ರಾಸ್ ಅಲ್ ಖೈಮಾ : ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾದ ತನ್ನ ಮಗನಿಗೆ ಹೊಸ ಮೊಬೈಲ್ ಫೋನ್ ಉಡುಗೊರೆಯಾಗಿ ನೀಡಲು ಊರಿಗೆ ಹೊರಟ ಪ್ರವಾಸಿ ತಂದೆಯೊಬ್ಬರು ಏರ್ ಪೋರ್ಟಿನಲ್ಲೇ ಮರಣಕ್ಕೆ ತುತ್ತಾಗಿರುವ ಘಟನೆ ಮಂಗಳವಾರ ವರದಿಯಾಗಿದೆ.
ಚಿನ್ನದ ವ್ಯಾಪಾರಿ ಕೇರಳದ ಕೋಝಿಕ್ಕೋಡ್ ಜಿಲ್ಲೆಯವರಾದ ಪವಿತ್ರನ್ ಮಂಚಕ್ಕಲ್ (50) ಎಂಬವರೇ ಈ ದುರ್ಧೈವಿ. ಕೊರೋನಾ ಹಿನ್ನೆಲೆಯಲ್ಲಿ ಮೂರು ತಿಂಗಳ ಹಿಂದೆ ಕೆಲಸ ಕಳೆದುಕೊಂಡ ಪವಿತ್ರನ್ ಗೆ ಗೆಳೆಯರೊಬ್ಬರು ಊರಿಗೆ ಮರಳುವ ಚಾರ್ಟರ್ಡ್ ವಿಮಾನದ ಟಿಕೆಟ್ ವ್ಯವಸ್ಥೆ ಮಾಡಿಕೊಟ್ಟಿದ್ದರು. ತನ್ನ ಮಗ ಪರೀಕ್ಷೆಯಲ್ಲಿ ಅತ್ಯುತ್ತಮ ದರ್ಜೆಯಲ್ಲಿ ತೇರ್ಗಡೆಯಾದ ವಿವರ ಲಭಿಸಿದ ಇವರು ಅತೀವ ಸಂತೋಷದಲ್ಲಿದ್ದರು. ಮಂಗಳವಾರ ರಾತ್ರಿ 11.30 ಕ್ಕೆ ಹೊರಡಬೇಕಿದ್ದ ವಿಮಾನಕ್ಕೆ ಸಾಯಂಕಾಲ 6.30 ಕ್ಕೆ ವಿಮಾನ ನಿಲ್ದಾಣ ತಲುಪಿದ್ದರು.
ಪವಿತ್ರನ್ ರವರ ಮರಣ ವಾರ್ತೆ ಲಭಿಸಿದ ಬಳಿಕ ಯುಎಇ ಮೂಲದ ಹೆಲ್ತ್ ಕೇರ್ ಕಂಪನಿಯ ಡೈರೆಕ್ಟರ್ ಡಾ ಸಂಶೀರ್ ವಾಯಲಿಲ್ ಅವರ ಮಗಳನ್ನು ತಾನು ಉನ್ನತ ವಿದ್ಯಾಭ್ಯಾಸ ಪಡೆಯಲು ಸಹಾಯ ಮಾಡುವುದಾಗಿ ಹೇಳಿದ್ದೂ ಅಲ್ಲದೆ ಪವಿತ್ರನ್ ಕುಟುಂಬಕ್ಕೆ 5 ಲಕ್ಷ ರೂಗಳ ಸಹಾಯ ಹಸ್ತವನ್ನೂ ನೀಡಿದ್ದಾರೆ.















ಇನ್ನಷ್ಟು ಸುದ್ದಿಗಳು
’60 ದಿನಗಳಲ್ಲಿ ಹೊಸ ಕೆಲಸ ಹುಡುಕಿ, ಇಲ್ಲದಿದ್ದರೆ ದೇಶ ತೊರೆಯಿರಿ’- ಭಾರತೀಯ ಉದ್ಯೋಗಿಗಳಿಗೆ ಆತಂಕ
ಗಲ್ಫ್ ನಾಯಕರ ವಿನಂತಿಗೆ ಮನ್ನಣೆ ; ಇರಾನ್ ಮೇಲಿನ ದಾಳಿ ತಾತ್ಕಾಲಿಕ ರದ್ದು- ಟ್ರಂಪ್
‘ಯುದ್ಧ ಕೊನೆಗೊಳಿಸುವುದಕ್ಕೆ ಆದ್ಯತೆ ನೀಡಬೇಕು’- ಅಮೆರಿಕದ 14 ಅಂಶಗಳ ಪ್ರಸ್ತಾವನೆಗೆ ಇರಾನ್ ಪ್ರತಿಕ್ರಿಯೆ
ಕೊಲೆ ಬೆದರಿಕೆ, ದಂಗೆಯ ಸಾಧ್ಯತೆ; ನಿವಾಸ ಬಿಟ್ಟು ಹೊರಬಾರದ ಪುಟಿನ್- ಭದ್ರತಾ ವ್ಯವಸ್ಥೆಯಲ್ಲಿ ಭಾರಿ ಬದಲಾವಣೆ
ಇರಾಕ್ನ ನೂತನ ಪ್ರಧಾನ ಮಂತ್ರಿಯಾಗಿ ಉದ್ಯಮಿ ಅಲಿ ಅಲ್-ಝೈದಿ ಆಯ್ಕೆ- ದೇಶದ ರಾಜಕೀಯದಲ್ಲಿ ಹೊಸ ಯುಗ?
ಅಮೆರಿಕಕ್ಕೆ ಇರಾನ್ನಿಂದ ‘ಬಿಗ್ ಡೀಲ್’: ಹೋರ್ಮುಜ್ ಜಲಸಂಧಿ ತೆರೆಯಲು ಸಿದ್ಧ, ಆದರೆ ಒಂದು ಷರತ್ತು!
ಟ್ರಂಪ್ ಔತಣಕೂಟದಲ್ಲಿ ಶೂಟೌಟ್: ನಾಸಾ ಫೆಲೋಶಿಪ್ ಪಡೆದ ಎಂಜಿನಿಯರ್ ಬಂಧನ
ಇರಾನ್ ಜೊತೆಗಿನ ಸಂಧಾನಕ್ಕೆ ಬ್ರೇಕ್? – ಅಮೆರಿಕ ನಿಯೋಗದ ಪ್ರವಾಸ ರದ್ದುಪಡಿಸಿದ ಟ್ರಂಪ್
ಇಸ್ರೇಲ್ ಪ್ರಧಾನಿಗೆ ಕ್ಯಾನ್ಸರ್: ಇರಾನ್ ಭಯದಿಂದ ವಿಷಯ ಮುಚ್ಚಿಟ್ಟಿದ್ದಾಗಿ ಸ್ಪಷ್ಟನೆ
ಇರಾನ್ ಪರ ಗುಂಪುಗಳ ದಾಳಿ ಹಿನ್ನೆಲೆ: ಇರಾಕ್ಗೆ ಸೇರಬೇಕಿದ್ದ 500 ಮಿಲಿಯನ್ ಡಾಲರ್ ನಗದು ಸಾಗಾಟವನ್ನು ತಡೆದ ಅಮೆರಿಕ