ಮಂಗಳೂರು: ಕೊರೋಣ ಮಹಾಮಾರಿಯು ಇನ್ನಷ್ಟು ವ್ಯಾಪಿಸುತ್ತಿರುವ ಈ ಸಂದರ್ಭದಲ್ಲಿ ಕರೋನ ವೈರಸ್ ಬಗ್ಗೆ ಭಯಪಡುವ ಅಗತ್ಯವಿಲ್ಲ, ಅದರ ವಿರುದ್ಧ ಜಾಗೃತಿ ಮೂಡಿಸಬೇಕು ಈ ನಿಟ್ಟಿನಲ್ಲಿ ಜಿಲ್ಲಾ ಎಸ್ ವೈ ಎಸ್ ಟೀಂ ಇಸಾಬ ಕಾರ್ಯಾಚರಣೆಯು ಶ್ಲಾಘನೀಯ ಎಂದು ಶಾಸಕ ಯು ಟಿ ಖಾದರ್ ಹೇಳಿದರು.
ಎಸ್ ವೈ ಎಸ್ ಜಿಲ್ಲಾ ವೆಸ್ಟ್ ಸಮಿತಿ ಹಮ್ಮಿಕೊಂಡ ತರಬೇತಿ ಶಿಬಿರದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ವೈ ಎಸ್ ಜಿಲ್ಲಾಧ್ಯಕ್ಷ ಸಿ,ಎಚ್. ಮಹಮ್ಮದ್ ಅಲಿ ಸಖಾಫಿ ಅಶ್ಅರಿಯ ವಹಿಸಿದರು.

ಮುಖ್ಯ ತರಬೇತುದಾರರಾಗಿ ಆಗಮಿಸಿದ ವೈದ್ಯಾಧಿಕಾರಿ ಡಾಕ್ಟರ್ ಶಿವ ಪ್ರಕಾಶ್ ಕೋರೋಣ ವೈರಸ್ಸನ್ನು ಪರಿಣಾಮಕಾರಿಯಾಗಿ ತಡೆಗಟ್ಟುವುದರ ಕುರಿತು ವಿವರಿಸಿದರು. ಡಾಕ್ಟರ್ ಫಿಲಿಪ್ಸ್ ಆಂಟನಿ ಎರಡನೇ ತರಬೇತು ನೀಡಿದರು.
ಎಸ್ ವೈ ಎಸ್ ರಾಜ್ಯ ನಾಯಕ ಟಿ.ಎಂ ಮುಹ್ಯಿದ್ದೀನ್ ಕಾಮಿಲ್ ಸಖಾಫಿ ಮಯ್ಯಿತ್ ಪರಿಪಾಲನೆ ಕುರಿತು ವಿಷಯ ಮಂಡಿಸಿದರು.ಪ್ರತಿ ಸೆಂಟರ್ ಗಳಿಗೂ ಪಿಪಿಇ ಕಿಟ್ ವಿತರಿಸಲಾಯಿತು.ಎಸ್ ವೈ ಎಸ್ ರಾಜ್ಯಾಧ್ಯಕ್ಷ ಉಸ್ಮಾನ್ ಸಅದಿ ಪಟ್ಟೋರಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕೋಶಾಧಿಕಾರಿ ಎಸ್ ಎಂ.ಬಶೀರ್ ಹಾಜಿ ಉಪಾಧ್ಯಕ್ಷ ಎಂಎಸ್ ಉಮಾರ್, ಮಾಸ್ಟರ್ ಜಿಲ್ಲಾ ನಾಯಕ ಸಿ.ಎಚ್ ಇಸ್ಮಾಯಿಲ್ ಕೆ.ಸಿ ರೋಡ್ ಮಾಸ್ಟರ್,ತಿಬ್ಲೆಪದವು ಮದ್ರಸ ಅಧ್ಯಕ್ಷ ಸಿದ್ದೀಕ್ ಮದನಿ ದೇರಳಕಟ್ಟೆ ಎಸ್ ವೈ ಎಸ್ ಸೆಂಟರ್ ಅಧ್ಯಕ್ಷ ಇಸ್ಮಾಯಿಲ್ ಸ ಅದಿ ಮುಂತಾದವರು ಉಪಸ್ಥಿತರಿದ್ದರು.
ಹನೀಫ್ ಸಖಾಫಿ ಸಹಕರಿಸಿದರು.
ಎಸ್ ವೈ ಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಖಲೀಲ್ ಮುಸ್ಲಿಯಾರ್ ಸ್ವಾಗತಿಸಿ ಕೃತಜ್ಞತೆ ಸಲ್ಲಿಸಿದರು.ಟೀಂ ಇಸಾಬ ಜಿಲ್ಲಾ ಕಾರ್ಯದರ್ಶಿ ಎಂಕೆಎಂ ಇಸ್ಮಾಯಿಲ್ ಕಿನ್ಯ ಕೃತಜ್ಞತೆ ಸಲ್ಲಿಸಿದರು.















ಇನ್ನಷ್ಟು ಸುದ್ದಿಗಳು
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ