janadhvani

Kannada Online News Paper

ರಾಜ್ಯದ 6 ಜಿಲ್ಲೆಗಳಲ್ಲಿ ಲಾಕ್ ಡೌನ್ ಸಾಧ್ಯತೆ…!

ಬೆಂಗಳೂರು (ಜನಧ್ವನಿ ವಾರ್ತೆ): ಬೆಂಗಳೂರು ಸೇರಿದಂತೆ ರಾಜ್ಯದ ಏಳು ಜಿಲ್ಲೆಗಳನ್ನು ಲಾಕ್ ಡೌನ್ ಮಾಡಲು ಸೂಕ್ತ ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ನಿರ್ಧರಿಸಿದ್ದಾರೆ ಎನ್ನಲಾಗಿದ್ದು, ಈ ಬಗ್ಗೆ ಸೋಮವಾರ ಎಲ್ಲಾ ಜಿಲ್ಲಾಧಿಕಾರಿಗಳ ಜೊತೆ ಸಿಎಂ ವಿಡಿಯೋ ಕಾನ್ಪರೆನ್ಸ್ ಮೂಲಕ ಸಭೆ ನಡೆಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ.

ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಈ ಹಿನ್ನೆಲೆ ಸಿಎಂ ಯಡಿಯೂರಪ್ಪ ಇಂದು ಉನ್ನತ ಮಟ್ಟದ ಸಭೆ ನಡೆಸುತ್ತಿದ್ದು, ಹಲವು ಮಹತ್ವದ ನಿರ್ಧಾರ ಕೈಗೊಳ್ಳಲಿದ್ದಾರೆ. ಜೊತೆಗೆ ಬೆಂಗಳೂರು 1 ವಾರದ ಮಟ್ಟಿಗೆ ಲಾಕ್ ಡೌನ್ ಮಾಡಲು ಸಿಎಂ ನಿರ್ಧರಿಸಿದ್ದು, ಈ ಬಗ್ಗೆ ಅಧಿಕೃತ ಘೋಷಣೆಯೊಂದ ಬಾಕಿಯಿದೆ. ದಕ್ಷಿಣ ಕನ್ನಡ, ಬಳ್ಳಾರಿ, ಬೀದರ್, ಯಾದಗಿರಿ, ಧಾರವಾಡ ಸೇರಿದಂತೆ 7 ಜಿಲ್ಲೆಗಳು ಲಾಕ್ ಡೌನ್ ಆಗಲಿದೆ ಎನ್ನಲಾಗಿದೆ.

error: Content is protected !! Not allowed copy content from janadhvani.com