ಮಂಗಳೂರು:ಕೊರೋನಾ ನಿಯಂತ್ರಣದ ಅಂಗವಾಗಿ ಗಡಿಯನ್ನು ಮುಚ್ಚಲ್ಪಟ್ಟು ಹಲವಾರು ಸಮಸ್ಯೆಗಳಿಗೆ ಈಡಾಗಿದ್ದ ಮಂಗಳೂರು- ಕಾಸರಗೋಡು ತಲಪಾಡಿ ಗಡಿಯನ್ನು ಸಂಚಾರ ಮುಕ್ತಗೊಳಿಲಾಗಿದೆ.
ಆದರೆ ಉದ್ಯೋಗಕ್ಕಾಗಿ ಬರುವವರಿಗೆ ಪಾಸ್ ವಿತರಣೆಯಲ್ಲಿ ಗೊಂದಲ ವಾಗಿರುವ ಬಗ್ಗೆ ಮಾಹಿತಿ ಬಂದಿರುವ ಕಾರಣ, ಇನ್ನು ಮುಂದೆ ಯಾವುದೇ ಸಮಸ್ಯೆ ಆಗದಂತೆ ಎಚ್ಚರ ವಹಿಸಲು ತಲಪಾಡಿ ಚೆಕ್ಪೋಸ್ಟ್ನಲ್ಲಿ ಸೋಮವಾರದಿಂದ ಮೂರು ಪ್ರತ್ಯೇಕ ಸಹಾಯಕೇಂದ್ರ ಆರಂಭಿಸುವಂತೆ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರಿಗೆ ಸೂಚನೆ ನೀಡಿರುವುದಾಗಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ
ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಕಾಸರಗೋಡು ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಶ್ರೀಕಾಂತ್ ನೇತೃತ್ವದ ತಂಡ ಸಂಸದ ನಳಿನ್ ಕುಮಾರ್ ಹಾಗೂ ನನ್ನನ್ನು ಭೇಟಿ ಯಾಗಿ ಸಮಸ್ಯೆಯ ಬಗ್ಗೆ ವಿವರಿಸಿದ್ದಾರೆ. ನಿಯಮಗಳ ಸಮಸ್ಯೆಗಳೇನೇ ಇದ್ದರೂ ದೈನಂದಿನ ಚಟುವಟಿಕೆಗಳಿಗಾಗಿ ದ.ಕ.ಗೆ ಬರುವ ಕಾಸರಗೋಡು ಕನ್ನಡಿಗರಿಗೆ ತುರ್ತು ಪಾಸ್ ನೀಡಲು ಸೂಚಿಸಲಾಗಿದೆ ಎಂದರು.
ವೆನ್ಲಾಕ್ ಒಪಿಡಿ 2 ದಿನದಲ್ಲಿ ಆರಂಭ
ಕೋವಿಡ್ ಆಸ್ಪತ್ರೆಯಾಗಿ ಮಾರ್ಪಡಿಸಲಾಗಿದ್ದ ವೆನ್ಲಾಕ್ ಜಿಲ್ಲಾಸ್ಪತ್ರೆಯ ಹೊರರೋಗಿ ವಿಭಾಗದ (ಒಪಿಡಿ) ಸೇವೆಯನ್ನು ಮುಂದಿನ ಎರಡು ದಿನಗಳಲ್ಲಿ ಪುನಃ ಆರಂಭಿಸಲಾಗುವುದು. ಪ್ರಾರಂಭಿಕವಾಗಿ ಕೊರೊನಾಕ್ಕಾಗಿ ನಿಗದಿಪಡಿಸಲಾದ ಆಸ್ಪತ್ರೆ ಹೊರತುಪಡಿಸಿ ಉಳಿದ ಕಟ್ಟಡವನ್ನು ಒಪಿಡಿಗೆ ಮೀಸಲಿಡಲಾಗುವುದು ಎಂದು ಹೇಳಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್
ಸರಕಾರದ ಆದೇಶ, ತುಳುನಾಡಿನ ಜನತೆಯ ಒಗ್ಗಟ್ಟಿನ ಹೋರಾಟದ ಫಲ- ಮುನೀರ್ ಕಾಟಿಪಳ್ಳ
ಮುಸ್ಲಿಮ್ ವರ್ತಕರ ಮೇಲೆ ಹಲ್ಲೆ: ಮುಸ್ಲಿಮ್ ಮುಖಂಡರ ಭೇಟಿ, ಗಂಭೀರ ಪರಿಗಣನೆ- ಕೆ.ಅಶ್ರಫ್