ಮಂಗಳೂರು: ಭಾನುವಾರ ನಗರದ ವೆನ್ಲಾಕ್ ಕೋವಿಡ್ ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದ ವ್ಯಕ್ತಿಯನ್ನು ಪತ್ತೆಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಪುತ್ತೂರು ದರ್ಬೆ ನಿವಾಸಿ ದೇವರಾಜ್ ಎಂಬ ವ್ಯಕ್ತಿ ಸ್ವಇಚ್ಛೆಯಿಂದ ಜುಲೈ 1ರಂದು ಕೋವಿಡ್ 19 ರೋಗ ಲಕ್ಷಣಗಳು ಇದೆ ಎಂಬ ಕಾರಣ ಆಸ್ಪತ್ರೆಗೆ ಬಂದ ವ್ಯಕ್ತಿಯನ್ನು ವಾರ್ಡ್ ಒಂದರಲ್ಲಿ ದಾಖಲಿಸಿಕೊಂಡ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು. ಭಾನುವಾರ ಈತನಿಗೆ ಕೋವಿಡ್ 19 ದೃಢ ಪಟ್ಟಿದೆ. ನಂತರ ಸುಮಾರು 4 ಗಂಟೆಯ ಸಮಯ ವೆನ್ ಲಾಕ್ ಆಸ್ಪತ್ರೆಯ ಕೋವಿಡ್ ಬ್ಲಾಕ್ ನಿಂದ ತಪ್ಪಿಸಿಕೊಂಡು ಹೋಗಿದ್ದ ಈತನ ಮೇಲೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಹುಡುಕಾಟ ನಡೆಸಲಾಗಿತ್ತು.
ಈ ಬಗ್ಗೆ ಟ್ವೀಟ್ ಮಾಡಿರುವ ಪೊಲೀಸ್ ಕಮಿಷನರ್ ವಿಕಾಶ್ ಕುಮಾರ್ ಅವರು, ಕಾನ್ ಸ್ಟೇಬಲ್ ಗಳಾದ ಶಂಕರಪ್ಪ ಲಮಾಣಿ ಹಾಗೂ ಶಂಕರಪ್ಪ ನಂದಿಯಾಳ್ ಅವರು ಪರಾರಿಯಾಗಿದ್ದ ಕೊರೊನಾ ಸೋಂಕಿತನನ್ನು ಪತ್ತೆಹಚ್ಚುವ ಮೂಲಕ ಒಳ್ಳೆಯ ಕೆಲಸ ಮಾಡಿದ್ದಾರೆ. ಈ ಮೂಲಕ ಕೊರೊನಾ ಸೋಂಕಿತ ಮತ್ತಷ್ಟು ಜನರಿಗೆ ಸೋಂಕು ಹರಡುವುದನ್ನು ತಪ್ಪಿಸಿದಂತಾಗಿದೆ ಎಂದು ಶ್ಲಾಘಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್