ಜೈಪುರ: ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ಮುಂದುವರೆಸಿರುವ ಸಿಎಂ ಅಶೋಕ್ ಗೆಹ್ಲೋಟ್ ಅವರು, ಅಗತ್ಯ ಬಿದ್ದರೆ ಪ್ರಧಾನಿ ನಿವಾಸಕ್ಕೂ ಘೇರಾವ್ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.
ರಾಜಸ್ಥಾನ ರಾಜಭವನದ ಮುಂದೆಯೇ ಶನಿವಾರ ಧರಣಿ ಕೂತಿದ್ದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಇದೀಗ, ಅನಿವಾರ್ಯತೆ ಸೃಷ್ಟಿಯಾದರೆ ಕಾಂಗ್ರೆಸ್ ಶಾಸಕರು ರಾಷ್ಟ್ರಪತಿಗಳನ್ನು ಭೇಟಿಯಾಗುತ್ತೇವೆ. ಅಗತ್ಯಬಿದ್ದರೆ ಪ್ರಧಾನಿ ನಿವಾಸದ ಮುಂದೆಯೂ ಧರಣಿ ಕೂರಲಿದ್ದೇವೆ ಎಂದು ಹೇಳಿದ್ದಾರೆ.
ಶನಿವಾರ ಕಾಂಗ್ರೆಸ್ ಶಾಸಕಾಂಗ ಸಭೆಯನ್ನುದ್ದೇಶಿಸಿ ಮಾತನಾಡಿದ ಅಶೋಕ್ ಗೆಹ್ಲೋಟ್ ಅವರು, ಹೋಟೆಲ್ನಲ್ಲಿ ಹೆಚ್ಚು ಸಮಯ ಉಳಿಯಲು ಸಿದ್ಧರಾಗಿ. ಅಗತ್ಯಬಿದ್ದರೆ, ನಾವು ರಾಷ್ಟ್ರಪತಿಯನ್ನು ಭೇಟಿಯಾಗಲು ಹೋಗಲಿದ್ದೇವೆ ಮತ್ತು ಪ್ರಧಾನ ಮಂತ್ರಿಯ ನಿವಾಸದ ಹೊರಗೆ ಧರಣಿ ನಡೆಸಲಿದ್ದೇವೆ ಎಂದು ತಮ್ಮ ಪಕ್ಷದ ಶಾಸಕರಿಗೆ ಹೇಳಿದ್ದಾರೆ.
ಶುಕ್ರವಾರ ಅಧಿವೇಶನ ಕರೆಯಲು ರಾಜ್ಯಪಾಲ ಕಲ್ರಾಜ್ ಮಿಶ್ರಾ ಹಿಂದೇಟು ಹಾಕಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕರು ರಾಜಭವನದ ಮುಂಭಾಗದ ಹುಲ್ಲುಹಾಸಿನ ಮೇಲೆ ಧರಣಿ ಕುಳಿತಿದ್ದರು. ಜೊತೆಗೆ ಅಧಿವೇಶನ ಕರೆಯಿರಿ ಎಂದು ಘೋಷಣೆಗಳನ್ನೂ ಕೂಗಿದ್ದರು. ನಂತರ ಶುಕ್ರವಾರ ರಾತ್ರಿ ಧರಣಿಯನ್ನು ವಾಪಸ್ ಪಡೆಯಲಾಗಿತ್ತು. ಆದರೆ ಗೆಹ್ಲೋಟ್ ಅವರ ಯಾವುದೇ ಪ್ರಯತ್ನಗಳೂ ಫಲಿಸುತ್ತಿಲ್ಲ. ರಾಜಸ್ಥಾನದ ರಾಜಕೀಯ ಬಿಕ್ಕಟ್ಟು ಕೊನೆಯಾಗುತ್ತಿಲ್ಲ.















ಇನ್ನಷ್ಟು ಸುದ್ದಿಗಳು
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್ಸಿ
ಕರ್ನಾಟಕ ಸರ್ಕಾರವನ್ನು ಬೀಳಿಸಲು ಕೇರಳ ದೇವಸ್ಥಾನದಲ್ಲಿ ಮೃಗ ಬಲಿ – ದೇವಸ್ವಂ ಸಚಿವರು ಹೇಳಿದ್ದೇನು?
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಮಣಿಪುರ: ಚುನಾವಣೆ ಬಹಿಷ್ಕಾರ ಕ್ಕೆ ಕರೆ ಕೊಟ್ಟ ಕುಕಿ!!
ಬಡತನದಿಂದ ಬಳಲುತ್ತಿರುವ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ
ಸಯ್ಯಿದ್ ಹಸನುಲ್ ಅಹ್ದಲ್ ತಂಙಳರಿಗೆ ಗೌರವ ‘ಅತ್ತಕ್ರೀಂ’- ಸ್ವಾಗತ ಸಮಿತಿ ಅಸ್ತಿತ್ವಕ್ಕೆ
ಪುಟ್ಟ ಬಾಲಕಿಯ ಅತ್ಯಾಚಾರ,ಹತ್ಯೆ ಪ್ರಕರಣ- ಆರೋಪಿ ಅಶ್ಫಾಕ್ ಆಲಂಗೆ ಮರಣ ದಂಡನೆ
ಕಳಮಶ್ಶೇರಿಯಲ್ಲಿ ಬಾಂಬ್ ಸ್ಫೋಟಿಸಿದ್ದು ಡೊಮಿನಿಕ್ ಮಾರ್ಟಿನ್- ದೃಢೀಕರಿಸಿದ ಪೊಲೀಸ್
ಕಳಮಶ್ಶೇರಿಯಲ್ಲಿ ಬಾಂಬ್ ಇಟ್ಟಿದ್ದು ನಾನೇ – ಪೊಲೀಸ್ ಠಾಣೆಯಲ್ಲಿ ಶರಣಾಗಿ ತಪ್ಪೊಪ್ಪಿಗೆ