ದುಬೈ: ಚಾರ್ಟರ್ಡ್ ವಿಮಾನಗಳ ಹೆಸರಲ್ಲಿ ನಡೆಯುವ ವಂಚನಾ ಜಾಲದ ಬಗ್ಗೆ ಎಚ್ಚರ ವಹಿಸುವಂತೆ ದುಬೈನ ಭಾರತೀಯ ದೂತಾವಾಸ ತಿಳಿಸಿದೆ. ಚಾರ್ಟರ್ಡ್ ವಿಮಾನಗಳ ಹೆಸರಲ್ಲಿ ಪ್ರಯಾಣಿಕರನ್ನು ಮೋಸಗೊಳಿಸಲು ಕೆಲವು ಟ್ರಾವೆಲ್ ಏಜೆನ್ಸಿಗಳು ಮತ್ತು ವ್ಯಕ್ತಿಗಳು ಪ್ರಯತ್ನಿಸುತ್ತಿರುವುದು ಗಮನಕ್ಕೆ ಬಂದಿದೆ ಎಂದು ಭಾರತೀಯ ದೂತಾವಾಸ ತಿಳಿಸಿದೆ.
ವಿಶೇಷ ವಿಮಾನ ಮೂಲಕ ಭಾರತಕ್ಕೆ ತಲುಪಿಸಲಾಗುವುದು ಮತ್ತು ಇದಕ್ಕಾಗಿ ಮುಂಗಡ ಹಣ ಪಾವತಿಸಬೇಕೆಂದು ಕೆಲವು ಟ್ರಾವೆಲ್ ಏಜೆನ್ಸಿಗಳು ಮತ್ತು ಸಂಬಂಧಿತ ಸಿಬ್ಬಂದಿಗಳು ಪ್ರಯಾಣಿಕರನ್ನು ನಂಬಿಸಿದ್ದಾರೆ.ಊರಿನ ಕ್ವಾರಂಟೇನ್ ಕೇಂದ್ರಕ್ಕೆಂದು ಹೇಳಿ ಪ್ರಯಾಣಿಕರಿಂದ ಹಣ ವಸೂಲು ಮಾಡುತ್ತಿದ್ದಾರೆ.ಇಂತಹಾ ಚಾರ್ಟರ್ಡ್ ವಿಮಾನಗಳಿಗೆ ಭಾರತ ಇನ್ನೂ ಅನುಮತಿ ನೀಡಿಲ್ಲ. ಅನುಮೋದನೆಗಾಗಿ ಚರ್ಚೆಗಳು ನಡೆಯುತ್ತಿವೆ. ಅನುಮೋದನೆ ದೊರೆತ ಕೂಡಲೇ ದೂತಾವಾಸವು ಆ ಬಗ್ಗೆ ಮಾಹಿತಿ ನೀಡಲಿದೆ ಎಂದು ದುಬೈನ ಭಾರತೀಯ ರಾಯಭಾರಿ ಕಚೇರಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ. ಇಂತಹ ಹಗರಣಗಳಿಗೆ ಬಲಿಯಾಗದಂತೆ ಎಚ್ಚರಿಸಿದೆ.















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ