ಎಲಿಮಲೆ: ಎಲಿಮಲೆ ಬದ್ರಿಯಾ ಜಮಾಅತ್ ಕಮಿಟಿ ನೇತೃತ್ವದಲ್ಲಿ ವನಮಹೋತ್ಸವ ಕಾರ್ಯಕ್ರಮವು ಮಸೀದಿ ವಠಾರದಲ್ಲಿ ನಡೆಯಿತು.
ಸಮಾರಂಭದ ಅಧ್ಯಕ್ಷತೆ ವಹಿಸಿ ಸ್ವಾಗತದೊಂದಿಗೆ ಪ್ರಾಸ್ತಾವಿಕ ಮಾತುಗಳನ್ನಾಡಿದ ಜಮಾಅತ್ ಅಧ್ಯಕ್ಷರಾದ ಮಹಮ್ಮದ್ ಇಕ್ಬಾಲ್ ಎಲಿಮಲೆಯವರು ಪ್ರತಿವರ್ಷ ಗಿಡಗಳನ್ನು ನೆಡುವ ಮೂಲಕ ಉತ್ತಮ ಪರಿಸರ ನಿರ್ಮಾಣ ಮಾಡಲು ಪ್ರಯತ್ನಿಸಬೇಕೆಂದರು. ಮಹಮೂದ್ ಸಖಾಫಿ ಉಸ್ತಾದರು ದುಆ ನೆರವೇರಿಸಿದರು.


ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸುಳ್ಯ ವಲಯ ಅರಣ್ಯಾಧಿಕಾರಿ ಮಂಜುನಾಥರವರು ಮಾತನಾಡಿ ಉತ್ತಮ ಮಳೆ ಗಾಳಿ ಆರೋಗ್ಯಕ್ಕಾಗಿ ಗಿಡಗಳನ್ನು ನೆಟ್ಟು ಮರಗಳನ್ನು ಬೆಳೆಸಬೇಕು ಪ್ರಕೃತಿಯ ಉಳಿವೂ ಹಾಗೂ ಬೆಳವಣಿಗೆ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು.
ಎಲಿಮಲೆ ಮಸೀದಿ ಕಮಿಟಿ ಯವರು ವನಮಹೋತ್ಸವ ಆಚರಿಸುವ ಮೂಲಕ ಅರ್ಥಪೂರ್ಣವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ ಎಂದು ಅಭಿನಂದಿಸಿದರು.
ಕಾರ್ಯಕ್ರಮದಲ್ಲಿ ಉಪವಲಯ ಅರಣ್ಯಾಧಿಕಾರಿ ರವೀಂದ್ರ, ಅರಣ್ಯ ರಕ್ಷಕರಾದ ಜಯಪ್ರಕಾಶ್ ಚಿದಾನಂದ, ಅರಣ್ಯ ವೀಕ್ಷಕ ಸುರೇಂದ್ರ ಸಿಬ್ಬಂದಿಗಳು ಹಾಗೂ ಮಸೀದಿ ಹಿರಿಯರಾದ ಟಿ ವೈ ಇಬ್ರಾಹಿಂ, ಮಹಮ್ಮದ್ ಕುಂಞಿ ಮೇಲೆಬೈಲು, ಅಬೂಬಕ್ಕರ್ ಪಾಣಾಜೆ, ಕಲಂದರ್ ಎಲಿಮಲೆ, ಸಿದಿಕ್ ಜೂರ್ಮುಕ್ಕಿ, ಸೂಫಿ ಎಲಿಮಲೆ, ಜುನೈದ್ ಸಖಾಫಿ, ಅಬ್ದುಲ್ಲ ಜೀರ್ಮುಕ್ಕಿ, ಹೈದರ್ ಹಾಜಿ, ಅಶ್ರಫ್ ಜೀರ್ಮುಕ್ಕಿ, ಹಾಗೂ ಜಮಾಅತ್ ಸದಸ್ಯರು ಉಪಸ್ಥಿತರಿದ್ದರು. ಜಮಾಅತ್ ಕಾರ್ಯದರ್ಶಿ ಹನೀಫ್ ಮೆತ್ತಡ್ಕ ವಂಧಿಸಿದರು.















ಇನ್ನಷ್ಟು ಸುದ್ದಿಗಳು
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ