ಕಾಠ್ಮಂಡು: ಭಾರತದ ವಿರುದ್ಧ ತೀವ್ರ ವಾಗ್ದಾಳಿಯನ್ನು ಬಹಿರಂಗವಾಗಿಯೇ ಸಾರಿರುವ ನೇಪಾಳ ಪ್ರಧಾನಿ ಕೆಪಿ ಒಲಿ, ಭಾರತದ ವೈರಸ್ ಚೀನಾ ಮತ್ತು ಇಟಲಿಗಿಂತಲೂ ಹೆಚ್ಚು ಮಾರಕವಾಗಿದೆ. ಸಂಸತ್ತಿನಲ್ಲಿ ಭಾರತದ ವಿರುದ್ಧ ಟೀಕೆಗಳ ಸುರಿಮಳೆಯನ್ನೇ ಹರಿಸಿರುವ ಅವರು ತಮ್ಮ ದೇಶದಲ್ಲಿ ಕೊರೋನಾ ವೈರಸ್ ಹರಡಲು ಭಾರತವೇ ಕಾರಣ ಎಂದು ಆರೋಪಿಸಿದ್ದಾರೆ.
ಅತ್ತ ಕೊರೋನಾ ವೈರಸ್ ಹರಡಲು ಚೀನಾವೇ ಕಾರಣ, ಅದರಿಂದಾಗಿಯೇ ತಮ್ಮ ದೇಶಕ್ಕೆ ಇಂದು ಈ ದುಸ್ಥಿತಿ ಬಂದಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚೀನಾದ ವಿರುದ್ಧ ಕಿಡಿ ಕಾರುತ್ತಿದ್ದರೆ ಇತ್ತ ನೇಪಾಳ ಪ್ರಧಾನಿ ಭಾರತದ ಮೇಲೆ ಬೆರಳು ಮಾಡಿ ತೋರಿಸುತ್ತಿದ್ದಾರೆ.
ಅಕ್ರಮವಾಗಿ ಭಾರತದಿಂದ ನೇಪಾಳದೊಳಗೆ ಪ್ರವೇಶಿಸುವವರು ಇಲ್ಲಿ ಕೊರೋನಾ ವೈರಸ್ ಹಬ್ಬಿಸುತ್ತಿದ್ದು ಇಲ್ಲಿನ ಕೆಲವು ಸ್ಥಳೀಯ ರಾಜಕೀಯ ನಾಯಕರು ಮತ್ತು ಪಕ್ಷಗಳ ಕಾರ್ಯಕರ್ತರ ಕುತಂತ್ರದಿಂದ ಭಾರತದಿಂದ ಇಲ್ಲಿಗೆ ಬರುವವರನ್ನು ಸರಿಯಾಗಿ ಪರೀಕ್ಷೆ ಮಾಡದೆ ಒಳಗೆ ಕರೆಸಿಕೊಳ್ಳಲಾಗುತ್ತಿದೆ ಎಂದು ನಿನ್ನೆ ಸಂಸತ್ತಿನಲ್ಲಿ ತಮ್ಮ ಭಾಷಣದಲ್ಲಿ ಹೇಳಿದ್ದಾರೆ.
ಹೊರಗಿನಿಂದ ಬರುವವರ ಸಂಖ್ಯೆ ಹೆಚ್ಚಾಗಿರುವವರಿಂದಾಗಿ ಕೊರೋನಾ ವೈರಸ್ ನ್ನು ನಿಯಂತ್ರಿಸುವುದು ಬಹಳ ಕಷ್ಟವಾಗುತ್ತಿದೆ.ಭಾರತದ ವೈರಸ್ ಚೀನಾ ಮತ್ತು ಇಟಲಿಗಿಂತಲೂ ಅಪಾಯಕಾರಿ. ಇಲ್ಲಿ ಹೆಚ್ಚಿನವರು ಸೋಂಕಿಗೊಳಗಾಗುತ್ತಿದ್ದಾರೆ ಎಂದು ಹೇಳಿದ್ದಾರೆ. ಇದು ಸಹಜವಾಗಿಯೇ ಭಾರತದಲ್ಲಿನ ಅಧಿಕಾರಿಗಳು ಮತ್ತು ಕೇಂದ್ರ ಸರ್ಕಾರಕ್ಕೆ ಸಿಟ್ಟು ತರಿಸಿದೆ.
ಭಾರತ ಮತ್ತು ನೇಪಾಳ ನಡುವೆ ಹೊಸ ರಸ್ತೆಯನ್ನು ಆರಂಭಿಸಿದ ನಂತರ ನೇಪಾಳ ಭಾರತದ ಮೇಲೆ ತಗಾದೆಯೆತ್ತಲು ಆರಂಭಿಸಿದೆ. ಭಾರತದ ಪ್ರಾಂತ್ಯದೊಳಗೆ ಸೇರಿಕೊಂಡಿರುವ ಕಲಾಪಣಿ-ಲಿಂಪಿಯಾಡುರಾ-ಲಿಪುಲೆಖ್ ಪ್ರದೇಶವನ್ನು ಮತ್ತೆ ತರುವ ಪ್ರಯತ್ನವನ್ನು ಶತಾಯಗತಾಯ ಮುಂದುವರಿಸುತ್ತೇವೆ ಎಂದು ಕೂಡ ಕೆಪಿ ಒಲಿ ಶಪಥ ಮಾಡಿದ್ದಾರೆ.
ಭಾರತದ ಪ್ರಾಂತ್ಯದೊಳಗೆ ಸೇರಿರುವ ಲಿಂಪಿಯಾಧುರಾ, ಲಿಪುಲೆಖ್, ಮತ್ತು ಕಲಾಪಣಿ ಪ್ರದೇಶಗಳು ನೇಪಾಳದ್ದು ಎಂದು ಸಾರಿ ಹೊಸ ರಾಜಕೀಯ ಭೂನಕ್ಷೆಗೆ ನೇಪಾಳ ಸರ್ಕಾರದ ಸಂಪುಟ ಶಿಫಾರಸು ಮಾಡಿತ್ತು.
ಭಾರತ ಮತ್ತು ನೇಪಾಳ 1,800 ಕಿಮೀ (1,118 ಮೈಲಿ) ಮುಕ್ತ ಗಡಿಯನ್ನು ಹಂಚಿಕೊಂಡಿವೆ. 1,816 ರ ಸುಗಾಲಿ ಒಪ್ಪಂದದ ಆಧಾರದ ಮೇಲೆ ಲಿಪುಲೆಖ್ ಪಾಸ್ ಮೇಲೆ ನೇಪಾಳ ಹಕ್ಕು ಸಾಧಿಸಿದೆ.















ಇನ್ನಷ್ಟು ಸುದ್ದಿಗಳು
ಇರಾನ್ ಮೇಲೆ ಮತ್ತೆ ಯುಎಸ್ ದಾಳಿ; ಬಂದರ್ ಅಬ್ಬಾಸ್ ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ಬಾಂಬ್ ದಾಳಿ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ
ವಿಕಾಸದ ಕೂಗಿನೊಂದಿಗೆ ಇತ್ತಿಹಾದ್ ರೈಲು; ಟಿಕೆಟ್ ದರ ಮತ್ತು ರಿಯಾಯಿತಿಗಳ ಘೋಷಣೆ
ಯುಎಇ: ಮುಂದುವರಿದ ಭಾರತೀಯ ಪಾಸ್ಪೋರ್ಟ್ ಸೇವಾ ಬಿಕ್ಕಟ್ಟು
ಇತ್ತಿಹಾದ್ ರೈಲಿಗೆ ಐತಿಹಾಸಿಕ ಕ್ಷಣ; ಭವ್ಯ ಆರಂಭಕ್ಕೆ ಯುಎಇನಲ್ಲಿ ಅಭೂತಪೂರ್ವ ಜನಸ್ಪಂದನ
ವಲಸಿಗರಿಗೆ ಶುಭ ಸುದ್ದಿ: ಸೌದಿ ವರ್ಕ್ ಪರ್ಮಿಟ್ ಸ್ಥಿತಿ ಸರಿಪಡಿಸಿಕೊಳ್ಳುವ ಗಡುವು ವಿಸ್ತರಣೆ
‘ಅವನು ಬದುಕಿದ್ದರೆ ನಾನು ಕೂಡ ಬದುಕುತ್ತೇನೆ’; ಭೂಕಂಪದ ಅವಶೇಷಗಳ ನಡುವೆ ಮರಣವನ್ನೇ ಗೆದ್ದು ಬಂದ ತಾಯಿ ಮತ್ತು 18 ದಿನದ ಮಗು!
ದಾಳಿಗಳು ಮುಂದುವರಿದರೆ ‘ನರಕಸದೃಶ’ ತಿರುಗೇಟು ನೀಡಲಾಗುವುದು- ಇರಾನ್ ಎಚ್ಚರಿಕೆ
ಮತ್ತೆ ಯುದ್ಧವೇ? – ಎರಡನೇ ದಿನವೂ ಇರಾನ್ ಮೇಲೆ ಯುಎಸ್ ದಾಳಿ
ಬಹ್ರೇನ್ ಮೇಲೆ ಇರಾನ್ ಡ್ರೋನ್ ದಾಳಿ: ಸೌದಿ ಅರೇಬಿಯಾ ತೀವ್ರ ಖಂಡನೆ- ಪೂರ್ಣ ಬೆಂಬಲ ಘೋಷಣೆ