ಮಸ್ಕತ್: ಭಾರತ ಸರಕಾರವು ವಿದೇಶ ಪ್ರಯಾಣಕ್ಕೆ ಸಂಬಂಧಿಸಿದಂತೆ ಪರಿಷ್ಕೃತ ಮಾರ್ಗಸೂಚಿಯೊಂದನ್ನು ಹೊರಡಿಸಿದ್ದು, ಇದರ ಅನ್ವಯ ಕೊವಿಡ್ 19 ನಿಂದಾಗಿ ದೇಶದಲ್ಲಿ ಅತಂತ್ರರಾಗಿರುವ ಕನಿಷ್ಟ ಮೂರು ತಿಂಗಳು ಅಥವಾ ಅದಕ್ಕಿಂತ ಹೆಚ್ಚು ವಿಸಾ ಅವಧಿಯನ್ನು ಹೊಂದಿರುವ ಅನಿವಾಸಿ ಭಾರತೀಯರಿಗಷ್ಟೇ ವಿದೇಶ ಪ್ರಯಾಣ ಕೈಗೊಳ್ಳಬಹುದಾಗಿದೆ.
ಈ ಪರಿಷ್ಕೃತ ಮಾರ್ಗಸೂಚಿಯಿಂದಾಗಿ ರಜೆ, ಶುಭ ಸಮಾರಂಭ ಮತ್ತಿತರ ಕಾರಣಗಳಿಗಾಗಿ ಕುಟುಂಬಿಕರನ್ನು ಸೇರಿಕೊಳ್ಳಲು ಊರಿಗೆ ಆಗಮಿಸಿ ಕೊರೋನಾ ಕಾರಣದಿಂದ ವಿಮಾನಯಾನವನ್ನು ಸರಕಾರ ಸ್ಥಗಿತಗೊಳಿಸಿದ್ದರ ಪರಿಣಾಮ ಕರ್ಮಭೂಮಿಗೆ ಪ್ರಯಾಣಿಸಲು ಸಾಧ್ಯವಾಗದೇ ಲಕ್ಷಾಂತರ ಅನಿವಾಸಿಗಳು ಅತಂತ್ರರಾಗಿದ್ದಾರೆ. ಮುಖ್ಯವಾಗಿ UAE ದೇಶವು ಡಿಸೆಂಬರ್ ವರೆಗೆ ವಿಸಾ ಅವಧಿಯನ್ನು ವಿಸ್ತರಿಸಿದ್ದರೂ, ಭಾರತ ಸರಕಾರದ ಈ ಮಾರ್ಗಸೂಚಿಯಿಂದಾಗಿ ವಿದೇಶ ಪ್ರಯಾಣ ಕೈಗೊಳ್ಳುವುದು ಅಸಾಧ್ಯವಾಗಲಿದೆ.
ಆದುದರಿಂದ ಸರಕಾರ ಮತ್ತು ಸಂಬಂಧಪಟ್ಟ ಇಲಾಖೆಗಳು ಕೂಡಲೇ ಗಮನಹರಿಸಿ ಈ ಸುತ್ತೋಲೆಗೆ ತಡೆಹಿಡಿಯಬೇಕೆಂದು ಕರ್ನಾಟಕ ಕಲ್ಚರಲ್ ಫೌಂಡೇಷನ್ ಒಮಾನ್(KCF) ಒಮಾನ್ ರಾಷ್ಟ್ರೀಯ ಸಮಿತಿಯು ಪತ್ರಿಕಾ ಪ್ರಕಟಣೆ ಮೂಲಕ ಆಗ್ರಹಿಸಿದೆ.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ