ದುಬೈ: ಚಾರ್ಟರ್ಡ್ ವಿಮಾನಗಳ ಹೆಸರಲ್ಲಿ ನಡೆಯುವ ವಂಚನಾ ಜಾಲದ ಬಗ್ಗೆ ಎಚ್ಚರ ವಹಿಸುವಂತೆ ದುಬೈನ ಭಾರತೀಯ ದೂತಾವಾಸ ತಿಳಿಸಿದೆ. ಚಾರ್ಟರ್ಡ್ ವಿಮಾನಗಳ ಹೆಸರಲ್ಲಿ ಪ್ರಯಾಣಿಕರನ್ನು ಮೋಸಗೊಳಿಸಲು ಕೆಲವು ಟ್ರಾವೆಲ್ ಏಜೆನ್ಸಿಗಳು ಮತ್ತು ವ್ಯಕ್ತಿಗಳು ಪ್ರಯತ್ನಿಸುತ್ತಿರುವುದು ಗಮನಕ್ಕೆ ಬಂದಿದೆ ಎಂದು ಭಾರತೀಯ ದೂತಾವಾಸ ತಿಳಿಸಿದೆ.
ವಿಶೇಷ ವಿಮಾನ ಮೂಲಕ ಭಾರತಕ್ಕೆ ತಲುಪಿಸಲಾಗುವುದು ಮತ್ತು ಇದಕ್ಕಾಗಿ ಮುಂಗಡ ಹಣ ಪಾವತಿಸಬೇಕೆಂದು ಕೆಲವು ಟ್ರಾವೆಲ್ ಏಜೆನ್ಸಿಗಳು ಮತ್ತು ಸಂಬಂಧಿತ ಸಿಬ್ಬಂದಿಗಳು ಪ್ರಯಾಣಿಕರನ್ನು ನಂಬಿಸಿದ್ದಾರೆ.ಊರಿನ ಕ್ವಾರಂಟೇನ್ ಕೇಂದ್ರಕ್ಕೆಂದು ಹೇಳಿ ಪ್ರಯಾಣಿಕರಿಂದ ಹಣ ವಸೂಲು ಮಾಡುತ್ತಿದ್ದಾರೆ.ಇಂತಹಾ ಚಾರ್ಟರ್ಡ್ ವಿಮಾನಗಳಿಗೆ ಭಾರತ ಇನ್ನೂ ಅನುಮತಿ ನೀಡಿಲ್ಲ. ಅನುಮೋದನೆಗಾಗಿ ಚರ್ಚೆಗಳು ನಡೆಯುತ್ತಿವೆ. ಅನುಮೋದನೆ ದೊರೆತ ಕೂಡಲೇ ದೂತಾವಾಸವು ಆ ಬಗ್ಗೆ ಮಾಹಿತಿ ನೀಡಲಿದೆ ಎಂದು ದುಬೈನ ಭಾರತೀಯ ರಾಯಭಾರಿ ಕಚೇರಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ. ಇಂತಹ ಹಗರಣಗಳಿಗೆ ಬಲಿಯಾಗದಂತೆ ಎಚ್ಚರಿಸಿದೆ.















ಇನ್ನಷ್ಟು ಸುದ್ದಿಗಳು
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ