ದೋಹಾ: ಖತ್ತರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 78 ಸಾವಿರ ದಾಟಿದೆ. ಪ್ರತಿನಿತ್ಯ 1,200-1,300 ಪ್ರಕರಣ ವರದಿಯಾಗುತ್ತಿವೆ. ಆದರೆ ಅಷ್ಟೇ ಸಂಖ್ಯೆಯಲ್ಲಿ ಸೋಂಕಿತರು ಚೇತರಿಸಿಕೊಳ್ಳುತ್ತಿದ್ದಾರೆ.
ಈವರೆಗೆ 70 ಜನರು ಮೃತಪಟ್ಟಿದ್ದಾರೆ. ಕತಾರ್ ಸಣ್ಣ ದೇಶವಾದರೂ ಸರ್ಕಾರ ವ್ಯವಸ್ಥಿತವಾಗಿ ವೈದ್ಯಕೀಯ ಸೌಲಭ್ಯ ನಿರ್ವಹಿಸುತ್ತಿರುವ ಕಾರಣ ಹಾಗೂ ಮುಂಜಾಗ್ರತೆಯು ಹೆಚ್ಚಿನ ಅನಾಹುತ ತಪ್ಪಿಸಿದೆ. ಇಲ್ಲಿ ಲಾಕ್ಡೌನ್ ಆಗೇ ಇಲ್ಲ. ಆದರೆ ಶಾಪಿಂಗ್ ಮಾಲ್ಗಳು, ಕ್ಷೌರದಂಗಡಿ, ಪಾರ್ಕ್ಗಳು, ಜನಸಂದಣಿ ಕಾರ್ಯಕ್ರಮಗಳು ಬಂದ್ ಆಗಿವೆ.
ಹೋಟೆಲ್ಗಳಲ್ಲಿ ಪಾರ್ಸೆಲ್ಗಷ್ಟೇ ಅವಕಾಶ ನೀಡಲಾಗಿದೆ. ಮಾಸ್ಕ್ ಬಳಸುವುದು ಹಾಗೂ ಸಾಮಾಜಿಕ ಅಂತರದ ನಿಯಮ ಕಟ್ಟುನಿಟ್ಟಾಗಿ ಜಾರಿ ಮಾಡಲಾಗಿದೆ. ಸರ್ಕಾರಿ ಉದ್ಯೋಗ ಸೇರಿ ದಂತೆ ಎಲ್ಲೆಲ್ಲಿ ಸಾಧ್ಯವೋ ಅಲ್ಲೆಲ್ಲ ಸಿಬ್ಬಂದಿ ಮನೆಯಿಂದಲೇ ಕೆಲಸ ನಿರ್ವಹಿಸುತ್ತಿದ್ದಾರೆ.
ಇದರಿಂದಾಗಿ ಪ್ರಮುಖವಾಗಿ ಟೈಲರ್, ಕಟ್ಟಡ ನಿರ್ವಣ, ಕ್ಷೌರ, ಜಿಮ್ ತರಬೇತುದಾರ, ಟ್ಯಾಕ್ಸಿ ಚಾಲಕರಂತಹ ನೌಕರಿಯಲ್ಲಿದ್ದವರಿಗೆ ಹೆಚ್ಚಿನ ತೊಂದರೆ ಆಗಿದೆ. ಅನೇಕರು ಕೆಲಸ ಕಳೆದುಕೊಂಡಿದ್ದಾರೆ.ಕೆಲಸ ಕಳೆದುಕೊಂಡವರ ಜತೆಗೆ ಗರ್ಭಿಣಿಯರು, ಮಕ್ಕಳು, ಹಿರಿಯ ನಾಗರಿಕರು ಇದ್ದಾರೆ. ಭಾರತಕ್ಕೆ ತೆರಳುವುದಾಗಿ ಸುಮಾರು 3 ಸಾವಿರ ಜನರು ನೋಂದಣಿ ಮಾಡಿಸಿದ್ದಾರೆ.
ಸಂಕಷ್ಟದಲ್ಲಿರುವವರಿಗೆ ಆಹಾರ, ಔಷಧ ಸರಬರಾಜು ಮಾಡುವ ಜತೆಗೆ ಮಾನಸಿಕ ಒತ್ತಡದಲ್ಲಿರುವವರಿಗೆ ಆಪ್ತ ಸಮಾಲೋಚನೆ ಮಾಡುವ ಕಾರ್ಯವನ್ನೂ ಭಾರತೀಯ ಸಮುದಾಯ ಸಂಘಟನೆಗಳಿಂದ ಮಾಡಲಾಗುತ್ತಿದೆ. ಪ್ರತಿನಿತ್ಯ 1800-1900 ಪ್ರಕರಣಗಳು ಬಂದ ಸಮಯದಲ್ಲಿ ಸ್ವಲ್ಪ ಆತಂಕ ಮನೆಮಾಡಿತ್ತು. ಆದರೆ ಈಗ ಜಾಗೃತಿಯಿಂದ ಜನರು ನಡೆದುಕೊಳ್ಳುತ್ತಿದ್ದಾರೆ, ಆರೋಗ್ಯದ ಕುರಿತು ಕಾಳಜಿ ವಹಿಸುವುದರಿಂದ ಕೊರೊನಾ ದೂರಾಗಿಸಬಹುದು ಎಂಬುದನ್ನು ಜನರಿಗೆ ಮನದಟ್ಟಾಗಿದೆ.















ಇನ್ನಷ್ಟು ಸುದ್ದಿಗಳು
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ