ದುಬೈ: ಚಾರ್ಟರ್ಡ್ ವಿಮಾನಗಳ ಹೆಸರಲ್ಲಿ ನಡೆಯುವ ವಂಚನಾ ಜಾಲದ ಬಗ್ಗೆ ಎಚ್ಚರ ವಹಿಸುವಂತೆ ದುಬೈನ ಭಾರತೀಯ ದೂತಾವಾಸ ತಿಳಿಸಿದೆ. ಚಾರ್ಟರ್ಡ್ ವಿಮಾನಗಳ ಹೆಸರಲ್ಲಿ ಪ್ರಯಾಣಿಕರನ್ನು ಮೋಸಗೊಳಿಸಲು ಕೆಲವು ಟ್ರಾವೆಲ್ ಏಜೆನ್ಸಿಗಳು ಮತ್ತು ವ್ಯಕ್ತಿಗಳು ಪ್ರಯತ್ನಿಸುತ್ತಿರುವುದು ಗಮನಕ್ಕೆ ಬಂದಿದೆ ಎಂದು ಭಾರತೀಯ ದೂತಾವಾಸ ತಿಳಿಸಿದೆ.
ವಿಶೇಷ ವಿಮಾನ ಮೂಲಕ ಭಾರತಕ್ಕೆ ತಲುಪಿಸಲಾಗುವುದು ಮತ್ತು ಇದಕ್ಕಾಗಿ ಮುಂಗಡ ಹಣ ಪಾವತಿಸಬೇಕೆಂದು ಕೆಲವು ಟ್ರಾವೆಲ್ ಏಜೆನ್ಸಿಗಳು ಮತ್ತು ಸಂಬಂಧಿತ ಸಿಬ್ಬಂದಿಗಳು ಪ್ರಯಾಣಿಕರನ್ನು ನಂಬಿಸಿದ್ದಾರೆ.ಊರಿನ ಕ್ವಾರಂಟೇನ್ ಕೇಂದ್ರಕ್ಕೆಂದು ಹೇಳಿ ಪ್ರಯಾಣಿಕರಿಂದ ಹಣ ವಸೂಲು ಮಾಡುತ್ತಿದ್ದಾರೆ.ಇಂತಹಾ ಚಾರ್ಟರ್ಡ್ ವಿಮಾನಗಳಿಗೆ ಭಾರತ ಇನ್ನೂ ಅನುಮತಿ ನೀಡಿಲ್ಲ. ಅನುಮೋದನೆಗಾಗಿ ಚರ್ಚೆಗಳು ನಡೆಯುತ್ತಿವೆ. ಅನುಮೋದನೆ ದೊರೆತ ಕೂಡಲೇ ದೂತಾವಾಸವು ಆ ಬಗ್ಗೆ ಮಾಹಿತಿ ನೀಡಲಿದೆ ಎಂದು ದುಬೈನ ಭಾರತೀಯ ರಾಯಭಾರಿ ಕಚೇರಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ. ಇಂತಹ ಹಗರಣಗಳಿಗೆ ಬಲಿಯಾಗದಂತೆ ಎಚ್ಚರಿಸಿದೆ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು