ಮಂಗಳೂರು: ಕೊರೋನಾ ಮಹಾಮಾರಿಯು ವ್ಯಾಪಕವಾಗಿ ಹರಡುತ್ತಿರುವ ಪ್ರಸಕ್ತ ಪರಿಸ್ಥಿತಿಯಲ್ಲಿ ಸಾರ್ವಜನಿಕರು ಅತೀ ಅಗತ್ಯಕ್ಕಲ್ಲದೆ ಮನೆಯಿಂದ ಹೊರಡದೆ ಮನೆಯಲ್ಲೇ ಇರುವಂತೆ ಮುಸ್ಲಿಂ ಒಕ್ಕೂಟ ಕರೆ ನೀಡಿದೆ.
ಸಾಧ್ಯವಾದಷ್ಟು ಒಳಾಂಗಣದಲ್ಲಿಯೇ ಇರುವುದು ಅತೀ ಅಗತ್ಯ ವಾಗಿದೆ.ಹೊರಾಂಗಣ ಭೇಟಿಯನ್ನು ತಾತ್ಕಾಲಿಕ ರದ್ದುಪಡಿಸುವುದು ಉತ್ತಮ. ಪ್ರಸ್ತುತ ಕೋರೋನಾ ಸೋಂಕು ಬಾಧಿತರ ಸಂಖ್ಯೆ ಅಧಿಕವಾಗಿರುವುದರಿಂದ ಮುಂಜಾಗ್ರತೆ ವಹಿಸಿ. ಈ ಆರೋಗ್ಯ ತುರ್ತು ಸ್ಥಿತಿಯನ್ನು ನಿಭಾಯಿಸಲು ಸಾರ್ವಜನಿಕರು ಸಹಕರಿ ಸಬೇಕಿದೆ.
ಕೊರೋನಾ ಮಹಾಮಾರಿಗೆ ಬಲಿಯಾಗುತ್ತಿರುವವರ ಸಂಖ್ಯೆ ದಿನೇನೆ ಹೆಚ್ಚುತ್ತಿರುವುದು ದುಃಖಕರ,ಕೊರೋನಾಕೆ ಬಲಿಯಾದವರ ಮೃತ ದೇಹಗಳ ಅಂತ್ಯಕ್ರಿಯೆ ಸಂಧರ್ಭಗಳಲ್ಲಿ ಆಗುತ್ತಿರುವ ಅಡೆ ತಡೆ ಗಳನ್ನು ನಿವಾರಿಸುವ ಜವಾಬ್ದಾರಿಯು ಮಾನವೀಯತೆಯ ನೆಲೆಯಲ್ಲಿ ಸರ್ವರ ಮೇಲಿದೆ.
ಈ ಬಗ್ಗೆ ಪ್ರತೀ ಮಸೀದಿ ಮತ್ತು ಜಮಾಅತ್ ಗಳಲ್ಲಿ ಆಯಾ ಜಮಾಅತ್ ವ್ಯಾಪ್ತಿಯ ಅಥವಾ ಹೊರಗಿನ ಕೊರೋನಿ ಬಾಧಿತ ಮೃತ ದೇಹಗಳನ್ನು ಮುಕ್ತ ಮತ್ತು ವಿವಾದಾತೀತವಾಗಿ ದಫನ ಗೊಳಿಸುವಂತೆ ಪೂರಕ ನಿರ್ಣಯ ಕೈಗೊಳ್ಳಬೇಕಾದ ಅಗತ್ಯವಿದೆ. ಸರ್ವ ಜಮಾಅತ್ ಕಮಿಟಿಗಳು ಈ ಸತ್ಕಾರ್ಯಕ್ಕೆ ಸ್ಪಂದಿಸುವಂತೆ ವಿನಂತಿ.
ಕೆ.ಅಶ್ರಫ್
(ಅಧ್ಯಕ್ಷರು, ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ)















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್
ಸರಕಾರದ ಆದೇಶ, ತುಳುನಾಡಿನ ಜನತೆಯ ಒಗ್ಗಟ್ಟಿನ ಹೋರಾಟದ ಫಲ- ಮುನೀರ್ ಕಾಟಿಪಳ್ಳ
ಮುಸ್ಲಿಮ್ ವರ್ತಕರ ಮೇಲೆ ಹಲ್ಲೆ: ಮುಸ್ಲಿಮ್ ಮುಖಂಡರ ಭೇಟಿ, ಗಂಭೀರ ಪರಿಗಣನೆ- ಕೆ.ಅಶ್ರಫ್