janadhvani

Kannada Online News Paper

ಆರೋಗ್ಯ ಸಚಿವ ಶ್ರೀ ರಾಮುಲುಗೆ ಕೊರೋನಾ ಪಾಸಿಟಿವ್

ಬೆಂಗಳೂರು: ರಾಜ್ಯ ಆರೋಗ್ಯ ಸಚಿವ ಶ್ರೀ ಬಿ ಶ್ರೀರಾಮುಲು ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದಾಗಿ ಸಚಿವರು ಸ್ವತಃ ಟ್ವಿಟ್ಟರ್ ಮೂಲಕ ಮಾಹಿತಿ ನೀಡಿದ್ದಾರೆ.

30 ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಜನರ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸುವ ಸಮಯದಲ್ಲಿ ಕೊರೋನಾ ಪಾಸಿಟಿವ್ ಬಂದಿರುವುದಾಗಿ ತಿಳಿಸಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುವುದಾಗಿ ಮಾಹಿತಿ ನೀಡಿದ್ದಾರೆ.

ಸಚಿವರು ಇತ್ತೀಚೆಗಷ್ಟೇ “ಕರ್ನಾಟಕವನ್ನು ಕೋವಿಡ್ ನಿಂದ ದೇವರೇ ಕಾಪಾಡಬೇಕು” ಎಂದು ಹೇಳಿ ಸುದ್ದಿಯಾಗಿದ್ದರು.

error: Content is protected !! Not allowed copy content from janadhvani.com