರುವ ಎಲ್ಲಾ ಅನಿವಾಸಿ ಕನ್ನಡಿಗರಿಗೆ ಈ ಸೇವೆ ಇದೇ ರೀತಿ ಮುಂದುವರಿಯಲಿ ಎಂದು ಮಸ್ಲಿಂ ಜಮಾಅತ್ ಮನವಿ ಮಾಡಿದೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ಎಸ್ಡಿಪಿಐ ಹಾವೇರಿ ಜಿಲ್ಲೆ- ನೂತನ ಅಧ್ಯಕ್ಷರಾಗಿ ಜಿಲಾನಿ ಮೇದೂರು ಆಯ್ಕೆ
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಅಜಿಲಮೊಗರು ಹೋಗುವ ರಸ್ತೆಯಲ್ಲಿ ರಾತ್ರಿ ಕಂಡುಬಂದ ಯಮರಕ್ಕಸ,ಭಯಭೀತರಾದ ಕಾರುಚಾಲಕರು: ವೈರಲ್ ಫೇಕ್ ಹರಡಿದ ವಿಘ್ನ ಸಂತೋಷಿಗಳು
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ