ಮುನ್ನಾರ್, ಆ.9- ಕೇರಳದ ವಿವಿಧ ಜಿಲ್ಲೆಗಳು ಭಾರೀ ಮಳೆ, ಪ್ರವಾಹ ಮತ್ತು ಭೂಕುಸಿತಗಳಿಂದ ತತ್ತರಿಸಿ ಸಾವು-ನೋವು ಹೆಚ್ಚಾಗುತ್ತಲೇ ಇವೆ. ಕೇರಳದ ವಿವಿಧೆಡೆ ನೆರೆ ಹಾವಳಿಯಿಂದ ಈವರೆಗೆ 36 ಮಂದಿ ಮೃತಪಟ್ಟಿದ್ಧಾರೆ.
ಕುಂಭ್ರದ್ರೋಣ ಮಳೆಯಿಂದ ಕೇರಳ ತತ್ತರಿಸಿದ್ದು, ಇಡುಕಿ ಜಿಲ್ಲೆಯ ಮೂನ್ನಾರ್ ಪರ್ವತಸ್ತೋಮದ ಪೆಟ್ಟಿಮುಡಿಯಲ್ಲಿ ಮೊನ್ನೆ ನಸುಕಿನಲ್ಲಿ ಭೂಕುಸಿತಗಳು ಸಂಭವಿಸಿದ್ದು, ಮೃತರ ಸಂಖ್ಯೆ 28ಕ್ಕೇರಿದೆ.
ಈ ದುರ್ಘಟನೆಯಲ್ಲಿ ಸುಮಾರು 50 ಮಂದಿ ನಾಪತ್ತೆಯಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಗುಡ್ಡ ಮತ್ತು ಭೂಕುಸಿತಗಳಿಂದಾಗಿ ಕಣ್ಣನ್ ದೇವನ್ ಚಹಾ ತೋಟಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಒಂದೇ ಕುಟುಂಬದ 80ಕ್ಕೂ ಹೆಚ್ಚು ಕಾರ್ಮಿಕರು ಮಣ್ಣಿನ ಆವಶೇಷಗಳಡಿ ಸಿಲುಕಿದರು.
ಈವರೆಗೆ 28 ಮೃತ ದೇಹಗಳನ್ನು ಹೊರ ತೆಗೆಯಲಾಗಿದ್ದು, ಗಾಯಾಳುಗಳಿಗೆ ಚಿಕಿತ್ಸೆ ಮುಂದುವರೆಸಲಾಗಿದೆ. ಇಡುಕ್ಕಿ ಜಿಲ್ಲೆಯ ರಾಜಮಾಲಾ ಮತ್ತು ಮೂನ್ನಾರ್ ಪರ್ವತ ಶ್ರೇಣಿಯ ಪೆಟ್ಟಿಮುಡಿಯ ಹಲವೆಡೆ ನಿನ್ನೆ ಕೂಡ ಧಾರಾಕಾರ ಮಳೆಯಿಂದ ಭೂಕುಸಿತಗಳು ಸಂಭವಿಸಿವೆ.
ಕೇರಳದ ಹಲವು ಜಿಲೆಗಳಲ್ಲಿ ವರುಣಾಸುರನ ಆರ್ಭಟ ತೀವ್ರಗೊಂಡಿದೆ. ಇಡುಕ್ಕಿ, ಪಾಲಾಕ್ಕಾಡ್, ತ್ರಿಶೂರ್, ವಯನಾಡ್, ಕಣ್ಣೂರು, ಗುರುವಾಯೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಭಾರೀ ಮಳೆ, ಭೀಕರ ಪ್ರವಾಹ ಮತ್ತು ಭೂಕುಸಿತಗಳು ಸಂಭವಿಸಿದ್ದು, ಸಾವು-ನೋವಿ ಮತ್ತು ಭಾರೀ ಹಾನಿಯ ವರದಿಯಾಗಿದೆ.
ಮುಂದಿನ 24 ತಾಸುಗಳಲ್ಲಿ ಕೇರಳದ ವಿವಿಧೆಡೆ ಭಾರೀ ಮಳೆಯಾಗುವ ಬಗ್ಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
















ಇನ್ನಷ್ಟು ಸುದ್ದಿಗಳು
‘ಈದುಲ್ ಫಿತ್ರ್’ ಖುತ್ಬಾ ವೇಳೆ ಇಮಾಮ್ ಕುಸಿದು ಬಿದ್ದು ಮೃತ್ಯು
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್ಸಿ
ಕರ್ನಾಟಕ ಸರ್ಕಾರವನ್ನು ಬೀಳಿಸಲು ಕೇರಳ ದೇವಸ್ಥಾನದಲ್ಲಿ ಮೃಗ ಬಲಿ – ದೇವಸ್ವಂ ಸಚಿವರು ಹೇಳಿದ್ದೇನು?
ಮಣಿಪುರ: ಚುನಾವಣೆ ಬಹಿಷ್ಕಾರ ಕ್ಕೆ ಕರೆ ಕೊಟ್ಟ ಕುಕಿ!!
ಬಿಗ್ ಬಾಸ್ ನ ಒಳಗೇನು? ತನಿಖೆಗೆ ಆದೇಶಿಸಿದ ಹೈಕೋರ್ಟ್
ರಹೀಮ್ ವಿಮೋಚನಾ ಅಭಿಯಾನ: ಮೊಬೈಲ್ ಆಪ್ ಸಿದ್ಧಪಡಿಸಿದವರರು ಇವರು
ಬಡತನದಿಂದ ಬಳಲುತ್ತಿರುವ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ
ರಿಯಾಜ್ ಮೌಲವಿ ಹತ್ಯೆ ಪ್ರಕರಣದ ನ್ಯಾಯಾಧೀಶರ ವರ್ಗಾವಣೆಗೆ ಕೆಟಿ ಜಲೀಲ್ ಟೀಕೆ
ರಿಯಾಜ್ ಮೌಲ್ವಿ ಹತ್ಯೆ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶ ವರ್ಗಾವಣೆ