janadhvani

Kannada Online News Paper

ಚೆನ್ನಾವರ ವಿಶ್ವ ಪರಿಸರ ದಿನಾಚರಣೆ

ಕರ್ನಾಟಕ ಎಸ್ಸೆಸ್ಸೆಫ್ ರಾಜ್ಯ ಸಮಿತಿಯು ಜೂನ್ 5 ರಂದು ನಾಳೆಗೊಂದು ನೆರಳು ಎಂಬ ಧ್ಯೇಯ ವಾಕ್ಯದೊಂದಿಗೆ ಪರಿಸರ ದಿನಾಚರಣೆ ಯ ಸುತ್ತೋಲೆ ಹೊರಡಿಸಿತ್ತು. ಅದರಂತೆ ಚೆನ್ನಾವರ ಎಸ್ ವೈಎಸ್ ಎಸ್ಸೆಸ್ಸೆಫ್ ವತಿಯಿಂದ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನವನ್ನು ಆಚರಿಸಲಾಯ್ತು.

ಅಲ್ ಹಾಫಿಳ್ ಅಬ್ದುಸ್ಸಲಾಮ್ ನಿಝಾಮಿ ರವರ ನಾಯಕತ್ವ ದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಎಸ್ ವೈಎಸ್ ಅಧ್ಯಕ್ಷ ಇಸ್ಮಾಈಲ್ ಸಅದಿ, ಯೂಸುಫ್ ಹಾಜಿ, ಮುತ್ತಲಿಬ್ ಹಾಜಿ, ಜಿಸಿಸಿ ಜಮಾಅತ್ ಸಮಿತಿ ಪ್ರ.ಕಾರ್ಯದರ್ಶಿ ಇಕ್ಬಾಲ್ ಮದನಿ , ಎಸ್ಸೆಸ್ಸೆಫ್ ಉಪಾಧ್ಯಕ್ಷ ನಿಝಾರ್ ಮುಸ್ಲಿಯಾರ್, ಪ್ರ.ಕಾರ್ಯದರ್ಶಿ ಅಬ್ದುಲ್ ಬಾಸಿತ್ , ಇಸ್ಮಾಈಲ್ ಅನ್ವರ್ ಮೊದಲಾದವರು ಉಪಸ್ಥಿತರಿದ್ದರು.

error: Content is protected !! Not allowed copy content from janadhvani.com