ಬೆಂಗಳೂರು: ಕೊರೋನಾ ಕಾರಣದಿಂದಾಗಿ ತಾತ್ಕಾಲಿಕವಾಗಿ ಮುಂದೂಡಲಾಗಿದ್ದ ಪಿಯುಸಿ ಇಂಗ್ಲೀಷ್ ಪರೀಕ್ಷೆಯನ್ನು ಜೂನ್.18 ರಂದು ನಡೆಸಲಾಗಿತ್ತು. ಆದರೆ ಜಯನಗರ 4 ನೇ ಬ್ಲಾಕ್ ನಲ್ಲಿ ನಿನ್ನೆ ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿಗೆ ಇದೀಗ ಕೊರೊನಾ ಪಾಸಿಟಿವ್ ಇರುವುದು ಪತ್ತೆಯಾಗಿದ್ದು ಎಲ್ಲರಲ್ಲೂ ಆತಂಕ ಮೂಡಿಸಿದೆ.
ವಿದ್ಯಾರ್ಥಿನಿ ಕಳೆದ ಒಂದು ವಾರದಿಂದ ಕ್ವಾರಂಟೈನ್ಗೆ ಒಳಗಾಗಿದ್ದರು. ಮನೆಯಿಂದ ಹೊರ ಬರುವಂತಿಲ್ಲ ಎಂದು ಕೈಗೆ ಮುದ್ರೆ ಒತ್ತೆಲಾಗಿತ್ತು. ಆದರೆ, ಆಕೆ ಆ ಮುದ್ರೆಯನ್ನು ಅಳಿಸಿ ಹಾಕಿ ಕಣ್ ತಪ್ಪಿಸಿ ಪರೀಕ್ಷೆಗೆ ತೆರಳಿದ್ದಾಳೆ. ಆಕೆಯ ಸ್ವ್ಯಾಬ್ ರಿಪೋರ್ಟ್ ಸಂಬಂಧ ಅಧಿಕಾರಿಗಳಿಗೂ ಆಕೆ ಮಾಹಿತಿ ನೀಡಿರಲಿಲ್ಲ ಎಂದು ತಿಳಿದುಬಂದಿದೆ.
ರಾಜ್ಯದಲ್ಲಿ ಒಟ್ಟು 5,95,997 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದರು. ಇದರಲ್ಲಿ 27,022 ವಿದ್ಯಾರ್ಥಿಗಳು ಕೊರೋನಾ ಹರಡುವ ಭಯದಿಂದ ಪರೀಕ್ಷೆಗೆ ಗೈರಾಗಿದ್ದಾರೆಂದು ಪಿಯುಸಿ ಬೋರ್ಡ್ ಮಾಹಿತಿಯನ್ನು ನೀಡಿದೆ. ಬೆಂಗಳೂರು ದಕ್ಷಿಣ ಭಾಗದ 1,646 ವಿದ್ಯಾರ್ಥಿಗಳು ಮತ್ತು ಕಲಬುರಗಿ ಭಾಗದ 1,750 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ರಾಜ್ಯದ 1,016 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. ಈ ಪರೀಕ್ಷೆಯ ಜವಾಬ್ದಾರಿಯನ್ನು ಸರಕಾರ, ಸರ್ವ ಶಿಕ್ಷಣ ಅಭಿಯಾನದ ರಾಜ್ಯ ಯೋಜನಾ ನಿರ್ದೇಶಕ ಡಾ.ಎಂ.ಟಿ.ರೇಜು ಅವರಿಗೆ ಸರಕಾರ ವಹಿಸಿತ್ತು. ಹೊರ ರಾಜ್ಯದ 1,889 ವಿದ್ಯಾರ್ಥಿಗಳ ಪರೀಕ್ಷೆ ಬರೆದಿದ್ದಾರೆ. ಕೊರೊನಾದಿಂದಾಗಿ ಹೆಚ್ಚುವರಿ 13,528 ಕೊಠಡಿಯಲ್ಲಿ ಪರೀಕ್ಷೆಯನ್ನು ನಡೆಸಲಾಯಿತು.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ