ಹೈದರಾಬಾದ್: ಕೋವಿಡ್ ನಿಂದ ಮೃತಪಟ್ಟ 50 ಮೃತದೇಹಗಳನ್ನು ಹೈದರಾಬಾದ್ನಲ್ಲಿ ಸಾಮೂಹಿಕವಾಗಿ ದಹನ ಮಾಡಲಾಗಿದೆ.
ಸಾರಿಗೆ ವ್ಯವಸ್ಥೆ ಹಾಗೂ ಮಾನವ ಶಕ್ತಿಯ ಕೊರತೆಯಿಂದಾಗಿ ಇಲ್ಲಿನ ಎರ್ರಗಡ್ಡ ಶಾವಾಗಾರದಲ್ಲಿ ಇಂತಹ ಕೃತ್ಯ ನಡೆದಿದ್ದು, ಶವಗಳ ಸಾಮೂಹಿಕ ದಹನದ ವಿಡಿಯೋ ಇದೀಗ ದೇಶವ್ಯಾಪಿ ವೈರಲ್ ಆಗುತ್ತಿದೆ. ಪರಿಣಾಮ ಸರ್ಕಾರದ ನಡೆಗೆ ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಈ ಕುರಿತು ಸ್ಪಷ್ಟನೆ ನೀಡಿರುವ ತೆಲಂಗಾಣ ಆರೋಗ್ಯ ಇಲಾಖೆ, “ಈ ಮೃತ ದೇಹಗಳು ಒಂದೇ ದಿನ ಸಾವನ್ನಪ್ಪಿದವರದ್ದಲ್ಲ. ಕಳೆದ ಮೂರು ದಿನಗಳಿಂದ ಮೃತಪಟ್ಟವರ ದೇಹವನ್ನು ಒಟ್ಟಾಗಿ ಅಂತ್ಯಕ್ರಿಯೆ ಮಾಡಲಾಗಿದೆ” ಎಂದು ತಿಳಿಸಿದೆ.
ವಿಶ್ವದಾದ್ಯಂತ ಕೊರೋನಾ ವೈರಸ್ ಪ್ರಕರಣಗಳ ಸಂಖ್ಯೆ 15 ದಶ ಲಕ್ಷಕ್ಕೂ ಅಧಿಕವಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ವರದಿ ಮಾಡಿದೆ. ಕೊರೋನಾದಿಂದಾಗಿ ಈವರೆಗೆ 6,20,000 ಜನ ಮೃತಪಟ್ಟಿದ್ದಾರೆ. ಮಾರಣಾಂತಿಕ ಕೊರೋನಾ ವೈರಸ್ ಪ್ರಸ್ತುತ ಎಲ್ಲಾ ದೇಶಗಳಲ್ಲೂ ವ್ಯಾಪಿಸಿದೆ. ಆದರೆ, 2/3 ರಷ್ಟು ಪ್ರಕರಣಗಳು 10 ದೇಶಗಳಲ್ಲಿ ದಾಖಲಾಗುತ್ತಿದ್ದರೆ, ಒಟ್ಟು ಸೋಂಕಿತರ ಪೈಕಿ ಅರ್ಧದಷ್ಟು ಜನ ಕೇವಲ 3 ದೇಶಗಳಲ್ಲೇ ಇದ್ದಾರೆ. ಈ ಪೈಕಿ ಭಾರತವೂ ಒಂದು ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.















ಇನ್ನಷ್ಟು ಸುದ್ದಿಗಳು
15,000 ಜನರನ್ನು ಕೊಲ್ಲುವ ಗುರಿ: ಮುಹರಂ ಕಾರ್ಯಕ್ರಮದಲ್ಲಿ ವಿಷಪೂರಿತ ಮಾತ್ರೆಗಳನ್ನು ವಿತರಿಸಿದ ವ್ಯಕ್ತಿ ಬಂಧನ
‘ತೂಫಾನ್’ ಗೆ ಮರ್ಕಝ್ ಸಾಥ್ : ಕಾಂತಪುರಂ ಉಸ್ತಾದ್- ಗೃಹ ಸಚಿವ ರಮೇಶ್ ಚೆನ್ನಿತ್ತಲ ಸಮಾಲೋಚನೆ
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್ಸಿ
ಕರ್ನಾಟಕ ಸರ್ಕಾರವನ್ನು ಬೀಳಿಸಲು ಕೇರಳ ದೇವಸ್ಥಾನದಲ್ಲಿ ಮೃಗ ಬಲಿ – ದೇವಸ್ವಂ ಸಚಿವರು ಹೇಳಿದ್ದೇನು?
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಮಣಿಪುರ: ಚುನಾವಣೆ ಬಹಿಷ್ಕಾರ ಕ್ಕೆ ಕರೆ ಕೊಟ್ಟ ಕುಕಿ!!
ಬಡತನದಿಂದ ಬಳಲುತ್ತಿರುವ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ
ಸಯ್ಯಿದ್ ಹಸನುಲ್ ಅಹ್ದಲ್ ತಂಙಳರಿಗೆ ಗೌರವ ‘ಅತ್ತಕ್ರೀಂ’- ಸ್ವಾಗತ ಸಮಿತಿ ಅಸ್ತಿತ್ವಕ್ಕೆ
ಪುಟ್ಟ ಬಾಲಕಿಯ ಅತ್ಯಾಚಾರ,ಹತ್ಯೆ ಪ್ರಕರಣ- ಆರೋಪಿ ಅಶ್ಫಾಕ್ ಆಲಂಗೆ ಮರಣ ದಂಡನೆ