ದೋಹಾ: ವಿಶ್ವಾದ್ಯಂತ ಕೋವಿಡ್ ಹರಡಿರುವ ಕಾರಣ ಹಲವು ವಿದೇಶ ರಾಷ್ಟ್ರಗಳಲ್ಲಿ ಅನಿವಾಸಿಗಳು ಸಂಕಷ್ಟದಲ್ಲಿದ್ದು, ಕೈಯಲ್ಲಿ ಹಣವೂ ಇಲ್ಲ, ಒಪ್ಪೊತ್ತಿಗೆ ಊಟವೂ ಇಲ್ಲ, ಕೆಲವು ಕಂಪನಿಗಳನ್ನು ಮುಚ್ಚಿದ ಕಾರಣ ಕೆಲಸವನ್ನೂ ಕಳಕೊಂಡು ತವರಿಗೆ ಮರಳಲು ಭಾರತ ಸರ್ಕಾರದ ವಿಶೇಷ ವಿಮಾನವನ್ನು ಎದುರು ನೋಡುತ್ತಿದ್ದಾರೆ.
ಯುಎಇ ,ಸೌದಿ, ಕುವೈಟ್, ಬಹರೈನ್ ಮುಂತಾದ ಕಡೆಗಳಿಂದ ಸಾವಿರಾರು ಮಂದಿ ಈಗಾಗಲೇ ತಾಯಿನಾಡು ಸೇರಿದ್ದು, ಇದೀಗ ಕತಾರ್ನಲ್ಲೂ ಕನ್ನಡಿಗರು ಸಂಕಷ್ಟದಲ್ಲಿದ್ದು ಬೆಂಗಳೂರು ಹಾಗೂ ಮಂಗಳೂರಿಗೆ ಹೆಚ್ಚುವರಿ ವಿಮಾನ ಯಾನ ಸೌಲಭ್ಯವನ್ನು ಒಗದಿಸಿಕೊಡುವಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಕತಾರಿನಲ್ಲಿರುವ ಐ.ಸಿ.ಬಿ.ಎಫ್ (ಭಾರತೀಯ ಸಮುದಾಯ ಹಿತೈಷಿ ಸಮಿತಿ) ಸಂಸ್ಥೆಯ ವತಿಯಿಂದ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಈ ಕುರಿತಾಗಿ ಮನವಿಯನ್ನು ಸಲ್ಲಿಸಿದ್ದು ಕನ್ನಡಿಗರ ಸಂಕಷ್ಟಕ್ಕೆ ಸ್ಪಂದಿಸುವಂತೆ ಕೋರಲಾಗಿದೆ.
ಕೊರೊನಾ ಕಾರಣದಿಂದ ವಿದೇಶದಲ್ಲಿರುವ ಕನ್ನಡಿಗರಿಗೆ ಸರ್ಕಾರ ಸ್ಪಂದಿಸಿದ್ದು ಅವರನ್ನು ತಾಯ್ನಾಡಿಗೆ ಕರೆತರಲು ವಿಮಾನ ಸೇವೆಯನ್ನು ಕಲ್ಪಿಸಿದೆ. “ಒಂದೇ ಭಾರತ ನಿಯೋಗ”ದ ಅಡಿಯಲ್ಲಿ ದೋಹಾದಿಂದ ಬೆಂಗಳೂರಿಗೆ ಪ್ರತ್ಯೇಕ ವಿಮಾನವನ್ನು ನಿಗದಿಪಡಿಸಿ ಹಾರಲು ವ್ಯವಸ್ಥೆ ಮಾಡಲಾಗಿದೆ. ಆದರೆ ಕತಾರ್ನಲ್ಲಿ ಕೊರೊನಾ ತೀವ್ರವಾಗಿ ಹರಡುತ್ತಿರುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಕನ್ನಡಿಗರು ಕೆಲಸ ಕಳೆದುಕೊಂಡು, ಜೀವನ ನಡೆಸಲು ಪರದಾಡುತ್ತಿದ್ದಾರೆ. ಅವರೆಲ್ಲಾ ತಾಯ್ನಾಡಿಗೆ ಹಿಂತಿರುಗಲು ತಯಾರಾಗಿದ್ದಾರೆ.
ಇಂತವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರ ಹೆಚ್ಚುವರಿ ವಿಮಾನ ಯಾನ ಸೌಲಭ್ಯವನ್ನು ಒದಗಿಸಿಕೊಡಬೇಕು ಎಂದು ಭಾರತೀಯ ಸಮುದಾಯ ಹಿತೈಷಿ ಸಮಿತಿ ಪ್ರತಿನಿಧಿ ಸುಬ್ರಮಣ್ಯ ಹೆಬ್ಬಾಗಿಲು ವಿನಂತಿಸಿದ್ದಾರೆ. ಈ ಕುರಿತಾಗಿ ಅನಿವಾಸಿ ಕನ್ನಡಿಗರು ಕೇಂದ್ರ ಸಚಿವ ಸದಾನಂದಗೌಡ, ಸುರೇಶ ಅಂಗಡಿ, ಸಿಎಂ ಬಿ.ಎಸ್. ಯಡಿಯೂರಪ್ಪಅವರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕನ್ನಡಿಗರನ್ನು ಕತಾರಿನಿಂದ ಮಾತೃಭೂಮಿಗೆ ಹಿಂತಿರುಗಲು ವಿಮಾನದ ವ್ಯವಸ್ಥೆ ಮಾಡುವಂತೆ ವಿನಂತಿ ಮಾಡಿದ್ದಾರೆ.















ಇನ್ನಷ್ಟು ಸುದ್ದಿಗಳು
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮರುಪರಿಶೀಲಿಸುವಂತೆ ಕೆಸಿಎಫ್ ಆಗ್ರಹ
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ