ಅಯೋಧ್ಯೆ ,ಜು.5: ಐತಿಹಾಸಿಕ ಬಾಬರೀ ಮಸೀದಿಯನ್ನು ಕೆಡವಿದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ ತೋರಿ ತೀರ್ಪು ನೀಡಿದ ಹಿನ್ನೆಲೆಯಲ್ಲಿ, ನರೇಂದ್ರ ಮೋದಿ ಅವರು ಇಂದು ಅಯೋಧ್ಯೆಗೆ ತೆರಳಿ, ರಾಮ ಮಂದಿರ ನಿರ್ಮಾಣ ಮಾಡಲು ಶಿಲಾನ್ಯಸ ನೆರವೇರಿಸಿದ್ದಾರೆ. ಅನೇಕ ಸಾಧು-ಸಂತರು, ಗಣ್ಯರು ಈ ಕ್ಷಣಕ್ಕೆ ಸಾಕ್ಷಿಯಾದರು.
ಬೆಳಗ್ಗೆ 10:30ಕ್ಕೆ ಲಖನೌ ವಿಮಾನ ನಿಲ್ದಾಣಕ್ಕೆ ಮೋದಿ ಆಗಮಿಸಿದರು. ಮೋದಿಯನ್ನು ಸ್ವಾಗತಿಸಲು ಆಗಮಿಸಿದ್ದ ಹಿರಿಯ ನಾಯಕರು ಜೈ ಶ್ರೀರಾಮ್ ಎನ್ನುವ ಘೋಷಣೆ ಕೂಗಿದರು. ನಂತರ ಹೆಲಿಕಾಪ್ಟರ್ ಮೂಲಕ ಪ್ರಧಾನಿ ಮೋದಿ ಅಯೋಧ್ಯೆಯ ಸಾಕೇತ್ ಕಾಲನಿಗೆ ತೆರಳಿದರು. ಅಯೋಧ್ಯೆಗೆ ಕಾಲಿಡುತ್ತಿದ್ದಂತೆ ಜೈ ಶ್ರೀರಾಮ್ ಎನ್ನುವ ಘೋಷಣೆಗಳು ಮೊಳಗಿದವು.
ಮೊದಲಿಗೆ ಹನುಮಾನ್ ಗುಡಿಗೆ ಮೋದಿ ಭೇಟಿ ನೀಡಿದರು. ನಂತರ ಹನುಮಾನ್ ಗುಡಿಯಲ್ಲಿ ಪೂಜೆ ಸಲ್ಲಿಸಿದ ಬಳಿಕ ಶಿಲಾನ್ಯಾಸ ನಡೆಯುವ ಜಾಗದತ್ತ ಮೋದಿ ಪ್ರಯಾಣ ಬೆಳೆಸಿದರು. 12:30 ಭೂಮಿ ಪೂಜೆ ಕಾರ್ಯಕ್ರಮ ಆರಂಭಗೊಂಡಿತು. 12:40ಕ್ಕೆ ಮೋದಿ ಅಡಿಗಲ್ಲು ಹಾಕಿದರು.
ರಾಮ ಮಂದಿರ ನಿರ್ಮಾಣಕ್ಕಾಗಿ ಹೋರಾಡಿದವರಲ್ಲಿ ಪ್ರಮುಖರಾದ ಎಲ್.ಕೆ ಅಡ್ವಾಣಿ,ಮುರಳಿ ಮನೋಹರ್ ಜೋಶಿ ಅವರಿಗೆ ಕಾರ್ಯಕ್ರಮಕ್ಕೆ ಆಗಮಿಸಲು ಕೊರೋನಾ ಅಡ್ಡಿಯಾಯ್ತು. ಆನ್ಲೈನ್ನಲ್ಲೇ ರಾಮಮಂದಿರದ ಅಡಿಗಲ್ಲು ಕಾರ್ಯಕ್ರಮ ಕಣ್ತುಂಬಿಕೊಂಡರು.















ಇನ್ನಷ್ಟು ಸುದ್ದಿಗಳು
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್ಸಿ
ಕರ್ನಾಟಕ ಸರ್ಕಾರವನ್ನು ಬೀಳಿಸಲು ಕೇರಳ ದೇವಸ್ಥಾನದಲ್ಲಿ ಮೃಗ ಬಲಿ – ದೇವಸ್ವಂ ಸಚಿವರು ಹೇಳಿದ್ದೇನು?
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಮಣಿಪುರ: ಚುನಾವಣೆ ಬಹಿಷ್ಕಾರ ಕ್ಕೆ ಕರೆ ಕೊಟ್ಟ ಕುಕಿ!!
ಬಡತನದಿಂದ ಬಳಲುತ್ತಿರುವ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ
ಸಯ್ಯಿದ್ ಹಸನುಲ್ ಅಹ್ದಲ್ ತಂಙಳರಿಗೆ ಗೌರವ ‘ಅತ್ತಕ್ರೀಂ’- ಸ್ವಾಗತ ಸಮಿತಿ ಅಸ್ತಿತ್ವಕ್ಕೆ
ಪುಟ್ಟ ಬಾಲಕಿಯ ಅತ್ಯಾಚಾರ,ಹತ್ಯೆ ಪ್ರಕರಣ- ಆರೋಪಿ ಅಶ್ಫಾಕ್ ಆಲಂಗೆ ಮರಣ ದಂಡನೆ
ಕಳಮಶ್ಶೇರಿಯಲ್ಲಿ ಬಾಂಬ್ ಸ್ಫೋಟಿಸಿದ್ದು ಡೊಮಿನಿಕ್ ಮಾರ್ಟಿನ್- ದೃಢೀಕರಿಸಿದ ಪೊಲೀಸ್
ಕಳಮಶ್ಶೇರಿಯಲ್ಲಿ ಬಾಂಬ್ ಇಟ್ಟಿದ್ದು ನಾನೇ – ಪೊಲೀಸ್ ಠಾಣೆಯಲ್ಲಿ ಶರಣಾಗಿ ತಪ್ಪೊಪ್ಪಿಗೆ