ರಿಯಾದ್: ಸೌದಿ ಅರೇಬಿಯಾದ ಜಿಝಾನ್ ಬೇಶ್ ನಲ್ಲಿ ಪೆಟ್ರೋಫಾಕ್ ಕಂಪೆನಿಯಲ್ಲಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೇಳ್ತಾಜೆ ನಿವಾಸಿಯಾದ ಅಬ್ದುಲ್ ರಝಾಕ್ ಮುಹಮ್ಮದ್ (47 ) ಅವರು ಅಲ್ಪ ಕಾಲದ ಅಸೌಖ್ಯದಿಂದ ಜಿಝಾನ್ ಅಲ್ ಹಯಾತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಆದಿತ್ಯ ವಾರ ದಿನಾಂಕ 28/06/2020 ರಂದು ನಿಧನರಾದರು.

ಈ ದುಃಖ ವಾರ್ತೆಯನ್ನು ಅವರ ಮನೆಯವರಿಗೆ ತಿಳಿಸಿ ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿರುವ ಅವರ ಸೋದರ ಸಂಬಂಧಿ ಮೂಡಿಗೆರೆಯ ಅಝರುದ್ದೀನ್ ಅವರನ್ನು ಸಂಪರ್ಕಿಸಿದ ಪೆಟ್ರೋಫಾಕ್ ಅಡ್ಮಿನ್ ಅಬ್ದುಲ್ ರಶೀದ್ ನೆಲ್ಯಾಡಿ ಅವರು ಜಿಝಾನ್ ನಲ್ಲಿ ದಫನ ಮಾಡಲು ಅವರ ಮನೆಯವರ ಸಮ್ಮತಿಯನ್ನು ಪಡೆದರು.
ಇದಕ್ಕೆ ಬೇಕಾದ ಎಲ್ಲಾ ದಾಖಲೆಗಳನ್ನು ಕೆ.ಸಿ.ಎಫ್ ಮದೀನಾ ನೇತಾರರಾದ ಜ|| ಅಬ್ದುಲ್ ರಝಾಕ್ ಉಳ್ಳಾಲ ಅವರು ಸರಿಪಡಿಸಿ ಕೊಟ್ಟು ದಫನ ಕಾರ್ಯಕ್ಕೆ ಇದ್ದ ತೊಡಕುಗಳನ್ನು ನಿವಾರಿಸಿದರು. ದಿನಾಂಕ 01/07/2020 ಬುಧವಾರ ಪೂರ್ವಾಹ್ನ 11 ಘಂಟೆಗೆ ಜಿಝಾನ್ ಖಬರಸ್ಥಾನದಲ್ಲಿ ದಫನ ಮಾಡಲಾಯಿತು. ಮೃತರು ಪತ್ನಿ, ಪುತ್ರಿ ಮತ್ತು ಇಬ್ಬರು ಪುತ್ರರು ಸೇರಿದಂತೆ ಅನೇಕ ಬಂಧು ಮಿತ್ರ ರನ್ನು ಅಗಲಿದ್ದಾರೆ.
ಪೆಟ್ರೋಫಾಕ್ ಕಂಪೆನಿಯ ರಾಝಿಕ್ ನೆಲ್ಯಾಡಿ ಅಗತ್ಯ ಸಹಕಾರ ನೀಡಿದರು.
ಕೆ.ಸಿ.ಎಫ್ ಬೇಶ್ ನ ಕಾರ್ಯಕರ್ತರು, ಪೆಟ್ರೋಫಾಕ್ ಕಂಪೆನಿಯ ಉದ್ಯೋಗಿಗಳು ಹಾಗೂ ಮೃತರ ಸ್ನೇಹಿತರು ಸ್ಥಳದಲ್ಲಿ ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ