janadhvani

Kannada Online News Paper

ಸುಳ್ಯ ಡಿವಿಷನ್ SSF ಕ್ಯೂ ಟೀಂ: ಸರಕಾರಿ ಆಸ್ಪತ್ರೆ ಅವರಣ ಸ್ವಚ್ಛತೆ

ಸುಳ್ಯ: ಕರ್ನಾಟಕ ರಾಜ್ಯ ಸುನ್ನೀ ಸ್ಟುಡೆಂಟ್ಸ್ ಫೆಡರೇಶನ್(ಎಸ್.ಎಸ್.ಎಫ್) ಸುಳ್ಯ ಡಿವಿಷನ್ ಕ್ಯೂ ಟೀಂ ವತಿಯಿಂದ ಸುಳ್ಯ ತಾಲೂಕು ಸಾರ್ವಜನಿಕ ಆರೋಗ್ಯ ಕೇಂದ್ರದ ಪರಿಸರವನ್ನು ಜೂನ್27 ರಂದು ಸ್ವಚ್ಛಗೊಳಿಸಲಾಯಿತು.

ಬೆಳಗ್ಗೆ 9 ಗಂಟೆಗೆ ಆರಂಭಗೊಂಡ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿದ ಸಾರ್ವಜನಿಕ ತಾಲೂಕು ಆಸ್ಪತ್ರೆಯ ಆರೋಗ್ಯಾಧಿಕಾರಿ ಡಾ. ಕರುಣಾಕರ ಕೆ.ವಿ ರವರು ಎಸ್.ವೈ.ಎಸ್ ಹಾಗೂ ಎಸ್.ಎಸ್.ಎಫ್ ಇದರ ಕಾರ್ಯವೈಖರಿಯನ್ನು ಅಭಿನಂದಿಸಿದರು.

ತಾಲೂಕು ಆಸ್ಪತ್ರೆಯ ಶವಾಗಾರದ ಪರಿಸರದಲ್ಲಿ ಶೇಖರಣೆಗೊಂಡಿದ್ದ ಕಸ ತ್ಯಾಜ್ಯಗಳನ್ನು ಜೆಸಿಬಿ ಯಂತ್ರದ ಮೂಲಕ ತೆಗೆಸಿ ಶುಚಿಗೊಳಿಸಲಾಯಿತು. ಆಸ್ಪತ್ರೆಯ ಮುಂಭಾಗದ ಮೂಲಕ ಶವಾಗಾರಕ್ಕೆ ತೆರಳುವ ದಾರಿ ಮತ್ತು ಆಸ್ಪತ್ರೆಯ ಸುತ್ತಮುತ್ತಲೂ ಬೆಳೆದಿದ್ದ ಕಾಡು ಕೊಳೆಗಳನ್ನು ಕಟಾವು ಯಂತ್ರದ ಮೂಲಕ ತೆರವುಗೊಳಿಸಿ ಶುಚೀಕರಣ ನಡೆಸಲಾಯಿತು.

ಎಸ್. ಎಸ್. ಎಫ್ ಸುಳ್ಯ ಡಿವಿಷನ್ ಅಧ್ಯಕ್ಷ ಜಿ.ಕೆ ಇಬ್ರಾಹಿಂ ಅಮ್ಜದಿ, ದ.ಕ ಈಸ್ಟ್ ಝೋನ್ ಬ್ಲಡ್ ಸೈಬೋ ಉಸ್ತುವಾರಿ ಸಿದ್ದೀಖ್ ಗೂನಡ್ಕ, ಎಸ್.ವೈ.ಎಸ್ ನಾಯಕರುಗಳಾದ ಹಸೈನಾರ್ ಗುತ್ತಿಗಾರು, ಸಂಶುದ್ದೀನ್ ಪಳ್ಳಿಮಜಲು ಮುಂತಾದವರ ನೇತೃತ್ವದಲ್ಲಿ ಸುಮಾರು ಮೂವತ್ತರಷ್ಟು ಕಾರ್ಯಕರ್ತರು ಸ್ವಚ್ಛತಾ ಕಾರ್ಯದಲ್ಲಿಕಾರ್ಯಕರ್ತರನ್ನು ಸುಳ್ಯ ನಗರ ಪಂಚಾಯತ್ ಸದಸ್ಯ ಉಮರ್ ಕೆ.ಎಸ್. ರವರು ಪಾಲ್ಗೊಂಡು ಮಾರ್ಗದರ್ಶನಗಳನ್ನು ನೀಡಿ ಕಾರ್ಯಕರ್ತರೊಂದಿಗೆ ಸಹಕರಿಸಿದರು. ಎಸ್‌ಎಸ್‌ಎಫ್ ಸುಳ್ಯ ಸೆಕ್ಟರ್ ಅಧ್ಯಕ್ಷ ಸ್ವಬಾಹುದ್ದೀನ್ ಹಿಮಮಿ, ಕೆಸಿಎಫ್ ಅಬುಧಾಬಿ ಪಬ್ಲೀಕೇಶನ್ ಕನ್ವಿನರ್ ಕಬೀರ್ ಜಟ್ಟಿಪಳ್ಳ ಸ್ವಚತೆ ಬಗ್ಗೆ ಮಾಹಿತಿ ನೀಡಿದರು.

error: Content is protected !! Not allowed copy content from janadhvani.com