ಅಬುಧಾಬಿ: ಯುಎಇಯಲ್ಲಿ ವೀಸಾ ಅವಧಿ ಮುಗಿದ ನಂತರ, ಅಕ್ರಮವಾಗಿ ವಾಸಿಸುವ ವಲಸಿಗರು ದಂಡ ಪಾವತಿಸದೆ ದೇಶ ತೊರೆಯಲು ಸುವರ್ಣಾವಕಾಶ.
ಟಿಕೆಟ್ ಮತ್ತು ಪಾಸ್ಪೋರ್ಟ್ ನೊಂದಿಗೆ ನೇರವಾಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ಪ್ರಯಾಣಿಸಬಹುದು ಎಂದು ವಲಸೆ ಅಧಿಕಾರಿಗಳು ತಿಳಿಸಿದ್ದಾರೆ. “ಇತರ ಕ್ಷಮಾದಾನ ಕಾರ್ಯವಿಧಾನಗಳನ್ನು ಅನುಸರಿಸುವ ಅಗತ್ಯವಿಲ್ಲ” ಎಂದು ಅಧಿಕಾರಿಗಳು ಹೇಳಿದ್ದಾರೆ.
ಮಾರ್ಚ್ 1 ರ ಮೊದಲು ವೀಸಾ ಅವಧಿ ಮುಗಿದವರಿಗೆ ಆಗಸ್ಟ್ 18 ರವರೆಗೆ ದಂಡ ಪಾವತಿಸದೆ ದೇಶ ತೊರೆಯಲು ಅವಕಾಶವಿರುತ್ತದೆ.
ಕೋವಿಡ್ ಅವಧಿ ಅಥವಾ ಮಾರ್ಚ್ 1 ರ ನಂತರ ವೀಸಾ ಅವಧಿ ಮುಗಿದವರಿಗೆ ಈ ವರ್ಷ ಡಿಸೆಂಬರ್ 31 ರವರೆಗೆ ಯುಎಇಯಲ್ಲಿ ಮುಂದುವರಿಯಲು ಅವಕಾಶವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕ್ಷಮಾದಾನ ಪ್ರಯೋಜನವನ್ನು ಪಡೆಯಲು ಮುಂಚಿತವಾಗಿ ಇಮಿಗ್ರೇಷನ್ ಗೆ ಹೋಗಬೇಕಾದ ಅಗತ್ಯವಿಲ್ಲ. ಅವಧಿ ಮೀರದ ಪಾಸ್ಪೋರ್ಟ್ ಮತ್ತು ಟಿಕೆಟ್ ನೊಂದಿಗೆ ನೇರವಾಗಿ ವಿಮಾನ ನಿಲ್ದಾಣಕ್ಕೆ ತೆರಳಬೇಕು.
ದುಬೈ ವಿಮಾನ ನಿಲ್ದಾಣದ ಮೂಲಕ ಹಾದುಹೋಗುವವರು 48 ಗಂಟೆಗಳ ಮುಂಚಿತವಾಗಿ ವಿಮಾನ ನಿಲ್ದಾಣಕ್ಕೆ ಆಗಮಿಸಬೇಕು. ಅಬುಧಾಬಿ, ಶಾರ್ಜಾ ಮತ್ತು ರಾಸ್ ಅಲ್ ಖೈಮಾ ವಿಮಾನ ನಿಲ್ದಾಣಗಳಿಗೆ ಆರು ಗಂಟೆಗಳ ಮುಂಚಿತವಾಗಿ ವಿಮಾನ ನಿಲ್ದಾಣಕ್ಕೆ ತಲುಪಿರಬೇಕು.
ವಿಮಾನ ನಿಲ್ದಾಣದಲ್ಲಿ ಕ್ಷಮಾದಾನ ಕ್ರಮವನ್ನು ನಿರ್ವಹಿಸಲು ವಿಶೇಷ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಕ್ಷಮಾದಾನದ ಪ್ರಯೋಜನವನ್ನು ಪಡೆಯುವವರು ಅವರ ಕುಟುಂಬ ಸದಸ್ಯರೊಂದಿಗೆ ದೇಶವನ್ನು ತೊರೆಯಲು ಕಾಳಜಿ ವಹಿಸಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ