ಚಿಕ್ಕಮಗಳೂರು:ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋಧ್ಯಮ ಸಚಿವ ಸಿ.ಟಿ. ರವಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಥರ್ಡ್ ಅಂಪೈರ್ ರಿಸಲ್ಟ್ಗಾಗಿ ಕಾಯುತ್ತಿದ್ದ ಸಚಿವರಿಗೆ ಶಾಕ್ ಎದುರಾಗಿದೆ.
ಹೌದು, ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಟಿ. ರವಿ ಒಂದು ವಾರದಲ್ಲಿ ಎರಡು ಬಾರಿ ಕೊರೋನಾ ಟೆಸ್ಟ್ ಮಾಡಿಸಿಕೊಂಡಿದ್ದರು. ಈ ಪೈಕಿ ಒಮ್ಮೆ ನೆಗೆಟಿವ್ ಬಂದರೆ ಮತ್ತೊಮ್ಮೆ ಪಾಸಿಟಿವ್ ಬಂದಿತ್ತು. ಹೀಗಾಗಿ ಮೂರನೇ ಬಾರಿಗೆ ಟೆಸ್ಟ್ಗೆ ಒಳಗಾಗಿ ಥರ್ಡ್ ಅಂಪೈರ್ ರಿಸಲ್ಟ್ಗಾಗಿ ಕಾಯುತ್ತಿದ್ದೇನೆ ಎಂದು ಭಾನುವಾರವಷ್ಟೇ(ಜು.12) ಅವರು ಟ್ವೀಟ್ ಮಾಡಿದ್ದರು. ಇದೀಗ ಥರ್ಡ್ ಅಂಪೈರ್ ರಿಸಲ್ಟ್ ‘ಔಟ್’ ಆಗಿದೆ. ಇದರೊಂದಿಗೆ ಸಿ.ಟಿ. ರವಿ ಕೊರೋನಾ ಸೋಂಕಿಗೆ ತುತ್ತಾದ ರಾಜ್ಯದ ಮೊದಲ ಸಚಿವ ಎನಿಸಿದ್ದಾರೆ.
ಥರ್ಡ್ ಅಂಪೈರ್ ಫಲಿತಾಂಶದಲ್ಲಿ ನನಗೆ ಕೋವಿಡ್ ಪಾಸಿಟಿವ್ ಇದೆ ಎಂಬುದು ದೃಢವಾಗಿದೆ. ಆದರೆ ಯಾವುದೇ ತೊಂದರೆಗಳ ಲಕ್ಷಣಗಳಿಲ್ಲದೆ ನಾನು ಸಹಜವಾಗಿದ್ದೇನೆ. ಸೂಕ್ತ ಚಿಕಿತ್ಸೆಗಳನ್ನು ಪಡೆಯುತ್ತಾ ನಾನು ಇಲ್ಲಿಂದಲೇ ಕೆಲಸ ಮುಂದುವರಿಸುಲಿದ್ದು ಆದಷ್ಟು ಬೇಗ ಗುಣಮುಖನಾಗಿ ನಿಮ್ಮೆಲ್ಲರೊಂದಿಗೆ ಕೆಲಸ ಮಾಡುತ್ತೇನೆ ಎಂದು ಸಿ.ಟಿ. ರವಿ ಟ್ವೀಟ್ ಮೂಲಕ ತಮಗೆ ಸೋಂಕು ತಗುಲಿರುವುದನ್ನು ಖಚಿತ ಪಡಿಸಿದ್ದಾರೆ.
ಕೊರೋನಾ ವೈರಸ್ ಜನಸಾಮಾನ್ಯರು, ಕೊರೋನಾ ವಾರಿಯರ್ಸ್ ಮಾತ್ರವಲ್ಲದೆ ಇದೀಗ ರಾಜಕಾರಣಿಗಳನ್ನು ಕಾಡಲಾರಂಭಿಸಿದೆ. ಕುಣಿಗಲ್ ಕಾಂಗ್ರೆಸ್ ಶಾಸಕ ಡಾ. ರಂಗನಾಥ್, ಶರತ್ ಬಚ್ಚೇಗೌಡ, ಶೃಂಗೇರಿ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ, ಸೇಡಂ ಬಿಜೆಪಿ ಶಾಸಕ ರಾಜಕುಮಾರ್ ಪಾಟೀಲ್ ಸೇರಿದಂತೆ ರಾಜ್ಯದಲ್ಲಿ ಹಲವರಿಗೆ ಕೊರೋನಾ ಸೋಂಕು ವಕ್ಕರಿಸಿದೆ.

ಹೌದು, ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಟಿ. ರವಿ ಒಂದು ವಾರದಲ್ಲಿ ಎರಡು ಬಾರಿ ಕೊರೋನಾ ಟೆಸ್ಟ್ ಮಾಡಿಸಿಕೊಂಡಿದ್ದರು. ಈ ಪೈಕಿ ಒಮ್ಮೆ ನೆಗೆಟಿವ್ ಬಂದರೆ ಮತ್ತೊಮ್ಮೆ ಪಾಸಿಟಿವ್ ಬಂದಿತ್ತು. ಹೀಗಾಗಿ ಮೂರನೇ ಬಾರಿಗೆ ಟೆಸ್ಟ್ಗೆ ಒಳಗಾಗಿ ಥರ್ಡ್ ಅಂಪೈರ್ ರಿಸಲ್ಟ್ಗಾಗಿ ಕಾಯುತ್ತಿದ್ದೇನೆ ಎಂದು ಭಾನುವಾರವಷ್ಟೇ(ಜು.12) ಅವರು ಟ್ವೀಟ್ ಮಾಡಿದ್ದರು. ಇದೀಗ ಥರ್ಡ್ ಅಂಪೈರ್ ರಿಸಲ್ಟ್ ‘ಔಟ್’ ಆಗಿದೆ. ಇದರೊಂದಿಗೆ ಸಿ.ಟಿ. ರವಿ ಕೊರೋನಾ ಸೋಂಕಿಗೆ ತುತ್ತಾದ ರಾಜ್ಯದ ಮೊದಲ ಸಚಿವ ಎನಿಸಿದ್ದಾರೆ.

ಥರ್ಡ್ ಅಂಪೈರ್ ಫಲಿತಾಂಶದಲ್ಲಿ ನನಗೆ ಕೋವಿಡ್ ಪಾಸಿಟಿವ್ ಇದೆ ಎಂಬುದು ದೃಢವಾಗಿದೆ. ಆದರೆ ಯಾವುದೇ ತೊಂದರೆಗಳ ಲಕ್ಷಣಗಳಿಲ್ಲದೆ ನಾನು ಸಹಜವಾಗಿದ್ದೇನೆ. ಸೂಕ್ತ ಚಿಕಿತ್ಸೆಗಳನ್ನು ಪಡೆಯುತ್ತಾ ನಾನು ಇಲ್ಲಿಂದಲೇ ಕೆಲಸ ಮುಂದುವರಿಸುಲಿದ್ದು ಆದಷ್ಟು ಬೇಗ ಗುಣಮುಖನಾಗಿ ನಿಮ್ಮೆಲ್ಲರೊಂದಿಗೆ ಕೆಲಸ ಮಾಡುತ್ತೇನೆ ಎಂದು ಸಿ.ಟಿ. ರವಿ ಟ್ವೀಟ್ ಮೂಲಕ ತಮಗೆ ಸೋಂಕು ತಗುಲಿರುವುದನ್ನು ಖಚಿತ ಪಡಿಸಿದ್ದಾರೆ.
ಕೊರೋನಾ ವೈರಸ್ ಜನಸಾಮಾನ್ಯರು, ಕೊರೋನಾ ವಾರಿಯರ್ಸ್ ಮಾತ್ರವಲ್ಲದೆ ಇದೀಗ ರಾಜಕಾರಣಿಗಳನ್ನು ಕಾಡಲಾರಂಭಿಸಿದೆ. ಕುಣಿಗಲ್ ಕಾಂಗ್ರೆಸ್ ಶಾಸಕ ಡಾ. ರಂಗನಾಥ್, ಶರತ್ ಬಚ್ಚೇಗೌಡ, ಶೃಂಗೇರಿ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ, ಸೇಡಂ ಬಿಜೆಪಿ ಶಾಸಕ ರಾಜಕುಮಾರ್ ಪಾಟೀಲ್ ಸೇರಿದಂತೆ ರಾಜ್ಯದಲ್ಲಿ ಹಲವರಿಗೆ ಕೊರೋನಾ ಸೋಂಕು ವಕ್ಕರಿಸಿದೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ