ರಿಯಾದ್: ಸೌದಿ ಅರೇಬಿಯಾದ ಜಿಝಾನ್ ಬೇಶ್ ನಲ್ಲಿ ಪೆಟ್ರೋಫಾಕ್ ಕಂಪೆನಿಯಲ್ಲಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೇಳ್ತಾಜೆ ನಿವಾಸಿಯಾದ ಅಬ್ದುಲ್ ರಝಾಕ್ ಮುಹಮ್ಮದ್ (47 ) ಅವರು ಅಲ್ಪ ಕಾಲದ ಅಸೌಖ್ಯದಿಂದ ಜಿಝಾನ್ ಅಲ್ ಹಯಾತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಆದಿತ್ಯ ವಾರ ದಿನಾಂಕ 28/06/2020 ರಂದು ನಿಧನರಾದರು.

ಈ ದುಃಖ ವಾರ್ತೆಯನ್ನು ಅವರ ಮನೆಯವರಿಗೆ ತಿಳಿಸಿ ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿರುವ ಅವರ ಸೋದರ ಸಂಬಂಧಿ ಮೂಡಿಗೆರೆಯ ಅಝರುದ್ದೀನ್ ಅವರನ್ನು ಸಂಪರ್ಕಿಸಿದ ಪೆಟ್ರೋಫಾಕ್ ಅಡ್ಮಿನ್ ಅಬ್ದುಲ್ ರಶೀದ್ ನೆಲ್ಯಾಡಿ ಅವರು ಜಿಝಾನ್ ನಲ್ಲಿ ದಫನ ಮಾಡಲು ಅವರ ಮನೆಯವರ ಸಮ್ಮತಿಯನ್ನು ಪಡೆದರು.
ಇದಕ್ಕೆ ಬೇಕಾದ ಎಲ್ಲಾ ದಾಖಲೆಗಳನ್ನು ಕೆ.ಸಿ.ಎಫ್ ಮದೀನಾ ನೇತಾರರಾದ ಜ|| ಅಬ್ದುಲ್ ರಝಾಕ್ ಉಳ್ಳಾಲ ಅವರು ಸರಿಪಡಿಸಿ ಕೊಟ್ಟು ದಫನ ಕಾರ್ಯಕ್ಕೆ ಇದ್ದ ತೊಡಕುಗಳನ್ನು ನಿವಾರಿಸಿದರು. ದಿನಾಂಕ 01/07/2020 ಬುಧವಾರ ಪೂರ್ವಾಹ್ನ 11 ಘಂಟೆಗೆ ಜಿಝಾನ್ ಖಬರಸ್ಥಾನದಲ್ಲಿ ದಫನ ಮಾಡಲಾಯಿತು. ಮೃತರು ಪತ್ನಿ, ಪುತ್ರಿ ಮತ್ತು ಇಬ್ಬರು ಪುತ್ರರು ಸೇರಿದಂತೆ ಅನೇಕ ಬಂಧು ಮಿತ್ರ ರನ್ನು ಅಗಲಿದ್ದಾರೆ.
ಪೆಟ್ರೋಫಾಕ್ ಕಂಪೆನಿಯ ರಾಝಿಕ್ ನೆಲ್ಯಾಡಿ ಅಗತ್ಯ ಸಹಕಾರ ನೀಡಿದರು.
ಕೆ.ಸಿ.ಎಫ್ ಬೇಶ್ ನ ಕಾರ್ಯಕರ್ತರು, ಪೆಟ್ರೋಫಾಕ್ ಕಂಪೆನಿಯ ಉದ್ಯೋಗಿಗಳು ಹಾಗೂ ಮೃತರ ಸ್ನೇಹಿತರು ಸ್ಥಳದಲ್ಲಿ ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?