ವಿಟ್ಲ(ಜನಧ್ವನಿ) : ವಿಟ್ಲ ಫೆಡರೇಷನ್ ಇದರ ಸಕ್ರಿಯ ಸದಸ್ಯ, ಪರೋಪಕಾರಿ, ಸೌದಿ ಅರೇಬಿಯಾದ ದಮ್ಮಾಮಿನಲ್ಲಿ ಹಲವಾರು ವರ್ಷಗಳಿಂದ ಬಹರೈನ್ ಹಾಗು ಸೌದಿ ದಮ್ಮಾಮಿನಲ್ಲಿ ಟ್ಯಾಕ್ಸಿ ಚಾಲಕ ವೃತ್ತಿಯಲ್ಲಿದ್ದ ಬಂಟ್ವಾಳ ತಾಲೂಕಿನ ವಿಟ್ಲ ಒಕ್ಕೆತ್ತೂರು ನಿವಾಸಿ ವಿ.ಎಸ್ ಅಬೂಬಕ್ಕರ್ (ಪುತ್ತುಚ್ಚ 60 ವರ್ಷ) ಹೃದಯಾಘಾತದಿಂದ ಜೂನ್ 7 ರಂದು ದಮ್ಮಾಮಿನ ಸೆಂಟ್ರಲ್ ಹಾಸ್ಪಿಟಲ್ ನಲ್ಲಿ ಮೃತಪಟ್ಟಿದ್ದರು.
ವಿಷಯ ತಿಳಿದ ತಕ್ಷಣ KCF ಟೀಮ್ ಸಾಂತ್ವನ ವಿಭಾಗವು ಕೂಡಲೇ ಕಾರ್ಯಪ್ರವರ್ತರಾಗಿ ಮೃತರ ಕುಟುಂಬಸ್ಥರ ಅಪೇಕ್ಷೆಯ ಮೇರೆಗೆ KCF ದಮ್ಮಾಮ್ ಝೋನ್ ನಾಯಕರು ಬೇಕಾದ ಎಲ್ಲಾ ದಾಖಲೆ ಪತ್ರಗಳನ್ನು ಪೂರ್ತಿಗೊಳಿಸಿ ದಮ್ಮಾಮಿನಲ್ಲಿ ಅಂತ್ಯಕ್ರಿಯೆ ನಡೆಸಲು ಸಹಕರಿಸಿದರು.
ಕೆ.ಸಿ.ಎಫ್ INC ನಾಯಕರಾದ ರೈಸ್ಕೊ ಅಬೂಬಕ್ಕರ್ ಹಾಜಿ ಹಾಗೂ ಝೋನ್ ಅಧ್ಯಕ್ಷರಾದ ಅಬ್ದುರ್ರಶೀದ್ ಸಖಾಫಿಯವರ ನೇತ್ರತ್ವದಲ್ಲಿ ಕ್ಲಪ್ತ ಸಮಯಕ್ಕೆ ಬೇಕಾದ ಎಲ್ಲಾ ದಾಖಲೆಗಳನ್ನು ದಮ್ಮಾಮ್ KCF ರಿಲೀಫ್ ಕನ್ವೀನರ್ ಬಾಷಾ ಗಂಗಾವಳಿ KCF ಸೌದಿ ರಾಷ್ಟ್ರೀಯ ಸಾಂತ್ವನ ವಿಭಾಗದ ಚೆಯರ್’ಮ್ಯಾನ್ ಮುಹಮ್ಮದ್ ಮಲೆಬೆಟ್ಟು, ಸರಿಪಡಿಸಿಕೊಡಲು ಸಹಕರಿಸಿದರು.
ಅದೇ ವೇಳೆ ಬಹರೈನ್ KCF ರಾಷ್ಟ್ರಾಧ್ಯಕ್ಷರಾದ ಜಮಾಲುದ್ದೀನ್ ವಿಟ್ಲ ರವರು ಸಂಘಟನೆಯ ಸಮಪರ್ಕದಲ್ಲಿದ್ದು ಕೊಂಡು ಎಲ್ಲಾ ರೀತಿಯ ಧೈರ್ಯ ತುಂಬುತ್ತಿದ್ದರು. ಅದೇ ರೀತಿ ಈ ಪುಣ್ಯಕಾರ್ಯಕ್ಕೆ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಸಹಕರಿಸಿದ ಪ್ರತಿಯೊಬ್ಬರಿಗೆ ಕ್ರತಜ್ಞತೆಗಳು, KCF ಸಂಘಟನೆಗೆ ನಾವು ಆಭಾರಿಗಳಾಗಿದ್ದೇವೆ ಎಂದು ತಿಳಿಸುವ,ಅಧ್ಯಕ್ಷರು ಮತ್ತು ಸರ್ವಸದಸ್ಯರು, ವಿಟ್ಲ ಫೆಡರೇಷನ್ (KSA, QATAR, BAHRAIN, & INDIA).















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ