ಬೆಳ್ತಂಗಡಿ; ಅನಿವಾಸಿ ಕನ್ನಡಿಗರ ಸಂಘಟನೆಯಾದ ಕೆಸಿಎಫ್ ಇದರ ದಾರುಲ್ ಅಮಾನ್ ವಸತಿ ಯೋಜನೆಯಡಿಯಲ್ಲಿ ಸೌದಿ ಅರೇಬಿಯಾ ರಾಷ್ಟ್ರೀಯ ಸಮಿತಿಯಿಂದ ಬೆಳ್ತಂಗಡಿ ತಾಲೂಕಿನ ಬೆದ್ರಬೆಟ್ಟು ಎಂಬಲ್ಲಿರುವ ಬಡ ಕುಟುಂಬಕ್ಕಾಗಿ ಸರಿಸುಮಾರು 8 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ನೂತನ ಮನೆಯ ಉದ್ಘಾಟನೆ ಹಾಗೂ ಹಸ್ತಾಂತರ ನಡೆಯಿತು.


ಸ

ಯ್ಯಿದ್ ಮುಹಮ್ಮದ್ ಇಂಬಿಚ್ಚಿ ಕೋಯ ತಂಙಳ್ ರವರ ದುಆದೊಂದಿಗೆ ಆರಂಭಿಸಿದ ಕಾರ್ಯಕ್ರಮದಲ್ಲಿ ಸಯ್ಯಿದ್ ಝೈನುಲ್ ಆಬಿದೀನ್ ಜಮಾಲುಲೈಲಿ ತಂಙಳ್ ಕಾಜೂರು ಹಾಗೂ ಕೆಸಿಎಫ್ ಅಂತರ್ರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಡಾ| ಶೇಖ್ ಬಾವ ಮಂಗಳೂರು ರವರು ರಿಬ್ಬನ್ ಕತ್ತರಿಸುವುದರೊಂದಿಗೆ ಉದ್ಘಾಟನೆ ಮಾಡಿದರು.. ಡಾ| ಮುಹಮ್ಮದ್ ಫಾಝಿಲ್ ರಝ್ವಿ, ಕಾವಳಕಟ್ಟೆ ರವರು ಮನೆಯ ಕೀಯನ್ನು ಕುಟುಂಬಕ್ಕೆ ಹಸ್ತಾಂತರಿಸಿದರು.


ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡುವವರು ಅಲ್ಲಾಹನಿಗೆ ಬಹಳ ಇಷ್ಟವಾದವರು ಹಾಗೂ ಇದು ಲೋಕ ಪ್ರವಾದಿ ಮುಹಮ್ಮದ್ ಮುಸ್ತಫಾ (ಸ.ಅ) ತಂಙಳ್ ರವರಿಗೂ ಬಹಳ ಸಂತೋಷವನ್ನು ನೀಡುವ ಕಾರ್ಯವಾಗಿದೆ. ಸಮಾಜ ಸೇವೆ ಇಸ್ಲಾಮಿನ ತತ್ವಗಳಲ್ಲಿ ಬಹುದೊಡ್ಡ ಭಾಗವಾಗಿದೆ. ಈ ಕೆಲಸವನ್ನು ಕರ್ನಾಟಕ ಕಲ್ಚರಲ್ ಫೌಂಡೇಶನ್ ಸಮಿತಿ ಮಾಡುತ್ತಿದೆ ಎಂದು ಕಾರ್ಯಕ್ರಮದಲ್ಲಿ ಮಾತನಾಡಿದ ಎಸ್ ವೈ ಎಸ್ ರಾಜ್ಯ ಪ್ರ. ಕಾರ್ಯದರ್ಶಿ ಡಾ| ಅಬ್ದುರ್ರಶೀದ್ ಝೈನಿ ಕಾಮಿಲ್ ಸಖಾಫಿ ಹೇಳಿದರು.
ಸದ್ರಿ ಕಾರ್ಯಕ್ರಮದಲ್ಲಿ ದಾರುಲ್ ಅಮಾನ್ ಮನೆಯ ಕಾಮಗಾರಿಯ ಗುತ್ತಿಗೆ ಪಡೆದು ನಿಗದಿತ ಸಮಯದಲ್ಲಿ ಬಹಳ ಉತ್ತಮವಾದ ರೀತಿಯಲ್ಲಿ ನಿರ್ಮಿಸಿದ ಜ| ಯಾಕೂಬ್ ಮಲೆಬೆಟ್ಟು ರವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕು ಮುಸ್ಲಿಂ ಜಮಾತ್ ಅಧ್ಯಕ್ಷರಾದ ಎಸ್ ಎಂ ಕೋಯಾ ತಂಙಳ್ ಉಜಿರೆ,
KCF ಸೌದಿ ರಾಷ್ಟ್ರೀಯ ಸಮಿತಿ ನಾಯಕರಾದ ಹನೀಫ್ ಕಣ್ಣೂರ್, ಅಬ್ದುಲ್ ಹಮೀದ್ ಮುಸ್ಲಿಯಾರ್ ಕರಾಯ, ಶುಕೂರ್ ನಾಳ, ಇಬ್ರಾಹಿಂ ಕಾಜೂರ್, ಊರಿನ ಸುನ್ನಿ ಸಂಘದ ನೇತಾರ ಸಲೀಮ್ ಕನ್ಯಾಡಿ, ಪತ್ರಕರ್ತರ ಸಂಘದ ಅಧ್ಯಕ್ಷರಾದ ಅಶ್ರಫ್ ಆಲಿಕುಂಞಿ ಮುಂಡಾಜೆ, ಅಬ್ದುಲ್ ರಝ್ಝಾಕ್ ಹಾಜಿ ಇಂದಬೆಟ್ಟು, ಶರೀಫ್ ಸಹದಿ ಕಿಲ್ಲೂರು, ಎಸ್ಸೆಸ್ಸೆಫ್ ಈಸ್ಟ್ ಝೋನ್ ಅಧ್ಯಕ್ಷರಾದ ಅಯ್ಯೂಬ್ ಮಹ್ಲರಿ, ಬೆಳ್ತಂಗಡಿ ಡಿವಿಷನ್ ಅಧ್ಯಕ್ಷರಾದ ನಝೀರ್ ಅಹ್ಮದ್ ಮದನಿ ಹಾಗೂ ಸುನ್ನೀ ಸಂಘಟನೆಗಳ ನಾಯಕರುಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
KCF ಸೌದಿ ರಾಷ್ಟ್ರೀಯ ಸಮಿತಿ ಸಂಘಟನಾ ಕಾರ್ಯದರ್ಶಿ ಬಶೀರ್ ತಲಪ್ಪಾಡಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ