ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ವೈರಸ್ ಸೋಂಕು ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಟ್ವಿಟರ್ನಲ್ಲಿ ಖಡಕ್ ಎಚ್ಚರಿಕೆ ಸಂದೇಶವನ್ನು ನೀಡಿದ್ದಾರೆ.
ತಮ್ಮ ಅಧಿಕೃತ ಟ್ವಿಟರ್ ಖಾತೆ ಬರೆದುಕೊಂಡಿರುವ ಅವರು, ನಗರದ ಹೋಟೆಲ್, ಮಾಲ್, ಶಾಪ್, ಅಂಗಡಿ ಮಾಲೀಕರಿಗೆ ಖಡಕ್ ಎಚ್ಚರಿಕೆ ನೀಡಿದ್ದು, ಎಲ್ಲಾ ಮಾಲ್ ಹಾಗೂ ಶಾಪ್ಗಳಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಮಾಸ್ಕ್ ಧರಿಸಬೇಕು ಹಾಗೂ ಸಾಮಾಜಿಕ ಅಂತರ ಕಾಪಾಡಬೇಕು ಎಂದಿದ್ದಾರೆ.
ಇನ್ನು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಿಲ್ಲ ಅಂದ್ರೆ ಪೊಲೀಸರು ಶಾಪ್ಗಳ ಮೇಲೆ ರೈಡ್ ಮಾಡಿ. ಕಠಿಣ ಕಾನೂನು ಕ್ರಮ ಕೈಗೊಳ್ಳಲುತ್ತೇವೆ. ಅಂಗಡಿ ಹಾಗೂ ಮಾಲ್ಗಳ ಮೇಲೆ ಪೊಲೀಸರು ಈಗಾಗಲೇ ರೇಡ್ ಮಾಡುತ್ತಿದ್ದಾರೆ. ಸಾಕಷ್ಟು ಕಡೆ ಅಂಗಡಿ ಮಾಲೀಕರು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದ ಹಿನ್ನೆಲೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.