ನವದೆಹಲಿ: ಹಲವು ರಾಜ್ಯ ಸರ್ಕಾರಗಳು ಈಗಾಗಲೇ ಪದವಿ ಹಾಗೂ ಸ್ನಾತಕೋತ್ತರ ಪದವಿಯ ಅಂತಿಮ ಸೆಮಿಸ್ಟರ್ನ ಪರೀಕ್ಷೆಯನ್ನು ಮುಂದೂಡಿವೆ.
ಆದರೆ, ವಿಶ್ವವಿದ್ಯಾಲಯ ಧನ ಸಹಾಯ ಆಯೋಗದ (ಯುಜಿಸಿ) ಅಧೀನದ ಶಿಕ್ಷಣ ಸಂಸ್ಥೆಗಳಿಗೆ ಇದು ಅನ್ವಯಿಸಲ್ಲ. ಅಂತಿಮ ವರ್ಷದ ಅಥವಾ ಸೆಮಿಸ್ಟರ್ನ ಪರೀಕ್ಷೆ ನಡೆಸಲೇಬೇಕು. ಇದಕ್ಕಾಗಿ ಇನ್ನೆರಡು ತಿಂಗಳ ಗಡುವು ನೀಡಿ, ಅಷ್ಟರೊಳಗಾಗಿ ಮುಗಿಸಿ ಎಂದು ಸುತ್ತೋಲೆ ಹೊರಡಿಸಿದೆ.
ಕೋವಿಡ್ ಸಂಕಷ್ಟ ಮುಂದಿನ ಸೆಪ್ಟಂಬರ್ವರೆಗೆ ದೇಶವನ್ನು ಕಾಡಲಿದೆ ಎಂದು ತಜ್ಞರು ಅಂದಾಜಿಸಿದ್ದಾರೆ. ಹೀಗಿರುವಾಗ ಪರೀಕ್ಷೆ ನಡೆಸಲೇಬೇಕು ಎಂದು ಯುಜಿಸಿ ಪಟ್ಟು ಹಿಡಿದಿರುವುದಾದರೂ ಏಕೆ ಎಂಬುದಕ್ಕೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಾಲ್ ಸ್ಪಷ್ಟನೆ ನೀಡಿದ್ದಾರೆ.
ಅಂತಿಮ ವರ್ಷದ ಪರೀಕ್ಷೆ ಇಲ್ಲದೇ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸುವುದು ಸರಿಯಲ್ಲ. ಇದು ಅವರ ಭವಿಷ್ಯಕ್ಕೂ ಶ್ರೇಯಸ್ಕರವಲ್ಲ. ಪರೀಕ್ಷೆ ಇಲ್ಲದೇ ಪಾಸಾಗಿದ್ದಾನೆ ಎಂದರೆ ಅವರ ವ್ಯಾಸಂಗಕ್ಕೆ ಕೋವಿಡ್ ಮುದ್ರೆ ಅಂಟಿಕೊಳ್ಳುತ್ತದೆ. ಮುಂದಿನ ದಿನಗಳಲ್ಲಿ ಅವರು ಉದ್ಯೋಗ ಅಥವಾ ಇನ್ನಾವುದೇ ಕ್ಷೇತ್ರ ಪ್ರವೇಶಿಸುವಾಗ ಅವರನ್ನು ಪ್ರತ್ಯೇಕಿಸಿ ನೋಡುವ ಪರಿಪಾಠ ಬೆಳೆಯುತ್ತದೆ. ಇದನ್ನು ಯಾವ ವಿದ್ಯಾರ್ಥಿಯೂ ಬಯಸುವುದಿಲ್ಲ ಎಂದು ಹೇಳಿದ್ದಾರೆ.
ಪರೀಕ್ಷೆ ನಡೆಸುವುದು ಕಷ್ಟವೇನೂ ಅಲ್ಲ, ಕೊಂಚ ವಿಳಂಬವಾಗಬಹುದು ಅಷ್ಟೇ. ಆದರೆ, ಇದಕ್ಕಾಗಿ ವಿದ್ಯಾರ್ಥಿಗಳ ಭಿವಿಷ್ಯವನ್ನು ಹಾಳು ಮಾಡುವುದು ಬೇಡ. ಪರೀಕ್ಷೆ ನಡೆಸುವುದನ್ನು ವಿರೋಧಿಸುತ್ತಿರುವ ರಾಜ್ಯಗಳು ಕೇಂದ್ರದ ಅಥವಾ ಯುಜಿಸಿಯ ಆಶಯವನ್ನು ಅರ್ಥ ಮಾಡಿಕೊಳ್ಳಲಿದ್ದಾರೆ ಎಂದು ಪೋಖ್ರಿಯಾಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನಾಳೆಯಿಂದ ಎಸ್ಸೆಸ್ಸೆಫ್ ಕ್ಯಾಂಪಸ್ ಕಾನ್ಫರೆನ್ಸ್ – ಎಲ್ಲರ ಚಿತ್ತ ಮೈಸೂರಿನತ್ತ!
ನಂದಾವರ ಕೋಟೆ: ಎಸ್ಸೆಸ್ಸೆಲ್ಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ
ಬಾಮಿ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ 100% ಫಲಿತಾಂಶ
ಶಾಜ್ಮಿಯ ಡಿಸ್ಟಿಂಕ್ಷನ್ (557) ಅಂಕದೊಂದಿಗೆ ತೇರ್ಗಡೆ
ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಶೇ. 73.40 ವಿದ್ಯಾರ್ಥಿಗಳು ಉತ್ತೀರ್ಣ- ಬಾಲಕಿಯರೇ ಮೇಲುಗೈ
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ದ್ವಿತೀಯ ಪಿಯುಸಿ ಫಲಿತಾಂಶ: 542 ಅಂಕಗಳಿಸಿ ಕಳಂಜಿಬೈಲ್ ಗೆ ಕೀರ್ತಿ ತಂದ ಶಝ್ಮಿಯಾ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ