ಮಂಗಳೂರು:ಅಪ್ರಾಪ್ತ ಬಾಲಕನೋರ್ವನನ್ನು ಮೂವರು ಕಿಡಿಗೇಡಿಗಳ ತಂಡವೊಂದು “ಜೈಶ್ರೀರಾಮ್” ಹೇಳಲು ಒತ್ತಾಯಿಸಿ ಥಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಆರೋಪಿಗಳನ್ನು ಬಂಧಿಸಲಾಗಿದೆ.
ಪ್ರಕರಣದ ತನಿಖೆ ಕೈಗೆತ್ತಿಕೊಂಡ ಬಂಟ್ವಾಳ ಸರ್ಕಲ್ ಇನ್ ಸ್ಪೆಕ್ಟರ್ ಟಿ.ಡಿ. ನಾಗರಾಜ್, ವಿಟ್ಲ ಠಾಣಾ ಇನ್ ಚಾರ್ಜ್ ಆಗಿರುವ ಸಂಚಾರಿ ಠಾಣಾ ಸಬ್ ಇನ್ಸ್ಪೆಕ್ಟರ್ ರಾಜೇಶ್ ನೇತೃತ್ವದ ಪೊಲೀಸ್ ತಂಡ ಕಾರ್ಯಾಚರಣೆ ನಡೆಸಿ ಪ್ರಮುಖ ಆರೋಪಿ ವಿಟ್ಲ ಠಾಣಾ ರೌಡಿಶೀಟರ್, ಭಜರಂಗದಳ ಮುಖಂಡ ದಿನೇಶ್ ಕನ್ಯಾನ(30) ಸಹಿತ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಜಿಲ್ಲೆಯಲ್ಲಿ ಕೋಮು ಸಾಮರಸ್ಯ ಕದಡಲಿದ್ದ ಪ್ರಕರಣವನ್ನು ಒಂದೇ ದಿನದಲ್ಲಿ ತನಿಖೆ ನಡೆಸಿ ಮೂವರೂ ಆರೋಪಿಗಳನ್ನು ಹೆಡೆಮುರಿ ಕಟ್ಟಿರುವ ಬಂಟ್ವಾಳ ಸರ್ಕಲ್ ಇನ್ ಸ್ಪೆಕ್ಟರ್ ಟಿಡಿ ನಾಗರಾಜ್, ಪೊಲೀಸ್ ಇನ್ ಸ್ಪೆಕ್ಟರ್ ರಾಜೇಶ್ ಕಾರ್ಯವೈಖರಿಗೆ ನಾಗರಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕೊರೋನಾ ಹಿನ್ನೆಲೆಯಲ್ಲಿ ವಿಟ್ಲ ಠಾಣೆ ಸೀಲ್ ಡೌನ್ ಆಗಿರುವ ಕಾರಣ ಮೆಲ್ಕಾರ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಕೇಸ್ ದಾಖಲಾಗಿತ್ತು. ಘಟನೆ ಕಳೆದ ಏಪ್ರಿಲ್ 21ರಂದು ನಡೆದಿದ್ದು 16ರ ಹರೆಯದ ಬಾಲಕನನ್ನು ರೌಡಿಶೀಟರ್ ದಿನೇಶ್ ಕನ್ಯಾನ ಮತ್ತು ಇಬ್ಬರು ಬಾಲಕರಿದ್ದ ತಂಡ ಹಿಡಿದು ಕೈಯಿಂದ ಹಲ್ಲೆ ಮಾಡುತ್ತಿರುವ ವಿಡಿಯೋ ವೈರಲ್ ಆಗಿತ್ತು.ಬಂಟ್ವಾಳ ತಾಲೂಕು ಕುಡ್ತಮುಗೇರು ನಿವಾಸಿ ಬಾಲಕ ಹಲ್ಲೆಗೊಳಗಾಗಿದ್ದು ವಿಡಿಯೋದಲ್ಲಿ ಆರೋಪಿಗಳು ಬಾಲಕನಲ್ಲಿ ಜೈಶ್ರೀರಾಮ್ ಹೇಳಲು ಒತ್ತಾಯ ಮಾಡಿ ಹಲ್ಲೆ ಮಾಡುತ್ತಿರುವುದು ದಾಖಲಾಗಿತ್ತು.
ಪ್ರಮುಖ ಆರೋಪಿ ದಿನೇಶ್ ಕನ್ಯಾನ ರೌಡಿಶೀಟರ್ ಆಗಿದ್ದು ಈತನ ವಿರುದ್ಧ ಬಂಟ್ವಾಳ, ವಿಟ್ಲ, ಸುರತ್ಕಲ್, ಮಂಜೇಶ್ವರ ಠಾಣೆಗಳಲ್ಲಿ ಪ್ರಕರಣಗಳಿವೆ. ಕೆಲತಿಂಗಳ ಹಿಂದೆ ಕನ್ಯಾನ ಕಾಲೇಜಿನಲ್ಲಿ ನಡೆದಿದ್ದ ವಿದ್ಯಾರ್ಥಿಗಳ ಮೇಲಿನ ಹಲ್ಲೆ ಪ್ರಕರಣ, ಸುರತ್ಕಲ್ ಸಮೀಪ ನಡೆದಿದ್ದ ದರೋಡೆ ಪ್ರಕರಣ, ಮಂಜೇಶ್ವರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಮೌಲ್ವಿ ಕೊಲೆಯತ್ನ ಪ್ರಕರಣದಲ್ಲಿ ಈತ ಆರೋಪಿಯಾಗಿದ್ದು ವಿಟ್ಲ ಠಾಣೆಯ ರೌಡಿಶೀಟರ್ ಆಗಿದ್ದಾನೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್