ಚಿಕ್ಕಮಗಳೂರು, ಜು.1: ಇಂದು ನಡೆದ ಬಕ್ರೀದ್ ಹಬ್ಬಾಚರಣೆಗೆ ಸಂಪೂರ್ಣ ಸಹಕಾರ ನೀಡಿದ ಪೊಲೀಸ್ ಇಲಾಖೆಗೆ ವಿಶೇಷವಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೀ ಅಕ್ಷಯ್ ಮಚಿಂದ್ರ ರವರಿಗೆ ಜಾಮಿಯಾ ಅರೇಬಿಯಾ ಕಂಜುಲ್ ಇಮಾನ್ ಸಂಸ್ಥೆಯ ಅಧ್ಯಕ್ಷರು ಹಾಗು ಕರ್ನಾಟಕ ಮುಸ್ಲಿಂ ಜಮಾತ್ ಜಿಲ್ಲಾ ಅಧ್ಯಕ್ಷರು ಆದ ಹಾಜಿ ಮುಹಮ್ಮದ್ ಶಾಹಿದ್ ರವರು ಧನ್ಯವಾದ ಅರ್ಪಿಸಿದರು.
ಬಕ್ರೀದ್ ಆಚರಣೆಗೆ ಸಂಬಂಧಿಸಿದಂತೆ ಶನಿವಾರ ಬೆಳಿಗ್ಗೆ 7.30 ಕ್ಕೆ ಮತ್ತು 8.00 ಕ್ಕೆ ನಗರದ ಜಾಮಿಯಾ ಕಂಜುಲ್ ಇಮಾನ್ ಸಂಸ್ಥೆಯ ಅಧೀನದಲ್ಲಿರುವ ಸಲಾಂ ಮಸೀದಿಯಲ್ಲಿ ಮುಸ್ಲಿಂ ಬಾಂಧವರಿಗೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲು ಸಂಪೂರ್ಣ ಸಹಕಾರ ಹಾಗು ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಿ ಮುಕ್ತ ಪ್ರಾರ್ಥನೆಗೆ ಶಾಂತಿ ಹಾಗು ಸುವ್ಯವಸ್ಥೆಯಿಂದ ಅನುವು ಮಾಡಿಕೊಡುವ ಮೂಲಕ ಮುಸ್ಲಿಂ ಬಾಂಧವರಲ್ಲಿ ಪ್ರಶಂಸೆಗೆ ಪಾತ್ರರಾಗಿದ್ದಾರೆ.
ಶ್ರೀ ಅಕ್ಷಯ್ ಮಾಚಿಂದ್ರ ರವರಿಗೆ ಚಿಕ್ಕಮಗಳೂರು ಸುನ್ನಿ ಸಂಘ ಸಂಸ್ಥೆಗಳು ಸಹ ಅಭಿನಂದನೆಗಳನ್ನು ಸಲ್ಲಿಸಿದೆ. ಮುಂದಿನ ದಿನಗಳಲ್ಲಿ ಇಂತಹ ಸರ್ವಧರ್ಮ ಪ್ರೇಮಿ ಅಧಿಕಾರಿಯಾಗಿ ಎಲ್ಲ ಧರ್ಮದವರ ಪ್ರೀತಿ ಗಿಟ್ಟಿಸಿಕೊಂಡಿರುವ ಎಸ್ ಪಿ ರವರು ನಮ್ಮ ಜಿಲ್ಲೆಯಲ್ಲಿ ಸದಾ ಕಾಲ ಇರಬೇಕೆಂದು ಬಯಸುವುದಾಗಿ ಪ್ರಧಾನ ಕಾರ್ಯದರ್ಶಿ ಹಾಜಿ ಫೈರೋಜ್ ಅಹಮದ್ ರಜ್ವೀ ರವರು ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಚಿಕ್ಕಮಗಳೂರು ಸಲಾಂ ಮಸೀದಿಯಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ
ಚಿಕ್ಕಮಗಳೂರು: ವಕ್ಫ್ ಸಲಹಾ ಸಮಿತಿ ಅಧ್ಯಕ್ಷರಿಗೆ ಸನ್ಮಾನ
ಚಿಕ್ಕಮಗಳೂರು: ಜಾಮಿಯಾ ಕಂಝುಲ್ ಈಮಾನ್ ನಲ್ಲಿ ಅದ್ದೂರಿ ಸ್ವಾತಂತ್ರ್ಯೋತ್ಸವ ಸಮಾರಂಭ
ಚಿಕ್ಕಮಗಳೂರು ಜಿಲ್ಲಾ ವಕ್ಫ್ ಮಂಡಳಿ- ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ
ಪ್ರವಾದಿ ನಿಂದನೆ- ತಪ್ಪಿತಸ್ಥರ ಶೀಘ್ರ ಬಂಧನಕ್ಕೆ ಚಿಕ್ಕಮಗಳೂರು ಮುಸ್ಲಿಂ ಜಮಾಅತ್ ಒತ್ತಾಯ
ಬಜರಂಗದಳ ಪುಂಡಾಟಿಕೆ : ದಲಿತ ಮತ್ತು ಪ್ರಗತಿಪರ ಸಂಘಟನೆಗಳಿಂದ ಚಿಕ್ಕಮಗಳೂರು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಭೇಟಿ
ಜಾಮಿಯಾ ಕಂಝುಲ್ ಈಮಾನ್ ನಲ್ಲಿ ಗಣರಾಜ್ಯೋತ್ಸವ
ಚಿಕ್ಕಮಗಳೂರು ನಗರ ಸಭೆ ಚುನಾವಣೆ: ಮೊದಲ ಹಂತದ SDPI ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಚಿಕ್ಕಮಗಳೂರು: ಜಾಮಿಯಾ ಕಂಜುಲ್ ಇಮಾನ್ ನಿಂದ ಸ್ವಾತಂತ್ರ್ಯ ದಿನಾಚರಣೆ
ಜಾಮಿಯಾ ಕಂಝುಲ್ ಇಮಾನ್ ಚಿಕ್ಕಮಗಳೂರು: ಗಣರಾಜ್ಯೋತ್ಸವ ಆಚರಣೆ