ರಿಯಾದ್: ಸೌದಿ ಅರೇಬಿಯಾದಲ್ಲಿ ಉಮ್ರಾ ತೀರ್ಥಯಾತ್ರೆ ಪುನರಾರಂಭಿಸುವುದಾಗಿ ಹಜ್ ಮತ್ತು ಉಮ್ರಾ ಸಚಿವಾಲಯ ಘೋಷಿಸಿದೆ.
ಕೋವಿಡ್ ವ್ಯಾಪಿಸಿರುವ ಹಿನ್ನೆಲೆಯಲ್ಲಿ ಐದು ತಿಂಗಳ ಕಾಲ ಸ್ಥಗಿತಗೊಂಡಿದ್ದ ಉಮ್ರಾ ತೀರ್ಥಯಾತ್ರೆ ಪುನರಾರಂಭಕ್ಕೆ ಸಜ್ಜಾಗಿದೆ. ಕೋವಿಡ್ ವ್ಯಾಪಿಸಿರುವ ಮಧ್ಯೆ ಹಜ್ ಯಶಸ್ವಿಯಾಗಿ ಪೂರ್ಣಗೊಂಡ ಸಂದರ್ಭದಲ್ಲಿ ಉಮ್ರಾ ತೀರ್ಥಯಾತ್ರೆ ಪ್ರಾರಂಭಿಸಲು ಸೌದಿ ತಯಾರಿ ನಡೆಸಿದೆ.
ಕೋವಿಡ್ ದೃಢೀಕರಿಸಿದ ನಂತರ ಮಾರ್ಚ್ನಿಂದ ಉಮ್ರಾ ಯಾತ್ರೆಗೆ ನಿರ್ಬಂಧ ವಿಧಿಸಲಾಗಿತ್ತು. ತರುವಾಯ, ದೇಶದಲ್ಲಿ ಅಸ್ತಿತ್ವದಲ್ಲಿದ್ದ ಯಾತ್ರಿಕರನ್ನು ಕ್ರಮೇಣ ವಾಪಸ್ ಕಳುಹಿಸಲಾಯಿತು.
ಅಂದಿನಿಂದ, ಮಕ್ಕಾದ ಹರಮ್ ಮಸೀದಿಯಲ್ಲಿ ನಿಯಂತ್ರಣಾತೀತ ಪ್ರಾರ್ಥನೆ ನಡೆಸಲಾಗುತ್ತಿತ್ತು, ಬಳಿಕ ಇದೀಗ ಹಜ್ ಯಾತ್ರಾರ್ಥಿಗಳಿಗೆ ಹರಂ ಮಸೀದಿಗೆ ಪ್ರವೇಶ ನೀಡಲಾಯಿತು. ಈ ವರ್ಷದ ಹಜ್ ವಿಶೇಷ ನಿಯಂತ್ರಣದಲ್ಲಿ ಯಶಸ್ವಿಯಾಗಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಹಜ್ ಮತ್ತು ಉಮ್ರಾ ಸಚಿವಾಲಯವು ಮುಂದಿನ ಉಮ್ರಾ ಋತುವನ್ನು ಪ್ರಾರಂಭಿಸಲು ಸಿದ್ಧತೆ ನಡೆಸಿದೆ.
ಆರೋಗ್ಯ ಸಚಿವಾಲಯದ ಕೋವಿಡ್ ಪ್ರೋಟೋಕಾಲ್ ಅನುಸಾರವಾಗಿ ಉಮ್ರಾ ತೀರ್ಥಯಾತ್ರೆ ನಡೆಸಲಾಗುವುದು. ಈ ವರ್ಷದ ಅಸಾಧಾರಣ ಹಜ್ನಿಂದ ಕಲಿತ ಪಾಠಗಳಿಗೆ ಅನುಗುಣವಾಗಿ ಮುಂದಿನ ಉಮ್ರಾ ಋತುವಿನ ಸಿದ್ಧತೆಗಳನ್ನು ಪ್ರಾರಂಭಿಸುವ ಯೋಜನೆಯಿದೆ ಎಂದು ಹಜ್ ವ್ಯವಹಾರಗಳ ಉಪ ಕಾರ್ಯದರ್ಶಿ ಡಾ.ಹುಸೈನ್ ಅಲ್-ಷರೀಫ್ ಹೇಳಿದರು.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು