ಬೆಂಗಳೂರು (ಜನಧ್ವನಿ ವಾರ್ತೆ): ಬೆಂಗಳೂರು ಸೇರಿದಂತೆ ರಾಜ್ಯದ ಏಳು ಜಿಲ್ಲೆಗಳನ್ನು ಲಾಕ್ ಡೌನ್ ಮಾಡಲು ಸೂಕ್ತ ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ನಿರ್ಧರಿಸಿದ್ದಾರೆ ಎನ್ನಲಾಗಿದ್ದು, ಈ ಬಗ್ಗೆ ಸೋಮವಾರ ಎಲ್ಲಾ ಜಿಲ್ಲಾಧಿಕಾರಿಗಳ ಜೊತೆ ಸಿಎಂ ವಿಡಿಯೋ ಕಾನ್ಪರೆನ್ಸ್ ಮೂಲಕ ಸಭೆ ನಡೆಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ.
ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಈ ಹಿನ್ನೆಲೆ ಸಿಎಂ ಯಡಿಯೂರಪ್ಪ ಇಂದು ಉನ್ನತ ಮಟ್ಟದ ಸಭೆ ನಡೆಸುತ್ತಿದ್ದು, ಹಲವು ಮಹತ್ವದ ನಿರ್ಧಾರ ಕೈಗೊಳ್ಳಲಿದ್ದಾರೆ. ಜೊತೆಗೆ ಬೆಂಗಳೂರು 1 ವಾರದ ಮಟ್ಟಿಗೆ ಲಾಕ್ ಡೌನ್ ಮಾಡಲು ಸಿಎಂ ನಿರ್ಧರಿಸಿದ್ದು, ಈ ಬಗ್ಗೆ ಅಧಿಕೃತ ಘೋಷಣೆಯೊಂದ ಬಾಕಿಯಿದೆ. ದಕ್ಷಿಣ ಕನ್ನಡ, ಬಳ್ಳಾರಿ, ಬೀದರ್, ಯಾದಗಿರಿ, ಧಾರವಾಡ ಸೇರಿದಂತೆ 7 ಜಿಲ್ಲೆಗಳು ಲಾಕ್ ಡೌನ್ ಆಗಲಿದೆ ಎನ್ನಲಾಗಿದೆ.
ಸಂಪೂರ್ಣವಾಗಿ ಇಡಿ ಕರ್ನಾಟಕ ಬಂದ್ ಮಾಡಿದರೆ ಅನುಕೂಲ ಆಗುತ್ತದೆ ಯಾಕೇಂದ್ರೆ ಈ ಒಂದು ಮಹಾಮಾರಿ ಎಲ್ಲ ಹಳ್ಳಿ ಹಳ್ಳಿಗಳಲ್ಲಿ ಹರಡುತ್ತಿದೆ ಆದಕಾರಣ ಮತ್ತೋಮ್ಮೆ ಲಾಕ್ ಡೌನ್ ಮಾಡಿದರೆ ಎಲ್ಲರಿಗೂ ಅನುಕೂಲ ಆಗುತ್ತದೆ ಇದು ನನ್ನ ಅಭಿಪ್ರಾಯ
ಯಮನೂರ
ಹರಿಹರ ತಾಲೂಕು
ದಾವಣಗೆರೆ ಜಿಲ್ಲೆ