ಬೆಂಗಳೂರು: ಕರ್ನಾಟಕದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 6,824ಕ್ಕೆ ಏರಿಕೆಯಾಗಿದೆ. ಇಂದು 308 ಪ್ರಕರಣ ಪತ್ತೆಯಾಗಿದೆ. ಇನ್ನು 3 ಮಂದಿ ಮಹಾಮಾರಿಗೆ ಬಲಿಯಾಗಿದ್ದು ಸಾವಿನ ಸಂಖ್ಯೆ 81ಕ್ಕೆ ಏರಿಕೆಯಾಗಿದೆ.
ಕಲಬುರಗಿಯಲ್ಲಿ 67, ಯಾದಗಿರಿಯಲ್ಲಿ 52, ಬೀದರ್ ನಲ್ಲಿ 42, ಬೆಂಗಳೂರು 31, ದಕ್ಷಿಣ ಕನ್ನಡದಲ್ಲಿ 30, ಧಾರವಾಡದಲ್ಲಿ 20, ಉಡುಪಿಯಲ್ಲಿ 14, ಹಾಸನದಲ್ಲಿ, ಬಳ್ಳಾರಿಯಲ್ಲಿ ತಲಾ 11, ವಿಜಯಪುರದಲ್ಲಿ 6, ರಾಯಚೂರು, ಉತ್ತರಕನ್ನಡದಲ್ಲಿ ತಲಾ 5, ಕೋಲಾರದಲ್ಲಿ 4, ದಾವಣಗೆರೆಯಲ್ಲಿ 3, ಮಂಡ್ಯ, ಹಾವೇರಿಯಲ್ಲಿ 2, ಮೈಸೂರು,ಬಾಗಲಕೋಟೆ, ರಾಮನಗರದಲ್ಲಿ ತಲಾ 1 ಪ್ರಕರಣಗಳು ವರದಿಯಾಗಿವೆ.
ರಾಜ್ಯದಲ್ಲಿ 6,824 ಪ್ರಕರಣಗಳ ಪೈಕಿ 3,648 ಮಂದಿ ಗುಣಮುಖರಾಗಿದ್ದಾರೆ. ಇನ್ನು 3,092 ಮಂದಿ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮುಂದಿನ ದಿನಗಳಲ್ಲಿ ಗಂಭೀರ ಸ್ವರೂಪ
ಯಾದಗಿರಿ: ಕೊರೋನಾ ಹರಡುವಿಕೆ ಮುಂದಿನ ದಿನಗಳಲ್ಲಿ ಗಂಭೀರ ಸ್ವರೂಪ ಪಡೆಯಬಹುದು ಎಂದು ಭಾವಿಸಿ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಡಳಿತಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಸೂಚನೆ ನೀಡಿದ್ದಾರೆ.
ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಕೋವಿಡ್-19 ಪರಿಶೀಲನಾ ಸಭೆಯಲ್ಲಿ ಶನಿವಾರ ಅವರು ಮಾತನಾಡಿದರು.
ಸರ್ಕಾರ ನೀಡಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು. ಜ್ವರದ ಸೋಂಕು ಕಾಣಿಸಿಕೊಂಡ ಮತ್ತು ಬೇರೆ ಕಾಯಿಲೆಗಳಿಂದ ಬಳಲುತ್ತಿರುವ ಹಿರಿಯ ನಾಗರಿಕರ ಟೆಸ್ಟ್ ಮಾಡಬೇಕು ಮತ್ತು ಅವರ ಮೇಲೆ ನಿರಂತರ ನಿಗಾವಹಿಸಬೇಕು ಎಂದು ಸೂಚನೆ ನೀಡಿದರು.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ