ಮಂಗಳೂರು: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಪೆಢರೇಶನ್ ಕ್ಯಾಂಪಸ್ ಹಾಗೂ ವಿಸ್ಡಂ ವಿಭಾಗವು ಕ್ಯಾಂಪಸ್ ವಿದ್ಯಾರ್ಥಿಗಳಿಗೆ ಲಾಕ್ ಡೌನ್ ಸಮಯದಲ್ಲಿ ಆನ್ ಲೈನ್ ಮೂಲಕ ನಡೆಸಿದ ರಾಜ್ಯ ಮಟ್ಟದ ತರ್ತೀಲ್ ಸ್ಪರ್ಧೆಗಳ ಸಮಾರೋಪ ಸಮಾರಂಭವು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಸಯ್ಯಿದ್ ಸಿಟಿಎಂ ಉಮ್ಮರ್ ಅಸ್ಸಖಾಫ್ ತಂಙಳ್ ಮದನಿರವರ ಅಧ್ಯಕ್ಷತೆಯಲ್ಲಿ ಆನ್ಲೈನ್ ನಲ್ಲಿ ನಡೆಯಿತು.
ಎಸ್.ವೈ.ಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ ಅಬ್ದುರ್ರಶೀದ್ ಝೈನಿ ಸಖಾಫಿ ಕಾಮಿಲ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಸಯ್ಯಿದ್ ಹಾಮಿಮ್ ಶಿಹಾಬ್ ತಂಙಳ್ ಬಾಳೆಹೊನ್ನೂರು ದುಆಗೆ ನೇತೃತ್ವ ನೀಡಿದರು.
ಎಸ್ಸೆಸ್ಸೆಫ್ ರಾಷ್ಟ್ರೀಯ ಉಪಾಧ್ಯಕ್ಷ ಶುಹೈರುದ್ದೀನ್ ನೂರಾನಿ ಅಭಿನಂದನಾ ಭಾಷಣ ಮಾಡಿ,ತರ್ತೀಲ್ ರಾಜ್ಯ ಮಟ್ಟದ ವಿಜೇತರನ್ನು ಘೋಷಣೆ ಮಾಡಿದರು.
ಎಸ್ಸೆಸ್ಸೆಫ್ ಮುಖವಾಣಿ ಇಶಾರ ಪಾಕ್ಷಿಕದ ಪ್ರಧಾನ ಸಂಪಾದಕ ಕೆ.ಎಂ ಅಬೂಬಕ್ಕರ್ ಸಿದ್ದೀಕ್ ಮೋಂಟುಗೋಳಿ ಸಮಾರೋಪ ಭಾಷಣ ಮಾಡಿದರು.
ಕರ್ನಾಟಕ ಮುಸ್ಲಿಂ ಜಮಾಅತ್ ಪ್ರಧಾನ ಕಾರ್ಯದರ್ಶಿ ಎನ್.ಕೆ.ಎಂ ಶಾಫಿ ಸಅದಿ ಬೆಂಗಳೂರು, ಸುನ್ನೀ ಕೋಆರ್ಡಿನೇಶನ್ ಪ್ರಧಾನ ಕಾರ್ಯದರ್ಶಿ ಪಿಪಿ ಮುಹಮ್ಮದ್ ಸಖಾಪಿ ,ಎಸ್.ವೈ.ಎಸ್ ವೆಲ್ಫೇರ್ ರಾಜ್ಯ ಚಯರ್ ಮ್ಯಾನ್ ಜಿ.ಎಂ ಮುಹಮ್ಮದ್ ಕಾಮಿಲ್ ಸಖಾಫಿ, ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಕೂಬ್ ಮಾಸ್ಟರ್,ಕೋಶಾಧಿಕಾರಿ ರವೂಫ್ ಖಾನ್,ಡಪ್ಯುಟಿ ಪ್ರೆಸಿಡಂಟ್ ಹಝ್ರತ್ ಗುಲಾಮುದ್ದೀನ್ ನೂರಿ,ಎಸ್ಸೆಸ್ಸೆಫ್ ರಾಜ್ಯ ನಿಕಟ ಪೂರ್ವ ಅಧ್ಯಕ್ಷ ಇಸ್ಮಾಯಿಲ್ ಸಖಾಫಿ ಕೊಂಡಂಗೇರಿ,ಎಸ್ಸೆಸ್ಸೆಫ್ ರಾಜ್ಯ ಮಾಜಿ ಅಧ್ಯಕ್ಷ ಹಫೀಲ್ ಸಅದಿ ಕೊಡಗು, ಮಾಜಿ ಪ್ರಧಾನ ಕಾರ್ಯದರ್ಶಿ ಸಾದಿಕ್ ಮಾಸ್ಟರ್ ಮಲೆಬೆಟ್ಟು,ನಿಕಟ ಪೂರ್ವ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ನಾವುಂದ, ರಾಜ್ಯ ಉಪಾಧ್ಯಕ್ಷ ಸುಫ್ಯಾನ್ ಸಖಾಫಿ ಕಾವಲ್ಕಟ್ಟೆ, ರಾಜ್ಯ ಕಾರ್ಯದರ್ಶಿಗಳಾದ ಹಾಫಿಳ್ ಯಾಕೂಬ್ ಸಅದಿ ನಾವೂರು,ಕೆ.ಎಂ ಮುಸ್ತಫಾ ನಈಮಿ ಹಾವೇರಿ,ಸಿರಾಜುದ್ದೀನ್ ಸಖಾಫಿ ಕನ್ಯಾನ,ಅಶ್ರಫ್ ರಝಾ ಅಂಜದಿ,ಹುಸೈನ್ ಸಅದಿ ಹೊಸ್ಮಾರ್,ನವಾಝ್ ಭಟ್ಕಳ ,ಮೊದಲಾದವರು ಭಾಗವಹಿಸಿ ಸಂದೇಶ ಭಾಷಣ ಮಾಡಿದರು.
ರಾಜ್ಯ ಮಟ್ಟದ ಆನ್ಲೈನ್ ತರ್ತೀಲ್ ಸ್ಫರ್ಧೆಯಲ್ಲಿ ಎಸ್ಸೆಸ್ಸೆಫ್ ದ.ಕ ಜಿಲ್ಲೆ ಚಾಂಪಿಯನ್ ಆಗಿಯೂ,ಎಸ್ಸೆಸ್ಸೆಫ್ ಉಡುಪಿ ಜಿಲ್ಲೆ ದ್ವಿತೀಯ ಸ್ಥಾನವನ್ನೂ,ಎಸ್ಸೆಸ್ಸೆಫ್ ಬೆಂಗಳೂರು ಜಿಲ್ಲೆ ತೃತೀಯ ಸ್ಥಾನವನ್ನೂ ಪಡೆಯಿತು.
ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು ಸ್ವಾಗತಿಸಿದರು.ಸಪ್ವಾನ್ ಚಿಕ್ಕಮಂಗಳೂರು ಕಾರ್ಯಕ್ರಮ ನಿರೂಪಿಸಿದರು.ಮುಸ್ತಫಾ ಮಾಸ್ಟರ್ ಉಳ್ಳಾಲ ದನ್ಯವಾದಗೈದರು.