ಮಂಗಳೂರು:ಕೋವಿಡ್19 ಹರಡುವಿಕೆಯ ನೆಪದಲ್ಲಿ ನಗರದ ಕೇಂದ್ರ ಮಾರುಕಟ್ಟೆಯಲ್ಲಿದ್ದ ಸಗಟು ವ್ಯಾಪಾರಸ್ಥರನ್ನು ಬೈಕಂಪಾಡಿ ಎಪಿಎಂಸಿ ಯಾರ್ಡ್ಗೆ ತಾತ್ಕಾಲಿಕ ಸ್ಥಳಾಂತರಿಸಲಾಗಿದೆ.
ಮೂಲಸೌಕರ್ಯವಿಲ್ಲದೆ ಅಲ್ಲಿ ವ್ಯಾಪಾರ ಮಾಡಲು ಕಷ್ಟವಾಗಿದ್ದು, ಪ್ರತ್ಯೇಕ ವ್ಯವಸ್ಥೆ ಮಾಡದಿದ್ದಲ್ಲಿ ಮುಂದಿನ ದಿನಗಳಲ್ಲಿ ಸಮಾನ ಮನಸ್ಕ ಸಂಘಟನೆಗಳನ್ನು ಒಗ್ಗೂಡಿಸಿ ಪ್ರಬಲ ಹೋರಾಟ ಮಾಡಲಾಗುವುದು ಎಂದು ಕೇಂದ್ರ ಮಾರುಕಟ್ಟೆ ವ್ಯಾಪಾರಸ್ಥರ ಸಂಘದ ಕಾರಾರಯಧ್ಯಕ್ಷ ಸುನೀಲ್ ಕುಮಾರ್ ಬಜಾಲ್ ಹೇಳಿದರು.
ನಗರದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೈಕಂಪಾಡಿಯಲ್ಲಿ ಮೂಲ ವ್ಯವಸ್ಥೆಯೇ ಮಾಡದೆ ವ್ಯಾಪಾರಿಗಳ ಮೇಲೆ ಜಿಲ್ಲಾಡಳಿತ ತೀರ್ಮಾನಗಳನ್ನು ಹೇರುತ್ತಾ ಹೋಗಿದೆ. ಮೊದಲ ಮಳೆಗೆ ತರಕಾರಿಗಳು ಕೆಸರು ನೀರಿನಲ್ಲಿ ತೇಲುತ್ತಿದೆ. ಇದರಿಂದ ಸುಮಾರು 50 ಲಕ್ಷ ರೂ. ನಷ್ಟ ಸಂಭವಿಸಿದೆ ಎಂದರು.

ಬಂದ್ ಮಾಡಿ ಪ್ರತಿಭಟನೆ: ಸಗಟು ವ್ಯಾಪಾರಿಗೆ ಜಿಲ್ಲಾಡಳಿತ ಬೇರೆಡೆ ವ್ಯವಸ್ಥೆ ಮಾಡುವವರೆಗೆ ಕೇಂದ್ರ ಮಾರುಕಟ್ಟೆಯಲ್ಲಿಯೇ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಬೇಕು. ಮಳೆಯಿಂದ 50 ಲಕ್ಷ ರೂ. ನಷ್ಟವಾಗಿದ್ದು ಅದಕ್ಕೆ ಪರಿಹಾರ ನೀಡಬೇಕು. ತಮ್ಮ ಬೇಡಿಕೆ ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಮಾರುಕಟ್ಟೆ ಬಂದ್ ಮಾಡಿ ಪ್ರತಿಭಟಿಸಲಾಗುವುದು ಎಂದು ಸುನೀಲ್ ಕುಮಾರ್ ಹೇಳಿದರು.
ಕೇಂದ್ರ ಮಾರುಕಟ್ಟೆ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಮುಸ್ತಫ ಕುಂಞಿ ಮಾತನಾಡಿ, ಎಪಿಎಂಸಿ ಯಾರ್ಡ್ನ ಬಳಿ ರಾಸಾಯನಿಕ ಕಾರ್ಖಾನೆಗಳು ಇರುವ ತನಕ ತರಕಾರಿ, ಹಣ್ಣುಗಳು ಒಂದು ದಿನಕ್ಕಿಂತ ಜಾಸ್ತಿ ಉಳಿಯುವುದಿಲ್ಲ. ಬೈಕಂಪಾಡಿಗೆ ಹೋದ ಬಳಿಕ ವ್ಯಾಪಾರಿಗಳು ನಷ್ಟ ಅನುಭವಿದ್ದೇ ಹೆಚ್ಚು. ಬಂದರಿನ ದಿನಸಿ ವ್ಯಾಪಾರಿಗಳು, ಅಡಕೆ ವ್ಯಾಪಾರಿಗಳಿಗೆ ಮೀಸಲಿಟ್ಟ ಎಪಿಎಂಸಿ ಯಾರ್ಡ್ಗೆ ಅವರೇ ಹೋಗದಿರುವಾಗ ನಮ್ಮನ್ನು ಯಾಕೆ ಒತ್ತಡದಲ್ಲಿ ಕಳುಹಿಸಿಕೊಟ್ಟು ಸಂದಿಗ್ಧ ಸ್ಥಿತಿಗೆ ಹಾಕಿದರು. ಇದರಿಂದ ಸಗಟು ಮತ್ತು ಚಿಲ್ಲರೆ ವ್ಯಾಪಾರಿಗಳು ಸೇರಿದಂತೆ 598 ವ್ಯಾಪಾರಸ್ಥರು ಅತಂತ್ರರಾಗಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಜನಾರ್ದನ ಸಾಲಿಯಾನ್, ಗೌರವ ಸಲಹೆಗಾರ ಅನಿಲ್ ಕುಮಾರ್, ಉಪಾಧ್ಯಕ್ಷೆ ಗ್ರೇಸಿ ಫರ್ನಾಂಡಿಸ್, ಪ್ರಧಾನ ಕಾರ್ಯದರ್ಶಿ ಗಣೇಶ್, ಮುಸ್ತಾಕ್ ಮತ್ತಿತರರು ಉಪಸ್ಥಿತರಿದ್ದರು















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್