ನವದೆಹಲಿ: ಕೇರಳದ ಕೋಯಿಕ್ಕೋಡ್ ಕರಿಪೂರ್ ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ವಿಮಾನ ದುರಂತ ಸಂದರ್ಭದಲ್ಲಿ ಮಲ್ಲಪುರಂ ಜನರು ತೋರಿದ ಕರುಣೆ ಹಾಗೂ ಮಾನವೀಯತೆಯನ್ನು ಏರ್ ಇಂಡಿಯಾ ಎಕ್ಸ್ ಪ್ರೆಸ್ ಸಂಸ್ಥೆ ಸ್ಮರಿಸಿದೆ. ಈ ವಿಮಾನ ಅಪಘಾತ ಸಂದರ್ಭದಲ್ಲಿ ಇಬ್ಬರು ಪೈಲಟ್ ಗಳು ಸೇರಿದಂತೆ 18 ಮಂದಿ ಪ್ರಯಾಣಿಕರು ಮೃತಪಟ್ಟಿದ್ದರು.
ಅನಿಶ್ಚಿತ ಘಟನೆಯ ಸಮಯದಲ್ಲಿ ಕರುಣೆ ಹಾಗೂ ಮಾನವೀಯತೆಯನ್ನು ತೋರಿರುವ ಮಲ್ಲಪುರಂ ಜನರಿಗೆ ಚಿರಋಣಿಯಾಗಿರುವುದಾಗಿ ಎರ್ ಇಂಡಿಯಾ ಎಕ್ಸ್ ಪ್ರೆಸ್ ಸಂಸ್ಥೆ ಟ್ವೀಟ್ ಮಾಡಿದೆ.
ಇದು ಕೇವಲ ಧೈರ್ಯವಲ್ಲ, ಮಾನವೀಯತೆ ಮೂಲಕ ಜನರ ಜೀವವನ್ನು ಉಳಿಸಲಾಗಿದೆ. ತಮ್ಮ ಪ್ರಾಣವನ್ನು ಲೆಕ್ಕಿಸದೆ ಹಲವು ಜನರ ಪ್ರಾಣ ಉಳಿಸಿರುವ ಮಲ್ಲಪುರಂ ಜನರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಏರ್ ಇಂಡಿಯಾ ಎಕ್ಸ್ ಪ್ರೆಸ್ ಸಂಸ್ಥೆ ತಿಳಿಸಿದೆ.
ವಿಮಾನ ದುರಂತ ಸಂದರ್ಭದಲ್ಲಿ ಕೊರೋನಾ ಆತಂಕವನ್ನೂ ಲೆಕ್ಕಿಸದೆ, ಆಂಬುಲೆನ್ಸ್ , ಪೊಲೀಸ್ ವಾಹನಗಳಿಗೆ ಕಾಯದೇ ತಮ್ಮದೇ ವಾಹನಗಗಳಲ್ಲಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿ, ಪ್ರಾಣ ಸಂರಕ್ಷಿಸಲು ಹರಸಾಹಸ ಪಟ್ಟ ಮಲಪ್ಪುರಂ ನಿವಾಸಿಗಳ ಮಾನವೀಯತೆ ವ್ಯಾಪಕ ಪ್ರಶಂಸೆಗೆ ಕಾರಣವಾಗಿದೆ.ಜಾತಿ,ಧರ್ಮ ಬೇದವಿಲ್ಲದೆ ಎಲ್ಲರೂ ಒಗ್ಗಟ್ಟಾಗಿ ರಕ್ಷಣಾ ಕಾರ್ಯದಲ್ಲಿ ತೊಡಗಿದ ಮಲಪ್ಪುರಂ ನಿವಾಸಿಗಳು ಇಡೀ ದೇಶಕ್ಕೇ ಮಾದರೀ ಯೋಗ್ಯರಾಗಿದ್ದಾರೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ