ಜೈಪುರ/ನವದೆಹಲಿ: ಸಚಿನ್ ಪೈಲಟ್ ಮತ್ತು ಇತರ ಕಾಂಗ್ರೆಸ್ ಬಂಡಾಯ ನಾಯಕರ ವಿರುದ್ಧ ತೀರ್ಪನ್ನು ಹೈಕೋರ್ಟ್ ಮುಂದೂಡಿರುವುದರ ವಿರುದ್ಧವಾಗಿ ರಾಜಸ್ಥಾನ ಸ್ಪೀಕರ್ ಸಿ ಪಿ ಜೋಶಿ ಅವರು ಬುಧವಾರ ಸುಪ್ರೀಂ ಕೋರ್ಟ್ ಮೊರೆ ಹೋಗಲು ನಿರ್ಧರಿಸಿದ್ದಾರೆ. ರಾಜ್ಯ ಸರ್ಕಾರದಲ್ಲಿ ಉಂಟಾಗಿರುವ ಸಾಂವಿಧಾನಿಕ ಬಿಕ್ಕಟ್ಟನ್ನು ವಿಳಂಬ ಮಾಡದೆ ಶೀಘ್ರವೇ ಬಗೆಹರಿಸಲು ಸುಪ್ರೀಂ ಕೋರ್ಟ್ ಮುಂದೆ ಮನವಿ ಮಾಡಲು ನಿರ್ಧರಿಸಿದ್ದಾರೆ.
ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವುದಕ್ಕೆ ಸಚಿನ ಪೈಲಟ್ ಸಹಿತ 19 ಶಾಸಕರಿಗೆ ಕಳೆದ ವಾರ ಸ್ಪೀಕರ್ ಸಿ.ಪಿ.ಜೋಶಿ ಅನರ್ಹತೆಯ ನೋಟಿಸ್ ನೀಡಿದ್ದರು. ಕಳೆದ ವಾರ ಹೈಕೋರ್ಟ್ ನೀಡಿರುವ ಆದೇಶದಲ್ಲಿ ಮೂರು ದಿನಗಳ ಕಾಲ ಕ್ರಮವನ್ನು ಮುಂದೂಡುವಂತೆ ಸ್ಪೀಕರ್ಗೆ ತಿಳಿಸಿತ್ತು.
ಶುಕ್ರವಾರದವರೆಗೆ ಬಂಡಾಯ ಶಾಸಕರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ನಿನ್ನೆ ಮತ್ತೆ ಸ್ಪೀಕರ್ ಅವರಿಗೆ ಹೈಕೋರ್ಟ್ ಆದೇಶ ನೀಡಿದೆ. ನಾಡಿದ್ದು ಶುಕ್ರವಾರ ಬಂಡಾಯ ಶಾಸಕರ ಅನರ್ಹತೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಯಲಿದೆ.
ಇದೀಗ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸ್ಪೀಕರ್ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಲು ನಿರ್ಧರಿಸಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆ ನಡೆಸುವ ಶಾಸಕರ ವಿರುದ್ಧ ಏನು ಕ್ರಮ ಕೈಗೊಳ್ಳಬೇಕೆಂದು ಸ್ಪೀಕರ್ ಅವರು ತೀರ್ಮಾನಿಸಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಪಕ್ಷ ವಿರೋಧಿ ಚಟುವಟಿಕೆ ನಡೆಸುವ ಶಾಸಕರಿಗೆ ನೊಟೀಸ್ ನೀಡುವ ಸಂಪೂರ್ಣ ಅಧಿಕಾರ ಸ್ಪೀಕರ್ ಅವರಿಗಿದೆ. ಸ್ಪೀಕರ್ ಅವರ ತೀರ್ಮಾನದ ನಂತರ ನ್ಯಾಯಾಂಗ ಅದನ್ನು ಪರಿಶೀಲನೆ ಮಾಡಬಹುದು, ಬಂಡಾಯ ಶಾಸಕರ ಅನರ್ಹತೆ ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿರುವುದು ಅಪಾಯಕಾರಿ ನಡೆಯಾಗಿದ್ದು ಸಾಂವಿಧಾನಿಕ ನಿಯಮಗಳನ್ನು ಉಲ್ಲಂಘಿಸುತ್ತದೆ, ಹೀಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ ಇಂದು ಸ್ಪೀಕರ್ ಸಿ ಪಿ ಜೋಶಿ ಹೇಳಿದ್ದಾರೆ.
ನಾಡಿದ್ದು ಹೈಕೋರ್ಟ್ ನೀಡಲಿರುವ ತೀರ್ಪು ರಾಜಸ್ತಾನದಲ್ಲಿ ಅಶೋಕ್ ಗೆಹ್ಲೊಟ್ ಸರ್ಕಾರ, ವಿಧಾನಸಭೆಯಲ್ಲಿ ಬಹುಮತ ಸಾಬೀತು ಮೇಲೆ ತೀವ್ರ ಪರಿಣಾಮ ಬೀರಲಿದೆ.















ಇನ್ನಷ್ಟು ಸುದ್ದಿಗಳು
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್ಸಿ
ಕರ್ನಾಟಕ ಸರ್ಕಾರವನ್ನು ಬೀಳಿಸಲು ಕೇರಳ ದೇವಸ್ಥಾನದಲ್ಲಿ ಮೃಗ ಬಲಿ – ದೇವಸ್ವಂ ಸಚಿವರು ಹೇಳಿದ್ದೇನು?
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಮಣಿಪುರ: ಚುನಾವಣೆ ಬಹಿಷ್ಕಾರ ಕ್ಕೆ ಕರೆ ಕೊಟ್ಟ ಕುಕಿ!!
ಬಡತನದಿಂದ ಬಳಲುತ್ತಿರುವ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ
ಸಯ್ಯಿದ್ ಹಸನುಲ್ ಅಹ್ದಲ್ ತಂಙಳರಿಗೆ ಗೌರವ ‘ಅತ್ತಕ್ರೀಂ’- ಸ್ವಾಗತ ಸಮಿತಿ ಅಸ್ತಿತ್ವಕ್ಕೆ
ಪುಟ್ಟ ಬಾಲಕಿಯ ಅತ್ಯಾಚಾರ,ಹತ್ಯೆ ಪ್ರಕರಣ- ಆರೋಪಿ ಅಶ್ಫಾಕ್ ಆಲಂಗೆ ಮರಣ ದಂಡನೆ
ಕಳಮಶ್ಶೇರಿಯಲ್ಲಿ ಬಾಂಬ್ ಸ್ಫೋಟಿಸಿದ್ದು ಡೊಮಿನಿಕ್ ಮಾರ್ಟಿನ್- ದೃಢೀಕರಿಸಿದ ಪೊಲೀಸ್
ಕಳಮಶ್ಶೇರಿಯಲ್ಲಿ ಬಾಂಬ್ ಇಟ್ಟಿದ್ದು ನಾನೇ – ಪೊಲೀಸ್ ಠಾಣೆಯಲ್ಲಿ ಶರಣಾಗಿ ತಪ್ಪೊಪ್ಪಿಗೆ