ಬೆಂಗಳೂರು:ಅಗತ್ಯ ಸೇವೆಗಳ ವ್ಯಾಪ್ತಿಯಲ್ಲಿ ಬ್ಯಾಂಕಿಂಗ್ ಬರುವುದರಿಂದ, ಲಾಕ್ಡೌನ್ ಅವಧಿಯಲ್ಲಿ ಬೆಂಗಳೂರು ಮತ್ತು ಕೆಲವು ಜಿಲ್ಲೆಗಳಲ್ಲಿ ಎಲ್ಲ ಬ್ಯಾಂಕ್ಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಎಲ್ಲ ಎಟಿಎಂಗಳೂ ಯಥಾಸ್ಥಿತಿಯಲ್ಲಿ ಸೇವೆಗಳನ್ನು ನೀಡಲಿವೆ.
ಹೀಗಿದ್ದರೂ, ಬ್ಯಾಂಕ್ ಶಾಖೆಗಳಲ್ಲಿ ಸಿಬ್ಬಂದಿ ಸಂಖ್ಯೆ ಸೀಮಿತವಾಗುವ ಸಾಧ್ಯತೆ ಇದೆ. ಆದ್ದರಿಂದ ಪ್ರಾಥಮಿಕ ಬ್ಯಾಂಕಿಂಗ್ ಸೇವೆ ಹೊರತುಪಡಿಸಿ ಉಳಿದ ಸೇವೆಯಲ್ಲಿ ಸ್ವಲ್ಪಮಟ್ಟಿನ ವ್ಯತ್ಯಯವಾಗಬಹುದು. ಉದಾಹರಣೆಗೆ ಚೆಕ್ ಕ್ಲಿಯರೆನ್ಸ್ನಲ್ಲಿ ತುಸು ವ್ಯತ್ಯಯವಾಗಬಹುದು. ಆದರೆ ಹಣವನ್ನು ಠೇವಣಿ ಇಡಲು ಹಾಗೂ ಹಿಂತೆಗೆದುಕೊಳ್ಳಲು ಯಾವುದೇ ತೊಂದರೆ ಆಗದು ಎಂದು ಬ್ಯಾಂಕ್ ಒಕ್ಕೂಟಗಳ ವಕ್ತಾರರು ತಿಳಿಸಿದ್ದಾರೆ.
ಶನಿವಾರ ಬ್ಯಾಂಕ್ಗೆ ರಜೆ: ಎಲ್ಲ ಬ್ಯಾಂಕ್ಗಳಿಗೆ 2020ರ ಆಗಸ್ಟ್ 2ನೇ ವಾರದ ತನಕ ಪ್ರತಿ ಶನಿವಾರ ರಜೆ ಘೋಷಿಸಿರುವುದರಿಂದ ಜುಲೈ 18ರಂದು ಬ್ಯಾಂಕ್ ಗಳಿಗೆ ರಜೆ ಇರಲಿದೆ. ಈಗಾಗಲೇ ತಿಂಗಳ ಪ್ರತಿ 2 ಮತ್ತು 4ನೇ ಶನಿವಾರದ ರಜೆಯೊಂದಿಗೆ ಇತರ ಶನಿವಾರಗಳಂದೂ ರಜೆ ಇರಲಿದೆ.
”ಬ್ಯಾಂಕ್ಗಳಲ್ಲಿ ಅಗತ್ಯ ಸೇವೆ ಸಿಗಲಿದೆ. ಆದರೆ ಸಿಬ್ಬಂದಿ ಎಷ್ಟಿರಬೇಕು ಎಂಬುದನ್ನು ಆಯಾ ಬ್ಯಾಂಕ್ಗಳು ನಿರ್ಧರಿಸಲಿವೆ. ಕೇಂದ್ರ ಸರಕಾರದ ಕಿಸಾನ್ ಸಮ್ಮಾನ್, ಜನ್ಧನ್, ಗರೀಬ್ ಕಲ್ಯಾಣ್ ಯೋಜನೆಗಳ ನೆರವು ಇತ್ಯಾದಿಗಳು ಬ್ಯಾಂಕ್ ಖಾತೆಗಳ ಮೂಲಕ ನಡೆಯುತ್ತಿವೆ. ಎಟಿಎಂ, ಡಿಜಿಟಲ್ ಮಾಧ್ಯಮಗಳ ಪ್ರಯೋಜನ ಪಡೆಯಬಹುದಿದ್ದರೂ, ಬ್ಯಾಂಕ್ ಶಾಖೆಗಳಿಗೆ ತೆರಳಿ ಸೇವೆ ಪಡೆಯುವ ಗ್ರಾಹಕರು ಸಾಕಷ್ಟು ಮಂದಿ ಇದ್ದಾರೆ,” ಎನ್ನುತ್ತಾರೆ ಹಿರಿಯ ಬ್ಯಾಂಕ್ ಅಧಿಕಾರಿ ಆರ್.ಕೆ ಬಾಲಚಂದ್ರ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ
ಜನವರಿಯಲ್ಲಿ ಸಿಎಂ ಬೊಮ್ಮಾಯಿ ಬದಲಾವಣೆ ಖಚಿತ- ಸಿಎಂ ಇಬ್ರಾಹಿಂ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಸಭೆಯಲ್ಲಿ ಕೈಗೊಂಡ ನಿರ್ಣಯಗಳು
ಮತಾಂತರ ನಿಷೇಧ ಮಸೂದೆ- ಹೈಕೋರ್ಟ್ ಮೆಟ್ಟಿಲೇರಲು ಮುಂದಾದ ಕ್ರೈಸ್ತರು