ವಿಟ್ಲ: ಎಸ್ಸೆಸ್ಸೆಫ್ ವಿಟ್ಲ ಡಿವಿಷನ್ ವ್ಯಾಪ್ತಿಯ ಎರಡು ಸ್ಥಳಗಳಲ್ಲಿ ಭಾನುವಾರ ರಕ್ತದಾನ ಶಿಬಿರ ಯಶಸ್ವಿಯಾಗಿ ನಡೆಯಿತು.
ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಬ್ಲಡ್ ಸೈಬೋ ಇದರ 156ನೇ ಕ್ಯಾಂಪ್ ವಿಟ್ಲ ದ ಸರಕಾರಿ ಆಸ್ಪತ್ರೆಯಲ್ಲಿ “ರೆಡ್ ಕ್ರಾಸ್ ಸೊಸೈಟಿ, ಹಾಗೂ ಲೇಡಿಗೋಶನ್ ಆಸ್ಪತ್ರೆ ಮಂಗಳೂರು” ಇದರ ಸಹಭಾಗಿತ್ವದಲ್ಲಿ ಎಸ್ಸೆಸ್ಸೆಫ್ ವಿಟ್ಲ ಹಾಗೂ ಮಂಗಲಪದವು ಸೆಕ್ಟರ್ ವತಿಯಿಂದ ನಡೆದಿದ್ದು, ಒಟ್ಟು 88 ಯುನಿಟ್ ರಕ್ತ ಸಂಗ್ರಹವಾಗಿದೆ.
ಹಾಗೂ ಬ್ಲಡ್ ಸೈಬೋ ಇದರ 157ನೇ ಕ್ಯಾಂಪ್ ಉಕ್ಕುಡ ಮಹಿಳಾ ಶರೀಅತ್ ಕಾಲೇಜಿನಲ್ಲಿ “ಯೇನಪೋಯ ಆಸ್ಪತ್ರೆ, ದೇರಳಕಟ್ಟೆ ಇದರ ಸಹಭಾಗಿತ್ವದಲ್ಲಿ ಎಸ್ಸೆಸ್ಸೆಫ್ ವಿಟ್ಲ ಸೌತ್ ಸೆಕ್ಟರ್ ಹಾಗೂ ಕನ್ಯಾನ ಸೆಕ್ಟರ್ ವತಿಯಿಂದ ನಡೆದಿದ್ದು, ಒಟ್ಟು 92 ಯುನಿಟ್ ರಕ್ತ ಸಂಗ್ರಹವಾಗಿದೆ. ಎರಡು ಕ್ಯಾಂಪ್ ಗಳಲ್ಲಿ ಒಟ್ಟಾಗಿ 180 ಯುನಿಟ್ ರಕ್ತ ಸಂಗ್ರಹವಾಗಿದೆ.

ಕ್ಯಾಂಪ್ ನಡೆದ ಎರಡೂ ಸ್ಥಳಗಳಿಗೆ ಬ್ಲಡ್ ಸೈಬೋ ನಾಯಕರು ಗಳಾದ ಕರೀಮ್ ಕದ್ಕಾರ್ ಬೋಳಂತೂರು, ಇಮ್ರಾನ್ ರೆಂಜಲಾಡಿ, ಹಂಝ ಮಂಚಿ, ರಝಾಕ್ ಬೈರಿಕಟ್ಟೆ ಹಾಗೂ ಎಸ್ಸೆಸ್ಸೆಫ್ ಜಿಲ್ಲಾ ಉಪಾಧ್ಯಕ್ಷರಾದ ಸಲೀಂ ಹಾಜಿ ಬೈರಿಕಟ್ಟೆ, ಜಿಲ್ಲಾ ಸದಸ್ಯರಾದ ಅಬ್ದುರ್ರಹ್ಮಾನ್ ಶರಫಿ ಮೂಡಂಬೈಲು, ವಿಟ್ಲ ಡಿವಿಷನ್ ಅಧ್ಯಕ್ಷರಾದ ಅಬೂಬಕ್ಕರ್ ಹಿಮಮಿ ಸಖಾಫಿ, ನಾಯಕರಾದ ಅಬ್ದುಲ್ ಖಾದರ್ ಕೊಡಂಗಾಯಿ, ಜಲೀಲ್ ಒಕ್ಕೆತ್ತೂರು, ಅಶ್ಫಾಕ್ ಟಿಪ್ಪುನಗರ ಮೊದಲಾದವರು ಭೇಟಿ ನೀಡಿ ಶುಭಹಾರೈಸಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ