ಮಂಗಳೂರು : SKSSF ವಿಖಾಯ ಮಂಗಳೂರು ವಲಯದ ಕರೆಯಮೇರೆಗೆ ವಿಖಾಯ ವಳಚ್ಚಿಲ್ ಶಾಖೆಯ ಕಾರ್ಯಕರ್ತರು ಇಂದು ಮಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಸಂಚಾರಿ ಯಾತ್ರಿಕರು ಹಾಗೂ ಕೂಲಿ ಕಾರ್ಮಿಕರು ಮತ್ತು ರಸ್ತೆ ಬೀದಿಯಲ್ಲಿ ಇದ್ದಂತಹ ಸುಮಾರು ಮುನ್ನೂರಷ್ಟು ಜನರಿಗೆ ಬಕ್ರೀದ್ ಹಬ್ಬದ ವಿಶೇಷ ಮದ್ಯಾಹ್ನದ ಊಟ ವಿತರಿಸುವ ಮೂಲಕ ಮಾನವೀಯ ಸೇವೆಯನ್ನು ಮಾಡಿದ್ದು ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ.

ಬಕ್ರೀದ್ ನ ಹಬ್ಬದ ಸಡಗರದ ಸಮಯದಲ್ಲೂ ಇನ್ನೂಬ್ಬರ ಹಸಿವನ್ನು ನೀಗಿಸಲು ಇನ್ನೊಬ್ಬರ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸಿದ ಯುವಪಡೆಯ ಸಮಾಜಮುಖಿ ಕಾರ್ಯ ನಿಜಕ್ಕೂ ಪ್ರಶಂಶನೀಯ, ಈ ಮಹತ್ಕಾರ್ಯಕ್ಕೆ ಸಹಾಯ ಸಹಕಾರ ನೀಡಿದ SKSSF ವಿಖಾಯ ವಳಚ್ಚಿಲ್ ಯೂನಿಟ್ ನ ನಿಷ್ಠಾವಂತ ಕಾರ್ಯಕರ್ತರಿಗೂ ಹಾಗೂ ಕೈ ಜೋಡಿಸಿದ SKSSF ವಿಖಾಯ ಕುದ್ರೋಳಿ ಯೂನಿಟ್ ನ ಕಾರ್ಯಕರ್ತರಿಗೆ ವಳಚ್ಚಿಲ್ ಶಾಖಾ ಸದಸ್ಯರು ಧನ್ಯವಾದ ಸಲ್ಲಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ