janadhvani

Kannada Online News Paper

ಕೊರೋನಾ ಮಧ್ಯೆ ಸಿಇಟಿ ಪರೀಕ್ಷೆ- ಮರುಪರಿಶೀಲೆನೆಗೆ ಹೈಕೋರ್ಟ್ ಸೂಚನೆ

ಬೆಂಗಳೂರು:ಸಿಇಟಿ ಪರೀಕ್ಷೆಯು ಜುಲೈ 30, ಆಗಸ್ಟ್ 1ರಂದು ನಿಗದಿಯಾಗಿದ್ದು ಕೊರೋನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ನಿಗದಿಯಾಗಿರುವ ಸಿಇಟಿ ಪರೀಕ್ಷೆ ನಡೆಸುವ ಸಂಬಂಧ ನಿರ್ಧಾರವನ್ನು ಮರುಪರಿಶೀಲಿಸಿ ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಕೊರೋನಾವಿರುವ ಕಂಟೈನ್ಮೆಂಟ್ ಜೋನ್ ಗಳಲ್ಲಿರುವವರು ಹೊರ ಹೋಗುವಂತಿಲ್ಲ. ಅಲ್ಲದೆ ಹೊರರಾಜ್ಯಗಳಿಂದ ಬಂದೂ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯುತ್ತಾರೆ. ಕೊರೊನಾ ಎಸ್ಓಪಿಯ ಅನುಸಾರ ಕಂಟೈನ್ಮೆಂಟ್ ಜೋನ್ ನಲ್ಲಿರುವವರು ಹೊರಗೆ ಹೋಗುವಂತಿಲ್ಲ. ಬೆಂಗಳೂರಿನಲ್ಲೇ ಮೂರು ಸಾವಿರದಷ್ಟು ಕಂಟೈನ್ಮೆಂಟ್ ಜೋನ್ ಗಳಿದೆ. ಹಾಗಾಗಿ ಅಲ್ಲಿನ ವಿದ್ಯಾರ್ಥಿಗಳು ಎಲ್ಲಿ ಹೋಗುತ್ತಾರೆ? ಅವರು ಪರೀಕ್ಷೆಯಿಂದ ವಂಚಿತರಾಗುವ ಸಾಧ್ಯತೆ ಇದೆ ಎಂದಿರುವ ಹೈಕೋರ್ಟ್ ಪರೀಕ್ಷೆ ನಡೆಸುವ ನಿರ್ಧಾರವನ್ನು ಮರುಪರಿಶೀಲಿಸಿ ಎಂದು ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ವಕೀಲರಾದ ಎಸ್.ಪಿ. ಪ್ರದೀಪ್ ಕುಮಾರ್ ಹಾಗೂ ಎಸ್. ಹನುಮಂತೇಗೌಡ ಎನ್ನುವವರು ಈ ಸಂಬಂಧ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.ಅರ್ಜಿ ವಿಚಾರಣೆ ನಡೆಸಿರುವ ಹೈಕೋರ್ಟ್ ನ್ಯಾಯಪೀಠ ನಿರ್ಧಾರದ ಮರುಪರಿಶೀಲನೆಗೆ ಸೂಚಿಸಿದ್ದು ಬುಧವಾರ ಮಧ್ಯಾಹ್ನ 2:30ರೊಳಗೆ ಉತ್ತರಿಸುವಂತೆ ಹೇಳಿ ವಿಚಾರಣೆ ಮುಂದೂಡಿದೆ.

ವಿದ್ಯಾರ್ಥಿಗಳ ಆರೋಗ್ಯ ಹಿತದೃಷ್ಟಿಯಿಂದ ಸಿಇಟಿ ಪರೀಕ್ಷೆಯನ್ನು ಮುಂದೂಡುವಂತೆ ಸಾಮಾಜಿಕ ತಾಣದಲ್ಲಿ ಆಗ್ರಹ ವ್ಯಕ್ತವಾಗಿದ್ದು, ಟ್ವಿಟರ್ ನಲ್ಲಿ ಟ್ರೆಂಡಿಂಗ್ ಆಗಿತ್ತು.

error: Content is protected !! Not allowed copy content from janadhvani.com