ಬಿ.ಸಿ.ರೋಡು: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಾಲೆತ್ತೂರು ಕಾಡುಮಠ ಎಂಬಲ್ಲಿ ಅಪ್ರಾಪ್ತ ವಿಧ್ಯಾರ್ಥಿ ಮೇಲೆ ಹಲ್ಲೆ ಮತ್ತು ದರೋಡೆ ನಡೆಸಲಾಗಿದ್ದು, ಸಂಘಪರಿವಾರದ ಕಾರ್ಯಕರ್ತರಾದ ದಿನೇಶ್ ಕನ್ಯಾನ ಮತ್ತು ಆತನ ಸಹಚರರು ಈ ಅಮಾನವೀಯ ಕೃತ್ಯದ ಆರೋಪಿಗಳಾಗಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್ ಆಗಿದ್ದು ಇದು ಧರ್ಮ ಸೌಹಾರ್ದತೆಯ ಜಿಲ್ಲೆಯಾದ ದ.ಕನ್ನಡ ಜಿಲ್ಲೆಯಲ್ಲಿ ಕೋಮು ಸಂಘರ್ಷವನ್ನು ಸ್ರಷ್ಟಿಸುವ ಹುನ್ನಾರ ಎಂದು ಎಸ್ಸೆಸ್ಸೆಫ್ ಜಿಲ್ಲಾ ಸಮಿತಿ ಅಭಿಪ್ರಾಯ ಪಟ್ಟಿದೆ.
ಒಂದು ವೇಳೆ ವಿದ್ಯಾರ್ಥಿ ತಪ್ಪು ಮಾಡಿದ್ದೇ ಆದಲ್ಲಿ ಸಮಗ್ರ ತನಿಖೆ ನಡೆಸಿ ಕಾನೂನಿನಡಿ ಸೂಕ್ತ ಕ್ರಮ ಕೈಗೊಳ್ಳಬೇಕೇ ಹೊರತು, ಈ ಗೂಂಡಾಗಳ ನೈತಿಕ ಪೋಲಿಸ್ ಗಿರಿಯನ್ನು ಜಿಲ್ಲಾ ಎಸ್ಸೆಸ್ಸೆಫ್ ಖಂಡಿಸುತ್ತಿದೆ.
ಈಗಾಗಲೇ ಆರೋಪಿಗಳನ್ನು ಪೋಲೀಸರು ಬಂಧಿಸಿದ್ದು ಆರೋಪಿಗಳ ಮೇಲೆ, ಹಲ್ಲೆ, ದರೋಡೆ ಮತ್ತು ಮಾನ ಹರಾಜು ಪ್ರಕರಣ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಎಸ್ಸೆಸ್ಸೆಫ್ ಸಂಭಂದಪಟ್ಟ ಪೋಲೀಸ್ ಇಲಾಖೆಯನ್ನು ಆಗ್ರಹಿಸುತ್ತಿದೆ.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ