ಉಳ್ಳಾಲ: ಅನಿವಾಸಿ ಕನ್ನಡಿಗರ ಸಂಘಟನೆಯಾದ ಕೆಸಿಎಫ್ ರಿಯಾದ್ ಝೊನ್ ಸಮಿತಿಯಿಂದ ಎಸ್ಸೆಸ್ಸೆಫ್ ಉಳ್ಳಾಲ ಡಿವಿಶನ್ ಸಮಿತಿಗೆ ಆಂಬ್ಯುಲೆನ್ಸ್ ಹಸ್ತಾಂತರ ಕಾರ್ಯಕ್ರಮ ನಡೆಯಿತು.
ಕೆಸಿಎಫ್ ರಿಯಾದ್ ಝೊನ್ ಸಮಿತಿಯ ಸದಸ್ಯರಾದ ನಝೀರ್ ಉಸ್ತಾದ್ ರವರ ದುಆದೊಂದಿಗೆ ಆರಂಭಿಸಿದ ಕಾರ್ಯಕ್ರಮದಲ್ಲಿ ಕೆಸಿಎಫ್ ಅಂತರ್ರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಡಾ॥ಶೇಖ್ ಬಾವ ಹಾಜಿ ರವರು ಶಾಸಕರಾದ ಯು. ಟಿ. ಖಾದರ್ ರವರ ಸಮ್ಮುಖದಲ್ಲಿ ಆಂಬ್ಯುಲೆನ್ಸ್ ಕೀಯನ್ನು ಎಸ್ಸೆಸ್ಸೆಫ್ ಉಳ್ಳಾಲ ಡಿವಿಶನ್ ಸಮಿತಿಗೆ ಹಸ್ತಾಂತರ ಮಾಡಿದರು.
“ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡುವವರು ಅಲ್ಲಾಹನಿಗೆ ಬಹಳ ಇಷ್ಟವಾದವರು ಹಾಗೂ ಇದು ಲೋಕ ಪ್ರವಾದಿ ಮುಹಮ್ಮದ್ ಮುಸ್ತಫಾ (ಸ.ಅ) ತಂಙಳ್ ರವರಿಗೂ ಬಹಳ ಸಂತೋಷವನ್ನು ನೀಡುವ ಕಾರ್ಯವಾಗಿದೆ” “ಸಮಾಜ ಸೇವೆ ಇಸ್ಲಾಮಿನ ತತ್ವಗಳಲ್ಲಿ ಬಹುದೊಡ್ಡ ಭಾಗವಾಗಿದೆ” ಈ ಕೆಲಸವನ್ನು ಕರ್ನಾಟಕ ಕಲ್ಚರಲ್ ಫೌಂಡೇಶನ್ ಸಮಿತಿ ಮಾಡುತ್ತಿದೆ ಎಂದು ಕಾರ್ಯಕ್ರಮದಲ್ಲಿ ಮಾತನಾಡಿದ ವೆಸ್ಟ್ ಝೊನ್ ಅಧ್ಯಕ್ಷರು ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಯವರು ಹೇಳಿದರು.
ಎಸ್ಸೆಸ್ಸೆಫ್ ಉಳ್ಳಾಲ ಡಿವಿಶನ್ ನ ಅಧ್ಯಕ್ಷರಾದ ಇರ್ಫಾನ್ ನೂರಾನಿ ಯವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ರಿಯಾದ್ ಝೊನ್ ಸಮಿತಿಯ ನಾಯಕರಾದ ಹನೀಫ್ ಕಣ್ಣೂರು, ಅಶ್ರಫ್ ಮದನಿ, ಅಶ್ರಫ್ KMS, ಅಮಾನಿ ಉಸ್ತಾದ್, ಸುನ್ನೀ ಸಂಘಟನೆಯ ನಾಯಕರಾದ ಪಾರೂಕ್ ಅಬ್ಬಾಸ್ ಉಳ್ಳಾಲ, ಸಲೀಮ್ ಕನ್ಯಾಡಿ ಹಾಗೂ ಎಸ್ಸೆಸ್ಸೆಫ್ ದ ಕ ಜಿಲ್ಲಾ ನಾಯಕರಾದ ಸಯ್ಯಿದ್ ಖುಬೈಬ್ ತಂಙಳ್, ಶರೀಫ್ ನಂದಾವರ, ರಶೀದ್ ಹಾಜಿ ವಗ್ಗ, ಶರೀಫ್ ಬೇರ್ಕಲ, ಇಕ್ಬಾಲ್ ಮಾಚಾರ್, ಹಕೀಂ ಕಳಂಜಿಬೈಲು,ಹಾಗೂ ವೆಸ್ಟ್ ಝೊನ್ ನಾಯಕರಾದ ಹೈದರ್ ಕಾಟಿಪಳ್ಳ, ಮನ್ಸೂರ್ ಬಜಾಲ್, ಜಿ ಎ ಇಬ್ರಾಹಿಮ್, ಹಕೀಮ್ ಪೂಮಣ್ಣ್, ಹಮೀದ್ ತಲಪಾಡಿ, ಉಸ್ಮಾನ್ ಕೆ ಸಿ ರೊಡ್, ಕುಂಞಿ ಮೊನು , UB ಹಾಜಿ, ಇಸ್ಮಾಯಿಲ್ BH ಹಾಗೂ ಸುನ್ನೀ ಸಂಘಟನೆಗಳ ನಾಯಕರುಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
KCF ಸೌದಿ ರಾಷ್ಟ್ರೀಯ ಸಮಿತಿ ಸಂಘಟನಾ ಕಾರ್ಯದರ್ಶಿ ಬಶೀರ್ ತಲಪ್ಪಾಡಿ ಯವರು ಕೆಸಿಎಫ್ ರಿಯಾದ್ ಝೊನ್ ಸಮಿತಿಯ ಹಲವಾರು ಯೋಜನೆಗಳನ್ನು ವಿವರಿಸಿದರು.
ಎಸ್ಸೆಸ್ಸೆಫ್ ಉಳ್ಳಾಲ ಡಿವಿಶನ್ ಪ್ರಧಾನ ಕಾರ್ಯದರ್ಶಿ ಜಾಫರ್ ಯು ಎಸ್ ರವರು ಕಾರ್ಯಕ್ರಮವನ್ನು ಸ್ವಾಗತಿಸಿ
ನಿರೂಪಿಸಿದರು.















ಇನ್ನಷ್ಟು ಸುದ್ದಿಗಳು
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ