janadhvani

Kannada Online News Paper

ಎಸ್ಸೆಸ್ಸೆಫ್ ರಾಜ್ಯ ಮಟ್ಟದ ‘ತರ್ತೀಲ್’ ನಾಳೆ ಸಮಾರೋಪ

ಮಂಗಳೂರು: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಪೆಢರೇಶನ್ ಕ್ಯಾಂಪಸ್ ಹಾಗೂ ವಿಸ್ಡಂ ವಿಭಾಗವು ಕ್ಯಾಂಪಸ್ ವಿದ್ಯಾರ್ಥಿಗಳಿಗೆ ಈ ಲಾಕ್ ಡೌನ್ ಸಮಯದಲ್ಲಿ ಆನ್ ಲೈನ್ ಮೂಲಕ ನಡೆಸಿದ ರಾಜ್ಯ ಮಟ್ಟದ ತರ್ತೀಲ್ ಸ್ಪರ್ಧೆಗಳ ಸಮಾರೋಪ ಸಮಾರಂಭವು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಸಯ್ಯಿದ್ ಸಿಟಿಎಂ ಉಮ್ಮರ್ ಅಸ್ಸಖಾಫ್ ತಂಙಳ್ ಮದನಿರವರ ಅಧ್ಯಕ್ಷತೆಯಲ್ಲಿ ಮೇ 22 ಶುಕ್ರವಾರ ಬೆಳಿಗ್ಗೆ 10:30 ಗಂಟೆಗೆ ಆನ್ಲೈನ್ ನಲ್ಲಿ ನಡೆಯಲಿರುವುದು.

ಎಸ್.ವೈ.ಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ ಅಬ್ದುರ್ರಶೀದ್ ಝೈನಿ ಸಖಾಫಿ ಕಾಮಿಲ್ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು. ಹಝ್ರತ್ ಡಾ ಮುಹಮ್ಮದ್ ಫಾಝಿಲ್ ರಝ್ವಿ ಕಾವಲ್ಕಟ್ಟೆ ದುಆ: ಗೆ ನೇತೃತ್ವ ನೀಡಲಿರುವರು.

ಎಸ್ಸೆಸ್ಸೆಫ್ ರಾಷ್ಟ್ರೀಯ ಅಧ್ಯಕ್ಷ ಶೌಕತ್ ನಈಮಿ ಬುಖಾರಿ ಅಭಿನಂದನಾ ಭಾಷಣ ಮಾಡಿ,ತರ್ತೀಲ್ ರಾಜ್ಯ ಮಟ್ಟದ ವಿಜೇತರನ್ನು ಘೋಷಣೆ ಮಾಡಲಿರುವರು.

ಸುನ್ನೀ ಕೋಆರ್ಡಿನೇಶನ್ ಚಯರ್ ಮ್ಯಾನ್ ಎಸ್.ಪಿ ಹಂಝ ಸಖಾಫಿ ಬಂಟ್ವಾಳ,ಪ್ರಧಾನ ಕಾರ್ಯದರ್ಶಿ ಪಿಪಿ ಮುಹಮ್ಮದ್ ಸಖಾಪಿ ,ಎಸ್.ವೈ.ಎಸ್ ವೆಲ್ಫೇರ್ ರಾಜ್ಯ ಚಯರ್ ಮ್ಯಾನ್ ಜಿ.ಎಂ ಮುಹಮ್ಮದ್ ಕಾಮಿಲ್ ಸಖಾಫಿ, ಇಶಾರ ಪಾಕ್ಷಿಕದ ಪ್ರಧಾನ ಸಂಪಾದಕ ಕೆ.ಎಂ ಅಬೂಬಕ್ಕರ್ ಸಿದ್ದೀಕ್ ಮೋಂಟುಗೋಳಿ, ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಕೂಬ್ ಮಾಸ್ಟರ್,ಕೋಶಾಧಿಕಾರಿ ರವೂಫ್ ಖಾನ್, ಡಪ್ಯುಟಿ ಪ್ರೆಸಿಡಂಟ್ ಹಝ್ರತ್ ಗುಲಾಮುದ್ದೀನ್ ನೂರಿ,ಎಸ್ಸೆಸ್ಸೆಫ್ ರಾಜ್ಯ ನಿಕಟ ಪೂರ್ವ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ನಾವುಂದ, ರಾಜ್ಯ ಕಾರ್ಯದರ್ಶಿಗಳಾದ ಹಾಫಿಳ್ ಯಾಕೂಬ್ ಸಅದಿ ನಾವೂರು,ಕೆ.ಎಂ ಮುಸ್ತಫಾ ನಈಮಿ ಹಾವೇರಿ,ಸಿರಾಜುದ್ದೀನ್ ಸಖಾಫಿ ಕನ್ಯಾನ,ಅಶ್ರಫ್ ರಝಾ ಅಂಜದಿ, ಹುಸೈನ್ ಸಅದಿ ಹೊಸ್ಮಾರ್,ನವಾಝ್ ಭಟ್ಕಳ ,ಮೊದಲಾದವರು ಭಾಗವಹಿಸಿ ಅಭಿನಂದನಾ ಭಾಷಣ ಮಾಡಲಿರುವರು ಎಂದು ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !! Not allowed copy content from janadhvani.com