janadhvani

Kannada Online News Paper

ಎಸ್ಸೆಸ್ಸೆಫ್ ಕೊಣಾಜೆ ಸೆಕ್ಟರ್ ದಅವಾ ಕಾನ್ಫರೆನ್ಸ್

ಕೊಣಾಜೆ,ಆ.6: ಎಸ್ಸೆಸ್ಸೆಫ್ ರಾಜ್ಯ ಸಮಿತಿಯ ಸುತ್ತೋಲೆಯಂತೆ ಸೆಕ್ಟರ್ ಮಟ್ಟದಲ್ಲಿ ನಡೆಸುವ ದಅವಾ ಕಾನ್ಫರೆನ್ಸ್ ಕೊಣಾಜೆ ಸೆಕ್ಟರ್ ವತಿಯಿಂದ ಪಜೀರ್ ನಲ್ಲಿ ಜರುಗಿತು.

ಕಾರ್ಯಕ್ರಮದಲ್ಲಿ ಹನೀಫ್ ಸಅದಿ ನಡುಹಿತ್ಲು ದುಆಗೈದರು, ಗದಗ ಜಿಲ್ಲಾ ಎಸ್ಸೆಸ್ಸೆಫ್ ಕಾರ್ಯದರ್ಶಿ ಬದ್ರುದ್ದೀನ್ ಸಖಾಫಿ ಉದ್ಘಾಟಿಸಿದರು. ಸೆಕ್ಟರ್ ಉಪಾಧ್ಯಕ್ಷ ಶಮೀರ್ ಆಲಡ್ಕ ಸಭಾ ಅಧ್ಯಕ್ಷತೆ ವಹಿಸಿದ್ದರು.
ಎಸ್ಸೆಸ್ಸೆಫ್ ರಾಜ್ಯ ಸಮಿತಿಯ ಸದಸ್ಯರಾದ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಉಳ್ಳಾಲ ರವರು ತರಗತಿ ನಡೆಸಿದರು.

ವೇದಿಕೆಯಲ್ಲಿ ಇಕ್ಬಾಲ್ ಮದನಿ, ಅಲ್ತಾಫ್ ಫಾಳಿಲಿ, ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಉಬೈದುಲ್ಲಾಹ್ , ರಿಯಾಝ್ ಮಲಾರ್,ಆಶಿಕ್ ಪಜೀರ್, ತೌಸೀಫ್ ಪಜೀರ್ ಉಪಸ್ಥಿತರಿದ್ದರು.

ಸೆಕ್ಟರ್ ದಅವಾ ಕನ್ವೀನರ್ ನೌಫಲ್ ಮರ್ಝೂಖಿ ಸ್ವಾಗತಿಸಿ, ಸೆಕ್ಟರ್ ಕ್ಯಾಂಪಸ್ ಕಾರ್ಯದರ್ಶಿ ಸಲಾಂ ಆಲಡ್ಕ ವಂದಿಸಿದರು.

error: Content is protected !! Not allowed copy content from janadhvani.com