janadhvani

Kannada Online News Paper

ಎಸ್ಸೆಸ್ಸೆಫ್ ಕೊಡಗು ಆಶ್ರಯದಲ್ಲಿ ನಾಳೆಗೊಂದು ನೆರಳು ಅಭಿಯಾನ

ವಿಶ್ವ ಪರಿಸರ ದಿನದ ಅಂಗವಾಗಿ ಎಸ್ಸೆಸ್ಸೆಫ್ ರಾಜ್ಯ ಸಮಿತಿಯ ಸುತ್ತೋಲೆಯಂತೆ ಕೊಡಗು ಜಿಲ್ಲಾ ಎಸ್ಸೆಸ್ಸೆಫ್ ವತಿಯಿಂದ ಜಿಲ್ಲಾದ್ಯಾಂತ ಗಿಡಗಳನ್ನು ನೆಡುವ ಮೂಲಕ ಆಚರಿಸಲಾಯಿತು.

ಸೋಮವಾರಪೇಟೆಯಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷರಾದ ಅಬ್ದುಲ್ ಅಝೀಝ್ ಸಖಾಫಿ ಕೊಡ್ಲಿಪೇಟೆಯವರು ನಾಳೆಗೊಂದು ನೆರಳು ಎಂಬ ಅಭಿಯಾನಕ್ಕೆ ಚಾಲನೆ ನೀಡಿದರು.

ಮಡಿಕೇರಿ, ವಿರಾಜಪೇಟೆ ಹಾಗೂ ಸೋಮವಾರಪೇಟೆ ಡಿವಿಷನ್‌ಗಳ ಅಧೀನದಲ್ಲಿರುವ ಹಲವು ಶಾಖೆಗಳಲ್ಲಿ ಎಸ್ಸೆಸ್ಸೆಫ್ ಕಾರ್ಯಕರ್ತರಿಂದ ಸಾವಿರಕ್ಕಿಂತ ಅಧಿಕ ಗಿಡಗಳನ್ನು ನೆಟ್ಟು ವಿಶ್ವ ಪರಿಸರ ದಿನವನ್ನು ಆಚರಿಸಿದರು.

error: Content is protected !! Not allowed copy content from janadhvani.com